ಜೂನ್ 5ರಂದು ಕಾಂಡ್ಲಾ ಸಸಿ ನೆಡುವ ಕಾರ್ಯಕ್ರಮ
ಉಡುಪಿ, ಜೂ.3: ಅರಣ್ಯ ಇಲಾಖೆ ಮಂಗಳೂರು ವೃತ್ತ, ಕುಂದಾಪುರ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜೂನ್ 5ರಂದು ಬೆಳಗ್ಗೆ 9ರಿಂದ 12ರವರೆಗೆ ಕುಂದಾಪುರ ಕೋಡಿಯ ಶ್ರೀ ನಾಗಜಟ್ಟಿ ಗೇಶ್ವರ ದೇವಸ್ಥಾನದ ಸಮೀಪ ಕಾಂಡ್ಲಾ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story