ಅನುಮೋದನೆಯಿಲ್ಲದ 465 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ
-

ಬೆಂಗಳೂರು, ಜ.15: ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜಿಸಿದ್ದ ಯೋಜನಾ ಮೊತ್ತವನ್ನು ಸರಕಾರದ ಅನುಮೋದನೆ ಪಡೆಯದೇ ಮತ್ತು ನಿಯಮ ಉಲ್ಲಂಘಿಸಿ 465 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ.
ನಾರಾಯಣಪುರ ಎಡದಂಡೆ ಕಾಲು ವೆಯ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸುವ ಉದ್ದೇಶದಿಂದ ಕಾಲುವೆ ವಿಸ್ತರಣೆ, ನವೀಕರಣ ಮತ್ತು ಆಧುನೀಕರಣ ಪ್ರಸ್ತಾವ, ಅಂದಾಜು ಮೊತ್ತವನ್ನು ಎರಡೆರಡು ಬಾರಿ ಪರಿಷ್ಕರಿಸಿರುವ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳು ಬಹುದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಈ ಕುರಿತು "the-file.in' 500ಕ್ಕೂ ಹೆಚ್ಚು ಪುಟಗಳನ್ನೊಳಗೊಂಡಿರುವ ಸಮಗ್ರ ಕಡತವನ್ನು ಆರ್ಟಿಐ ಅಡಿಯಲ್ಲಿ ಪಡೆದುಕೊಂಡಿದೆ.
ಅಲ್ಲದೆ ಜಲಸಂಪನ್ಮೂಲ ಇಲಾಖೆ ಮತ್ತು ಇದರ ಅಡಿಯಲ್ಲಿ ಬರುವ ಕೃಷ್ಣ ಭಾಗ್ಯ ಜಲನಿಗಮದ ಅಧಿಕಾರಿಗಳು ಸರಕಾರವನ್ನೂ ಕತ್ತಲಲ್ಲಿಟ್ಟು ನೂರಾರು ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದು ಕೂಡ ಬಹಿರಂಗವಾಗಿದೆ. ಆದರೂ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಈ ಪ್ರಕರಣದತ್ತ ಗಮನಹರಿಸಿಲ್ಲ ಎಂದು ತಿಳಿದು ಬಂದಿದೆ.
ಎನ್ಆರ್ಬಿಸಿ ಎಡದಂಡೆ ಕಾಲುವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಮೊತ್ತಕ್ಕೆ ಅನುಮೋದನೆ ಕೋರುವ ಸಂಬಂ‘ ಜಲಸಂಪನ್ಮೂಲ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವವನ್ನು ಪರಿಶೀಲಿಸಿರುವ ಅರ್ಥಿಕ ಇಲಾಖೆಯು, ಈ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆಎಂದು ಅಭಿಪ್ರಾಯಪಟ್ಟಿರುವುದು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳಿಗೆ ಹೆಚ್ಚಿನಬಲ ತಂದುಕೊಟ್ಟಿದೆ.
ಜಲಸಂಪನ್ಮೂಲ ಇಲಾಖೆಯ ಪ್ರಸ್ತಾವದಲ್ಲೇನಿತ್ತು?
ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ, ಹುಣಸಗಿ ಶಾಖಾ ಕಾಲುವೆ, ಶಹಾಪೂರ ಶಾಖಾ ಕಾಲುವೆ, ಮುಡಬಾಳ ಶಾಖಾ ಕಾಲುವೆ, ಜೇವರ್ಗಿ ಶಾಖಾ ಕಾಲುವೆ ಹಾಗೂ ಇಂಡಿ ಶಾಖಾ ಕಾಲುವೆಯ 0.00 ಕಿ.ಮೀ. ನಿಂದ 64.00 ಕಿ.ಮೀ. ವರೆಗೆ ಹಾಗೂ ಈ ಶಾಖಾ ಕಾಲುವೆಗಳ ಅಡಿ ಬರುವ ಡಿಸ್ಟ್ರಿಬ್ಯೂಟರಿ ಹಾಗೂ ಲ್ಯಾಟರಲ್/ಡಿಪಿಒಗಳಿಗೆ ಮಾತ್ರ ಸ್ಕಾಡಾ ಒಂದನೇ ಹಂತದ ಹಾಗೂ ಎರಡನೇ ಹಂತದ ಸ್ವಯಂಚಾಲಿತ ಸ್ಕಾಡಾ ಗೇಟುಗಳ ಅಳವಡಿಕೆಗೆ ಮಾತ್ರ ಪರಿಗಣಿಸಲಾಗಿದೆ.
ಹಾಗೆಯೇ ಇಂಡಿ ಶಾಖಾ ಕಾಲುವೆಯ 64.00 ಕಿ.ಮೀ.ನಿಂದ 172.00 ಕಿ ಮೀವರೆಗೆ ಹಾಗೂ ಅದರಡಿ ಬರುವ ಡಿಸ್ಟ್ರಿಬ್ಯೂಟರಿ ಹಾಗೂ ಲ್ಯಾಟರಲ್ /ಡಿಪಿಒಗಳಿಗೆ ಸ್ವಯಂ ಚಾಲಿತ ಸ್ಕಾಡಾ ಗೇಟುಗಳ ಅಳವಡಿಕೆಯು ಪರಿಗಣಿಸಲಾಗಿರುವುದಿಲ್ಲ. ಸ್ಕಾಡಾ ಎರಡನೇ ಹಂತದ ಅಂದಾಜು ಪಟ್ಟಿಗೆ ಅನುಮೋದನೆ ಪಡೆಯುವ ಸಮಯದಲ್ಲಿ ಇಂಡಿ ಶಾಖಾ ಕಾಲುವೆಯ 64.00 ಕಿ.ಮೀ.ನಿಂದ 172.00 ಕಿ.ಮೀ.ವರೆಗೆ ಹಾಗೂ ಅದರಡಿಬರುವ ಡಿಸ್ಟ್ರಿಬ್ಯೂಟರಿ ಹಾಗೂ ಲ್ಯಾಟರಲ್ /ಡಿಪಿಒಗಳಿಗೆ ಸ್ವಯಂಚಾಲಿತ ಸ್ಕಾಡಾ ಅಳವಡಿಕೆಯನ್ನು ಪರಿಗಣಿಸಲಾಗಿದೆ.
ಇದರಿಂದ ನಾರಾಯಣಪುರ ಎಡದಂಡೆ ಕಾಲುವೆಯ ಇಆರ್ಎಂ ಕಾಮಗಾರಿಯ ಅಂದಾಜು ಮೊತ್ತದಲ್ಲಿ 465.02 ಕೋಟಿ ರೂ. ಹೆಚ್ಚುವರಿಯಾಗಿದ್ದು ಮೂಲ ಅಂದಾಜು ಪಟ್ಟಿ ತಯಾರಿಕೆಯಲ್ಲಿ ಯಾವುದೇ ಲೋಪದೋಷವಾಗಿರುವುದಿಲ್ಲ ಎಂದು ಜಲಸಂಪನ್ಮೂಲ ಇಲಾಖೆಯು ಸಮಜಾಯಿಷಿ ನೀಡಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.
ಆದರೆ ಅರ್ಥಿಕ ಇಲಾಖೆಯು ಈ ಸಮಜಾಯಿಷಿಯನ್ನು ಒಪ್ಪಿಲ್ಲ. ಬದಲಿಗೆ 465 ಕೋಟಿ ರೂ. ಹೆಚ್ಚುವರಿ ಮೊತ್ತಕ್ಕೆ ಸರಕಾರದ ಅನುಮೋದನೆ ಪಡೆಯದೇ ಗುತ್ತಿಗೆ ನೀಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯ ನೀಡಿರುವುದು ಈ ಪ್ರಕ್ರಿಯೆಯಲ್ಲಿ ‘್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷ್ಯವನ್ನು ಒದಗಿಸಿದಂತಾಗಿದೆ.
ಆರ್ಥಿಕ ಇಲಾಖೆ ನೀಡಿರುವ ಅಭಿಪ್ರಾಯದಲ್ಲೆೇನಿದೆ?
ಪ್ರಸ್ತಾವವನ್ನು ಪರಿಶೀಲಿಸಲಾಗಿದೆ. (ಸಂ;ಆಇ 258 ಆಕೋ 1/2022, , WRD 94 KBN 2021 ಈಅಉಈ 13092022) ಅಡಳಿತ ಇಲಾಖೆಯು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ, ಅರ್ಥಿಕ ಇಲಾಖೆಯ ಗಮನಕ್ಕೂ ತರದೇ ರೂ 465 ಕೋಟಿ ರೂ ಗಳ ಕಾಮಗಾರಿಗಳಿಗೆ ಗುತ್ತಿಗೆ ನೀಡಿ ಕೈಗೆತ್ತಿಕೊಂಡಿರುವುದು ನಿಯಮಗಳ ಉಲ್ಲಂಘನೆಯಾಗಿದ್ದು, ಈ ಸಂಬಂ‘ ಸದರಿ ಪ್ರಕ್ರಿಯೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಾಗೂ ಸದರಿ ಪ್ರಸ್ತಾವಕ್ಕೆ ವೆಚ್ಚ ‘ರಿಸಲು ಇಲಾಖೆಯಡಿ ಯಾವ non-grounded ಕಾಮಗಾರಿಗಳನ್ನು ಕಡಿತಗೊಳಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಅರ್ಥಿಕ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಕೆ.ಗಾಯಿತ್ರಿ ಅವರು 2022ರ ಸೆಪ್ಟಂಬರ್ 13ರಂದು ಜಲಸಂಪನ್ಮೂಲ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.