Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪರಿಶಿಷ್ಟ ಗುತ್ತಿಗೆದಾರರು...

ಪರಿಶಿಷ್ಟ ಗುತ್ತಿಗೆದಾರರು ಭಾಗವಹಿಸುವುದನ್ನು ತಡೆಯಲು ಪ್ಯಾಕೇಜ್ ಟೆಂಡರ್

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಅಕ್ರಮ

ಜಿ.ಮಹಾಂತೇಶ್ಜಿ.ಮಹಾಂತೇಶ್22 Nov 2022 8:27 AM IST
share
ಪರಿಶಿಷ್ಟ ಗುತ್ತಿಗೆದಾರರು ಭಾಗವಹಿಸುವುದನ್ನು ತಡೆಯಲು ಪ್ಯಾಕೇಜ್ ಟೆಂಡರ್
ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಅಕ್ರಮ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ, ದುರಸ್ತಿ ಮತ್ತು ನವೀಕರಣಕ್ಕೆ ಸಂಬಂಧಿ

ಸಿದಂತೆ 29.70 ಕೋಟಿ ರೂ. ಮೊತ್ತದ ಕಾಮಗಾರಿಗಳ ಗುತ್ತಿಗೆ ಟೆಂಡರ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಗುತ್ತಿಗೆದಾರರು ಭಾಗವಹಿಸುವುದನ್ನು ತಪ್ಪಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗವು ಪ್ಯಾಕೇಜ್ ಟೆಂಡರ್ ಕರೆದಿರುವುದು ಇದೀಗ ಬಹಿರಂಗವಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳ ಟೆಂಡರ್‌ನಲ್ಲಿ ಅಕ್ರಮ ನಡೆಯುತ್ತಿದೆ ಎಂದು ಕಾರ್ಪೊರೇಟ್ ಕಂಪೆನಿ ಗಳು ದೂರು ಸಲ್ಲಿಸಿದ್ದರೂ ಸಚಿವ ಕೆ ಸುಧಾಕರ್ ಅವರು ಯಾವುದೇ ಕ್ರಮಕೈಗೊಂಡಿಲ್ಲ. ಇದರ ಬೆನ್ನಲ್ಲೇ ಪ.ಜಾತಿ ಮತ್ತು ಪ.ಪಂಗಡ ಗುತ್ತಿಗೆದಾರರಿಗೆ ಅವಕಾಶ ಸಿಗದಂತೆ ಇಲಾಖೆಯ ಇಂಜಿನಿಯರಿಂಗ್ ವಿಭಾಗವು ಕರೆದಿರುವ ಟೆಂಡರ್ ಮುನ್ನೆಲೆಗೆ ಬಂದಿದೆ.

ಟೆಂಡರ್‌ನಲ್ಲಿ ಬೇರೆ ಬೇರೆ ಜಿಲ್ಲೆಯ ತಾಲೂಕಿನ ಕಾಮಗಾರಿಗಳನ್ನು ಒಂದುಗೂಡಿಸಿ ಟೆಂಡರ್ ಆಹ್ವಾನಿಸಿರುವ ಇಲಾಖೆಯ ಇಂಜಿನಿಯ ರಿಂಗ್ ವಿಭಾಗವು ಕೆಟಿಪಿಪಿ ಕಾಯ್ದೆ ಮತ್ತು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಬಿಲ್‌ಗಳ ಪಾವತಿ ಸಂಬಂಧ 2022ರ ಮೇ 11ರಂದು ಆರ್ಥಿಕ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಉಲ್ಲಂಘಿಸಿದೆ. ಈ ಸಂಬಂಧ ಮುಖ್ಯಮಂತ್ರಿಯ ಪ್ರ.ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಅವರಿಗೆ ಸಾಮಾಜಿಕ ಹೋರಾಟಗಾರ ಮರಿಲಿಂಗೇಗೌಡ ಮಾಲೀಪಾಟೀಲ್ ಎಂಬವರು ದಾಖಲೆ ಸಹಿತ ದೂರು ಸಲ್ಲಿಸಿದ್ದಾರೆ. ದೂರಿನ ಪ್ರತಿಯು ''the-file.in''ಗೆ ಲಭ್ಯವಾಗಿದೆ.

ರಾಮನಗರ, ಕನಕಪುರ, ಆನೇಕಲ್, ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ಬಾಗೇಪಲ್ಲಿ, ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಶಿಕಾರಿಪುರ, ಭದ್ರಾವತಿ, ತುಮಕೂರು, ಚಿತ್ರದುರ್ಗ, ತಿಪಟೂರು, ಪಾವಗಡ, ಕುಣಿಗಲ್, ಮೊಳಕಾಲ್ಮೂರು, ಚಾಮರಾಜನಗರ, ಕೊಳ್ಳೇಗಾಲ, ಎಚ್.ಡಿ ಕೋಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕುಂದಾಪುರ, ಹಾಸನ, ಅರಕಲಗೂಡು, ಅರಸೀಕೆರೆ, ಮಂಡ್ಯ, ಕೊಡಗು, ನಾಗಮಂಗಲ, ವೀರಾಜಪೇಟೆ, , ವಿಜಯಪುರ, ಬಾಲಗಕೋಟೆ, ಮುದ್ದೇಬಿಹಾಳ, ಇಂಡಿ, ಬೀಳಗಿ, ನವಲಗುಂದ, ರೋಣ, ಮುಂಡರಗಿಯಲ್ಲಿ ಒಟ್ಟಾರೆ 23.20 ಕೋಟಿ ರೂ. ಮೊತ್ತದ ಪ್ಯಾಕೇಜ್ ಟೆಂಡರ್‌ಅನ್ನು 2022ರ ಸೆ.19ರಂದೇ ಆಹ್ವಾನಿಸಿದೆ.

ಪ್ಯಾಕೇಜ್ ಟೆಂಡರ್ ಆಹ್ವಾನಿಸುವ ಮೂಲಕ ಎಸ್‌ಸಿ-ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಕೆಟಿಪಿಪಿ ಕಾಯ್ದೆಯಲ್ಲಿ ಕಲ್ಪಿಸಿದ್ದ ಮೀಸಲಾತಿ ನೀತಿಯನ್ನು ನೇರಾನೇರ ಉಲ್ಲಂಘಿಸಲಾಗಿದೆ ಎಂದು ಮಾಲೀಪಾಟೀಲ್ ಅವರು ಸಲ್ಲಿಸಿರುವ ದೂರಿನಲ್ಲಿ ಹೇಳಲಾಗಿದೆ.

‘ಎಸ್‌ಸಿ-ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಮೀಸಲಾತಿ ನೀಡಲು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಕರ್ನಾಟಕ ಪಾರದರ್ಶಕ ಕಾಯ್ದೆ 1999ಕ್ಕೆ ಸೂಕ್ತ ತಿದ್ದುಪಡಿ ತರಲಾಗಿದೆ. ಸರಕಾರಿ ಟೆಂಡರ್‌ಗಳಲ್ಲಿ ಪರಿಶಿಷ್ಟ ಜಾತಿ (ಶೇ.17.15), ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರಿಗೆ ಶೇ.24.1ರಷ್ಟು ಮೀಸಲಾತಿ ಒದಗಿಸಲಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ವಿಭಾಗವು ಆಹ್ವಾನಿಸಿರುವ ಟೆಂಡರ್ನಲ್ಲಿ ಉದ್ದೇಶಪೂರ್ವಕವಾಗಿ ಪ.ಜಾತಿ ಮತ್ತು ಪ.ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿಗಳು ಸಿಗದಂತೆ ಮಾಡಲಾಗಿದೆ. ಈ ಎಲ್ಲಾ ಕಾಮಗಾರಿಗಳನ್ನು ಪ್ಯಾಕೇಜ್ ಮಾದರಿಯಲ್ಲಿ ರೂಪಿಸಿರುವುದೇ ಇದಕ್ಕೆ ನಿದರ್ಶನ’ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯೊಳಗಿನ ತಾಲೂಕಿನ ಕಾಮಗಾರಿಗಳನ್ನು ಒಂದುಗೂಡಿಸಿ ಟೆಂಡರ್ ಆಹ್ವಾನಿಸಿದರೆ ಸರಕಾರವು ಎಸ್‌ಸಿ-ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದಂತಾಗುತ್ತದೆ. ಸಾರ್ವಜನಿಕ ಸಂಗ್ರಹಣೆಯಲ್ಲಿ ಕರ್ನಾಟಕ ಪಾರದರ್ಶಕ ಕಾಯ್ದೆ 1999ರ ತಿದ್ದುಪಡಿಯಂತೆ ಟೆಂಡರ್‌ಗಳಲ್ಲಿ ಪ.ಜಾತಿಗೆ ಶೇ.17.5, ಪ.ಪಂಗಡಗಳ ಗುತ್ತಿಗೆದಾರರಿಗೆ ಶೇ.24ರಷ್ಟು ಕಾಮಗಾರಿಗಳು ಸಂವಿಧಾನಬದ್ಧವಾಗಿ ದೊರಕಲಿದೆ ಎಂದು ದೂರಿನಲ್ಲಿ ಸರಕಾರದ ಗಮನಕ್ಕೆ ತರಲಾಗಿದೆ.

ಸುತ್ತೋಲೆಯಲ್ಲೇನಿದೆ?

ಸಾರ್ವಜನಿಕ ಸಂಗ್ರಹಣೆಗಳ ಪ್ಲ್ಯಾನಿಂಗ್, ಪ್ಯಾಕೇಜಿಂಗ್ ಮತ್ತು ಶೆಡ್ಯೂಲಿಂಗ್ ಹಾಗೂ ಅನುದಾನ ಲಭ್ಯಗೊಳಿಸುವ ಬಗ್ಗೆ ತಿಳಿಸಿರುವಂತೆ ಕಾರ್ಯಯೋಜನೆಯ ಅನುಷ್ಠಾನವನ್ನು ಗಮನದಲ್ಲಿಟ್ಟು ಕೊಂಡು ಪ್ಯಾಕೇಜ್ ಮಾಡಬೇಕು. ಅದರಂತೆ ಪ್ಯಾಕೇಜಿಂಗ್ ಮಾಡುವ ಸಂದರ್ಭದಲ್ಲಿ ತಾಲೂಕು ಮಟ್ಟದಲ್ಲಿ ಅನುಷ್ಠಾನ ಗೊಳಿಸುತ್ತಿರುವ ಕಾಮಗಾರಿಗಳ ಪ್ಯಾಕೇಜ್ ಮೊತ್ತವನ್ನು ಗರಿಷ್ಠ 100.00 ಲಕ್ಷ ರೂ.ಗಳಿಗೆ ಸೀಮಿತಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಅದೇ ರೀತಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 9ರ ಅನ್ವಯ ಸಂಗ್ರಹಣಾ ಪ್ರಾಧಿಕಾರವು ಟೆಂಡರ್ ಆಹ್ವಾನಿಸುವ , ಅಂಗೀಕರಿಸುವ ಪ್ರಾಧಿಕಾರಗಳನ್ನು ನೇಮಕ ಮಾಡಬೇಕಾಗುತ್ತದೆ. ಈ ರೀತಿ ನೇಮಕಗೊಂಡ ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಾಧಿಕಾರವು ಟೆಂಡರ್ ಕರೆಯಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಆದರೆ, ಇದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗವು ಉಲ್ಲಂಘಿಸಿದೆ ಎಂದು ದೂರಿರುವ ಮರಿಲಿಂಗೇಗೌಡ ಮಾಲೀಪಾಟೀಲ್ ‘ಈ ಎಲ್ಲ ಕಾಮಗಾರಿಗಳನ್ನು ಒಟ್ಟುಗೂಡಿಸಿ ಟೆಂಡರ್ ಆಹ್ವಾನಿಸಿರುವುದು ಆರ್ಥಿಕ ವಾಗಿ ಸಬಲರಾಗಿರುವ ಕೆಲವೇ ಕೆಲವು ಗುತ್ತಿಗೆದಾರರು ಮಾತ್ರ ಟೆಂಡರ್‌ನಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಲಾಗಿದೆ. ಅವರಿಗಷ್ಟೇ ಕಾಮಗಾರಿ ಸಿಗುವಂತೆ ಮಾಡುವ ಪೂರ್ವ ನಿಯೋಜಿತ ಯೋಜನೆಯ ಟೆಂಡರ್ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ದೂರಿನಲ್ಲಿ ವಿವರಿಸಿದ್ದಾರೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X