26 ಲಕ್ಷ ರೂ. ಸ್ಥಾನಪಲ್ಲಟ ಪ್ರಕರಣ: ಎಇಇ ವಿರುದ್ಧದ ಲೋಕಾಯುಕ್ತ ವಿಚಾರಣೆ ಹಿಂಪಡೆದ ಸರಕಾರ
-

ಬೆಂಗಳೂರು: ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆಯೇ 26.07 ಲಕ್ಷ ರೂ.ಗಳನ್ನು ಸ್ಥಾನಪಲ್ಲಟಗೊಳಿಸಿದ್ದ ಆರೋಪಕ್ಕೆ ಗುರಿಯಾಗಿರುವ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಹೊರಡಿಸಿದ್ದ ಆದೇಶವನ್ನೇ ಸರಕಾರವು ಹಿಂಪಡೆದುಕೊಂಡಿದೆ. ಇದೇ ಇಲಾಖೆಯ ಮತ್ತೊಬ್ಬ ಸಹಾಯಕ ಇಂಜಿನಿಯರ್ ಗುತ್ತಿಗೆದಾರರಿಂದ 1,000 ಅಕ್ರಮ ಸಂಭಾವನೆ ಪಡೆದ ಆರೋಪದಡಿಯಲ್ಲಿ ತನಿಖೆ ನಡೆಸಲು ಉಪ ಲೋಕಾಯುಕ್ತರಿಗೆ ವಹಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಹರಪನಹಳ್ಳಿ ಉಪ ವಿಭಾಗದ ಎಇಇ ಲಷ್ಕರಿನಾಯ್ಕ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಸಂಬಂಧ 2016ರ ಅಕ್ಟೋಬರ್ 25ರಂದು ಆದೇಶ ಹೊರಡಿಸಿತ್ತು. ಆದರೀಗ 6 ವರ್ಷಗಳ ನಂತರ ಆಪಾದಿತ ಅಧಿಕಾರಿಯು ಮೇಲಾಧಿಕಾರಿಯ ನಿರ್ದೇಶನದ ಮೇರೆಗೆ ಕ್ರಮವಹಿಸಲಾಗಿದೆ ಎಂದು ನೀಡಿದ್ದ ಸಮಜಾಯಿಷಿಗೆ ಮಣೆ ಹಾಕಿ ಲೋಕಾಯುಕ್ತ ವಿಚಾರಣೆಗೆ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪ್ರಕರಣವು ಮುಕ್ತಾಯಗೊಂಡಂತಾಗಿದೆ.
ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ರಘುನಾಥಗೌಡ ಎಸ್ ಪಾಟೀಲ ಅವರು 2023ರ ಜನವರಿ 31ರಂದು ಲೋಕಾಯುಕ್ತ ನಿಬಂಧಕರಿಗೆ ಪತ್ರ(ಸಂಖ್ಯೆ; ಗ್ರಾಅಪ 8 ಇಎನ್ಕ್ಯೂ-2023) ಬರೆದಿದ್ದಾರೆ. ಈ ಪತ್ರದ ಪ್ರತಿಯು "the-file.in"ಗೆ ಲಭ್ಯವಾಗಿದೆ.
26.07 ಲಕ್ಷ ರೂ. ಸ್ಥಾನಪಲ್ಲಟ ಪ್ರಕರಣ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಉಪವಿಭಾಗಕ್ಕೆ ವಿಶೇಷ ಅಭಿವೃದ್ಧಿ ಯೋಜನೆಯಡಿ 2003ರಲ್ಲಿ 1735 ಲಕ್ಷ ರೂ. ಅನುದಾನ ಒದಗಿಸಲಾಗಿತ್ತು. ಈ ಪೈಕಿ 26.07 ಲಕ್ಷ ರೂ.ಗಳನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ ಸ್ಥಾನಪಲ್ಲಟ ಮಾಡಿ ವೆಚ್ಚ ಮಾಡಿದ್ದರು. ಈ ಸಂಬಂಧ ಎಇಇ ಲಷ್ಕರಿನಾಯ್ಕ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು 2016ರ ಅಕ್ಟೋಬರ್ 25ರಂದು ಆದೇಶ ಹೊರಡಿಸಲಾಗಿತ್ತು.
ಲಷ್ಕರಿ ನಾಯ್ಕ ಅವರು ಸರಕಾರದ ಈ ಆದೇಶವನ್ನು ಪ್ರಶ್ನಿಸಿ ಕೆಎಟಿಯಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು 3 ವರ್ಷಗಳವರೆಗೆ ವಿಚಾರಣೆ ನಡೆಸಿದ್ದ ಕೆಎಟಿಯು 2019ರ ಅಕ್ಟೋಬರ್ 25ರಂದು ಸರಕಾರದ ಆದೇಶವನ್ನು ರದ್ದುಗೊಳಿಸಿತ್ತು. ಆದರೆ, ಈ ಆದೇಶವನ್ನು ಪ್ರಶ್ನಿಸಲು ಅರ್ಹವಲ್ಲವೆಂದು ಸರಕಾರಿ ವಕೀಲರು ಅಭಿಪ್ರಾಯ ನೀಡಿದ್ದರು.
ಈ ಪ್ರಕರಣದಲ್ಲಿ ಯಾವುದೇ ಆರ್ಥಿಕ ನಷ್ಟ ಆಗದೇ ಇರುವುದು ಮತ್ತು ಆಪಾದಿತ ಅಧಿಕಾರಿಯು ತಮ್ಮ ಮೇಲಧಿಕಾರಿಯ ನಿರ್ದೇಶನದ ಅನುಸಾರ ಕ್ರಮವಹಿಸಿರುವುದು ಇತ್ಯಾದಿ ಅಂಶಗಳು ದಾಖಲೆಗಳಿಂದ ಕಂಡುಬಂದಿತ್ತು. ಆದ್ದರಿಂದ ನ್ಯಾಯ ಮಂಡಳಿಯ ಆದೇಶವನ್ನು ಒಪ್ಪಿ ಲಷ್ಕರಿ ನಾಯ್ಕ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ಉಪಲೋಕಾಯುಕ್ತರಿಗೆ ಆದೇಶ ವಹಿಸಿತ್ತು. ಈ ಆದೇಶವನ್ನು ರದ್ದುಪಡಿಸಿ ಮತ್ತು ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದೇ ಇರಲು ತೀರ್ಮಾನಿಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಲೋಕಾಯುಕ್ತ ನಿಬಂ‘ಕರಿಗೆ ಬರೆದ ಪತ್ರದಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ವಿವರಿಸಿದ್ದಾರೆ.
ಅಕ್ರಮ ಸಂಭಾವನೆ ಪ್ರಕರಣ
ಶಿವಮೊಗ್ಗದಲ್ಲಿರುವ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಉಪ ವಿಭಾಗದ ಸಹಾಯಕ ಇಂಜಿನಿಯರ್ ಎಚ್.ಬಸವರಾಜ್ ಅವರು ಗುತ್ತಿಗೆದಾರರ ಸಹಾಯಕ ಪರಮೇಶ್ ಎಂಬವರಿಂದ 1,000 ರೂ. ಅಕ್ರಮ ಸಂಭಾವನೆ ಸ್ವೀಕರಿಸುವ ವೇಳೆಯಲ್ಲಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣದ ಕುರಿತು ಇಲಾಖೆ ವಿಚಾರಣೆ ನಡೆಸಲು ಕರ್ನಾಟಕ ನಾಗರಿಕ ಸೇವಾ ನಿಯಮ (ಸಸಿಎ) 14ಎ ಅನ್ವಯ ಉಪ ಲೋಕಾಯುಕ್ತರಿಗೆ ವಹಿಸಲಾಗಿತ್ತು.
ಈ ಕುರಿತು ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಅವರು 2023ರ ಫೆಬ್ರವರಿ 1ರಂದು (ಸಂಖ್ಯೆ ಗ್ರಾಅಪ 29 ಇಎನ್ಕ್ಯೂ-2022) ಪತ್ರ ಬರೆದಿರುವುದು ಗೊತ್ತಾಗಿದೆ.
1,000 ಅಕ್ರಮ ಸಂಭಾವನೆ ಪಡೆದಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಎಚ್.ಬಸವರಾಜ್ ಅವರ ಮಾತೃ ಇಲಾಖೆಯು ಲೋಕೋಪಯೋಗಿ ಇಲಾಖೆಯಾಗಿರುತ್ತದೆ. ಆದ್ದರಿಂದ ಅವರ ವಿರುದ್ಧ ಇಲಾಖೆ ವಿಚಾರಣೆ ಪ್ರಕರಣವನ್ನು ಲೋಕೋಪಯೋಗಿ ಇಲಾಖೆಯು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.