Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಯನಾಡ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ...

ವಯನಾಡ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಯುದ್ಧ ಸಾರಿದ ಎಡರಂಗ

ಸಮರೋಪಾದಿ ವ್ಯವಸ್ಥಿತ ಪ್ರಚಾರಕ್ಕೆ ಮಣಿಯುವರೇ ಕಾಂಗ್ರೆಸ್ ಅಧ್ಯಕ್ಷ?

ವಾರ್ತಾಭಾರತಿವಾರ್ತಾಭಾರತಿ3 April 2019 5:07 PM IST
share
ವಯನಾಡ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಯುದ್ಧ ಸಾರಿದ ಎಡರಂಗ

ವಯನಾಡ್, ಎ.3: ಅಮೇಠಿ ಹೊರತಾಗಿ ಕೇರಳದ ವಯನಾಡ್ ನಲ್ಲೂ ಲೋಕಸಭಾ ಚುನಾವಣೆ ಸ್ಪರ್ಧಿಸಲು ನಿರ್ಧರಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್  ಗಾಂಧಿ  ರಾಜ್ಯದ ಆಡಳಿತ ಸಿಪಿಎಂ ನಡೆಸುವ ವ್ಯವಸ್ಥಿತ ಪ್ರಚಾರಕ್ಕೆ ಸರಿಸಾಟಿಯಾಗಿ ನಿಲ್ಲಬಹುದೇ ಎಂಬ ಪ್ರಶ್ನೆಯಿದೆ.

ರಾಹುಲ್ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಂಬ ಘೋಷಣೆಯಾದಾಗಿನಿಂದ ಅಲ್ಲಿಗೆ ಸಾಕಷ್ಟು ಹಣ, ಗಮನ ಹಾಗೂ ಕಾರ್ಯಕರ್ತರ  ಆಗಮನವಾಗುತ್ತಿದೆಯೆನ್ನುತ್ತಿವೆ ಮೂಲಗಳು. ಸಿಪಿಎಂ ತಳಮಟ್ಟದಲ್ಲಿ ರೂಪಿಸುವ ಹೋರಾಟಗಳು ಈ ಹಿಂದೆಯೂ ಫಲಿತಾಂಶಗಳನ್ನು ಬದಲಿಸಿರುವ ಉದಾಹರಣೆಗಳಿವೆ. ಸಿಪಿಎಂ ಈಗಾಗಲೇ ವಯನಾಡ್ ನಲ್ಲಿ ದೊಡ್ಡ ಮಟ್ಟದ ರ್ಯಾಲಿಗಳನ್ನು ಆಯೋಜಿಸಲು ಯೋಚಿಸುತ್ತಿದ್ದು ಅಲ್ಪಸಂಖ್ಯಾತ ಮುಸ್ಲಿಮರು ಮತ್ತು ಕ್ರೈಸ್ತರನ್ನು ಓಲೈಸಲು ಎಲ್ಲಾ ಕಸರತ್ತುಗಳನ್ನು ನಡೆಸುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಿಪಿಎಂ ರಾಷ್ಟ್ರೀಯ ನಾಯಕರುಗಳಾದ ಸೀತಾರಾಂ ಯಚೂರಿ ಹಾಗೂ ಪ್ರಕಾಶ್ ಕಾರಟ್ ಅವರ ಹಲವು ರ್ಯಾಲಿಗಳನ್ನು ಆಯೋಜಿಸಲು ಪಕ್ಷ ಚಿಂತಿಸುತ್ತಿದೆ.

ಮಾಜಿ ಸಿಎಂ ಹಾಗೂ ಪ್ರಭಾವಿ ಕಮ್ಯುನಿಸ್ಟ್ ನಾಯಕ 96 ವರ್ಷದ ವಿ.ಎಸ್. ಅಚ್ಯುತಾನಂದನ್ ಅವರನ್ನೂ ರ್ಯಾಲಿಗಳಲ್ಲಿ ಹಾಜರಿರುವಂತೆ ಪಕ್ಷ ಮನವಿ ಮಾಡಿದೆ. ವಯಸ್ಸಾಗಿರುವ ಹೊರತಾಗಿಯೂ ಅಚ್ಯುತಾನಂದನ್ ಅವರ ವಾಕ್ಚಾತುರ್ಯ  2016 ಚುನಾವಣೆಗಳಲ್ಲಿ ಪಕ್ಷಕ್ಕೆ 140ರಲ್ಲಿ 90 ಸ್ಥಾನಗಳನ್ನು ಗೆಲ್ಲಿಸಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿತ್ತೆಂಬುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

“ನಾವು ರಾಹುಲ್ ಗಾಂಧಿಯನ್ನು ಸೋಲಿಸಿದರೆ ಭಾರತದಲ್ಲಿ ಎಲ್ಲರೂ ಎದ್ದು ನಿಂತು ನಮಗೆ ಶುಭಾಶಯ ಹೇಳುತ್ತಾರೆ. ಇತಿಹಾಸ ಸೃಷ್ಟಿಸಲು ಇದು ಸಕಾಲ. ನಮ್ಮಂತಹ ಕಮ್ಯುನಿಸ್ಟರು ಕಾಣಿಸದ ಕ್ಷೇತ್ರಗಳಿಂದ ಮಾತ್ರ ಅವರು ಇಲ್ಲಿಯ ತನಕ ಹೋರಾಡಿದ್ದಾರೆ. ಈಗ ಅವರು ನಮ್ಮ ಬಳಿ ಬಂದಿದ್ದಾರೆ. ಕಮ್ಯುನಿಸ್ಟರು ಒಂದು ಭಿನ್ನ ಪಕ್ಷವೆಂದು ಹೇಳಿಕೊಂಡು ಅವರು ಈ ಜಾಗ ಬಿಡಬೇಕಿದೆ'' ಎಂದು ಮಂಗಳವಾರ ನಡೆದ ಪಕ್ಷ ಕಾರ್ಯಕರ್ತರ ಸಭೆಯಲ್ಲಿ ಕೇರಳ ಸಿಪಿಎಂ ಮುಖ್ಯಸ್ಥ ಕೊಡಿಯೇರಿ ಬಾಲಕೃಷ್ಣನ್ ಹೇಳಿದ್ದಾರೆ.

ಅವರ ಸೂಚನೆಯಂತೆ ಪಕ್ಷದ ಕಾರ್ಯಕರ್ತರು ಮುಖ್ಯವಾಗಿ ಮಹಿಳೆಯರು ಪ್ರತಿ ದಿನ ಕನಿಷ್ಠ 10 ಮನೆಗಳಿಗೆ ಪ್ರಚಾರ ನಿಮಿತ್ತ ಭೇಟಿಯಾಗಬೇಕು. ಇದರ ಹೊರತಾಗಿ ಇನ್ನೊಂದು ತಂಡ ನಾಲ್ಕು ದಿನಗಳಲ್ಲಿ ತಲಾ 50 ಮನೆಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಲಿದೆ. ಹಿಂದುಗಳು ಹಾಗೂ ಕ್ರೈಸ್ತರಿಗೆ ಪ್ರಮುಖ ಹಬ್ಬವಾಗಿರುವ ಹಾಗೂ ಈ ತಿಂಗಳಲ್ಲಿ ಬರಲಿರುವ ವಿಷು ಹಾಗೂ ಈಸ್ಟರ್ ಸಂದರ್ಭ ಪಕ್ಷ ದೊಡ್ಡ ಮಟ್ಟದ ಆಚರಣೆಗಳನ್ನು ನಡೆಸಲು ಚಿಂತಿಸಿದೆ,

ವಯನಾಡ್ ನ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಸಿಪಿಎಂ ಅಧಿಕಾರದಲ್ಲಿದೆ. ಆದರೆ  ಈ ಲೋಕಸಭಾ ಕ್ಷೇತ್ರದಲ್ಲಿ ವಯನಾಡ್ ಗಿಂತ ಮಲಪ್ಪುರಂ ಜಿಲ್ಲೆಯ ಹೆಚ್ಚು ಜನರಿದ್ದಾರೆ. ಮುಸ್ಲಿಂ ಬಾಹುಳ್ಯದ ಮಲಪ್ಪುರಂನಲ್ಲಿ ಕಾಂಗ್ರೆಸ್ ಮಿತ್ರ ಪಕ್ಷ ಐಯುಎಂಎಲ್  ಪ್ರಮುಖ ಶಕ್ತಿಯಾಗಿದೆ. ಈ ರೀತಿ ಹೇಳುವುದಾದರೆ ವಯನಾಡ್ ಕಾಂಗ್ರೆಸ್ ಭದ್ರಕೋಟೆ ಎನ್ನಬಹುದು.

ಕಳೆದ ಬಾರಿ ಇಲ್ಲಿಂದ ಕಾಂಗ್ರೆಸ್ ಪಕ್ಷದ ಶಾನವಾಝ್ ಗೆದ್ದಿದ್ದರು, ಅವರು ಕಳೆದ ವರ್ಷ ನಿಧನರಾಗಿದ್ದಾರೆ. ಆದರೆ 2009ರಲ್ಲಿ 1.5 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಅವರು ಕಳೆದ ಬಾರಿ 20,000 ಮತಗಳ ಅಂತರದಿಂದಷ್ಟೇ ಗೆದ್ದಿದ್ದರು. ಆದರೆ ಆಗ ಅವರ ವಿರುದ್ಧ ಆಡಳಿತ ವಿರೋಧಿ ಅಲೆಯಿತ್ತು.

ಏನೇ ಆಗಲಿ ವಯನಾಡ್ ನಲ್ಲಿ ಸಿಪಿಎಂ ರಾಹುಲ್ ಅವರಿಂದ ಕಠಿಣ ಹೋರಾಟ ಎದುರಿಸಲಿದೆ ಎಂಬುದಂತೂ ಸ್ಪಷ್ಟ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X