ಪಿಂಚಣಿ ಜಮೆಗೆ ಆಧಾರ್ ಜೋಡಣೆ ಕಡ್ಡಾಯ
ಉಡುಪಿ: ಅಂಚೆ ಇಲಾಖೆಯ ವತಿಯಿಂದ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಪಿಂಚಣಿ ವಿತರಣೆಯನ್ನು ಪ್ರಸಕ್ತ ಸಾಲಿನ ಜೂನ್ನಿಂದಲೇ ಆಧಾರ್ ಆಧಾರಿತ ವ್ಯವಸ್ಥೆಯಡಿ ಪ್ರಾರಂಭಿಸಲಾಗುತ್ತಿದೆ.
ಅಂಚೆ ಇಲಾಖೆಯಲ್ಲಿನ ಉಳಿತಾಯ ಖಾತೆಗೆ ಪಿಂಚಣಿ ಜಮೆಯಾಗಲು ಫಲಾನುಭವಿಗಳು ತಮ್ಮ ಹತ್ತಿರದ ಅಂಚೆ ಕಚೇರಿ ಅಥವಾ ಪೋಸ್ಟ್ ಮ್ಯಾನ್ರನ್ನು ಸಂಪರ್ಕಿಸಿ, ಆಧಾರ್ ಸಂಖ್ಯೆಯನ್ನು ಜೋಡಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story