Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎ3ರಿಂದ ʼಸಮುದ್ರ ನಾಲಗೆʼಯಿಂದ...

ಎ3ರಿಂದ ʼಸಮುದ್ರ ನಾಲಗೆʼಯಿಂದ ರಚಿಸಲ್ಪಟ್ಟ ಶಿಲ್ಪ ಕಲಾಕೃತಿಗಳ ಪ್ರದರ್ಶನ

31 March 2023 5:20 PM IST
share
ಎ3ರಿಂದ ʼಸಮುದ್ರ ನಾಲಗೆʼಯಿಂದ ರಚಿಸಲ್ಪಟ್ಟ ಶಿಲ್ಪ ಕಲಾಕೃತಿಗಳ ಪ್ರದರ್ಶನ

ಉಡುಪಿ, ಮಾ.31: ಹಿರಿಯ ಕಲಾವಿದ ಸಕು ಪಾಂಗಾಳ ಅವರಿಂದ ಸಮುದ್ರ ನಾಲಗೆ ಎಂದೇ ಕರೆಯಲ್ಪಡುವ ಕಪ್ಪೆ ಬಂಡಾಸೆ ಮೀನಿನ ನಿರುಪಯುಕ್ತ ಚಿಪ್ಪಿನಿಂದ ರಚಿಸಲ್ಪಟ್ಟ ಶಿಲ್ಪ ಕಲಾಕೃತಿ(ರಿಲೀಫ್)ಗಳ ಪ್ರದರ್ಶನವನ್ನು ಅಂಬಲಪಾಡಿಯ ಗ್ಯಾಲರಿ ಶ್ರೀ-ರಾಜ್-ರಾಮ್‌ನಲ್ಲಿ ಎ.3ರಿಂದ 9ರವರೆಗೆ ಹಮ್ಮಿಕೊಳ್ಳಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಕೆ. ರಾಮಚಂದ್ರ, ಇವರು ಈ ಮಾಧ್ಯಮದಿಂದ ಶಿಲ್ಪ ಕಲಾಕೃತಿ ರಚಿಸಿ ಪ್ರದರ್ಶಿಸಿದ ಮೊದಲ ಚಿತ್ರಕಲಾವಿದರೆನಿಸಿದ್ದಾರೆ. ಈ ಪ್ರದರ್ಶದಲ್ಲಿ ಒಟ್ಟು 30 ಕಲಾಕೃತಿ ಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ತಿಳಿಸಿದರು.

ಎ.3ರಂದು ಬೆಳಗ್ಗೆ 10.30ಕ್ಕೆ ಪ್ರದರ್ಶನವನ್ನು ಕುಂದಾಪುರ ಗುರುಕುಲ ಪಬ್ಲಿಕ್ ಸ್ಕೂಲ್‌ನ ಮ್ಯಾನೇಜಿಂಗ್ ಟ್ರಸ್ಟಿ ಅನುಪಮ ಎಸ್.ಶೆಟ್ಟಿ ಉದ್ಘಾಟಿಸ ಲಿರುವರು. ಸಮಾರಂಭದಲ್ಲಿ ರವಿಚಂದ್ರ ಬಳಗದವರಿಂದ ಡೊಲ್ಲು ವಾದನ ನಡೆಯಲಿದೆ. ಪ್ರದರ್ಶನವು ಎ.3ರಿಂದ ಎ.9ರವರೆಗೆ ಅಪರಾಹ್ನ 2ಗಂಟೆಯಿಂದ ಸಂಜೆ 7ಗಂಟೆಯವರೆಗೆ ತೆರೆದಿರುತ್ತದೆ. ಇದೇ ಪ್ರದರ್ಶನ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಎ.14ರಿಂದ 16ರವರೆಗೆ ನಡೆಯಲಿದೆ.

ಕಲಾವಿದ ಸಕು ಪಾಂಗಾಳ ಮಾತನಾಡಿ, ಈ ವಸ್ತುವಿನಿಂದಲೇ ಮಾನವನ ಬೇರೆ ಬೇರೆ ಭಾಗದ ಮೂಳೆಗಳ ರಚನೆಗಾಗಿ 1997ರಲ್ಲಿ ಕರ್ನಾಟಕ ಸರಕಾರ ದಿಂದ ರಾಜ್ಯಮಟ್ಟದ ಪ್ರಶಸ್ತಿ ದೊರೆತಿತ್ತು. ಅಲ್ಲಿಂದ ನಾನು ಸಮುದ್ರ ತೀರದಲ್ಲಿ ಈ ವಸ್ತುಗಳನ್ನು ಹುಡುಕಿ ತಂದು ಕಲಾಕೃತಿಗಳನ್ನು ರಚಿಸಿದ್ದೇನೆ ಎಂದು ಹೇಳಿದರು.

ಈ ಪ್ರದರ್ಶನದಲ್ಲಿ ಮಾರಾಟವಾದ ಶಿಲ್ಪಕಲಾಕೃತಿಗಳ ಮೊತ್ತವನ್ನು ಉಡುಪಿ ಜಿಲ್ಲೆಯ ಗ್ರಾಮೀಣ ಕನ್ನಡ ಮಾಧ್ಯಮ ಶಾಲೆಯ ಅಗತ್ಯವಿರುವ ವಿದ್ಯಾರ್ಥಿ ಗಳಿಗೆ ಆಂಗ್ಲ ಭಾಷೆಯ ನಿಘಂಟು ಉಚಿತವಾಗಿ ವಿತರಣೆಗಾಗಿ ಬಳಸಿಕೊಳ್ಳ ಲಾಗುವುದು ಎಂದು ಅವರು ತಿಳಿಸಿದರು.

share
Next Story
X