ಕಾರು ಅಪಘಾತ: ಗಾಯಾಳು ಮೃತ್ಯು
ಬ್ರಹಾವರ : ಹಲುವಳ್ಳಿ ಗ್ರಾಮದ ದಾರಳಕಂಬ್ಳಾ ಎಂಬಲ್ಲಿರುವ ಆದಿತ್ಯ ಗೇರು ಬೀಜ ಪ್ಯಾಕ್ಟರಿ ಎದುರು ಸಂಭವಿಸಿದ ಅಪಘಾತದಲ್ಲಿ ಗಾಯ ಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಟಿ.ಎಂ.ಮಲ್ಲಿಕಾರ್ಜುನಯ್ಯ(71) ಎಂದು ಗುರುತಿಸಲಾಗಿದೆ. ಇವರು ಹೃದಯ ಕಾಯಿಲೆಯ ತಪಾಸಣೆ ಗಾಗಿ ಮೇ 29ರಂದು ತನ್ನ ಮಗ ಮತ್ತು ಮಗಳೊಂದಿಗೆ ಕಾರಿನಲ್ಲಿ ಮಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ನಾಯಿಯೊಂದು ಕಾರಿಗೆ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನಯ್ಯ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜೂ.5ರಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story