ಹಿಜಾಬ್ ರಿಟ್ ಅರ್ಜಿ ಪ್ರಕರಣ: ಅಡ್ವೊಕೇಟ್ ಜನರಲ್ಗೆ ನಿಯಮ ಮೀರಿ 45 ಲಕ್ಷ ರೂ. ವಿಶೇಷ ಸಂಭಾವನೆ?
-

ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವ ಸಂಬಂಧ ಅನುಮತಿ ಕೋರಿ ಕುಂದಾಪುರದ ಸರಕಾರಿ ಪಿಯು ಕಾಲೇಜಿನ ರೇಷಂ ಉಡುಪಿ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿ ಪ್ರಕರಣದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ಹಾಜರಾಗಿದ್ದ ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರಿಗೆ 45 ಲಕ್ಷ ರೂ. ವಿಶೇಷ ಸಂಭಾವನೆ ಪಾವತಿಸುವ ಸಂಬಂಧ ಕಾನೂನು ಇಲಾಖೆಯು ಕೆ.ಎಲ್.ಒ. ನಿಯಮಾವಳಿಗಳನ್ನು ಬದಿಗಿರಿಸಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ.
45 ಲಕ್ಷ ರೂ. ವಿಶೇಷ ಸಂಭಾವನೆ ಪಾವತಿ ಸಂಬಂಧ ಅಡ್ವೊಕೇಟ್ ಜನರಲ್ ಕಚೇರಿ ಆಡಳಿತಾಧಿಕಾರಿಗಳು ಬಿಲ್ಗಳನ್ನು ಸಲ್ಲಿಸಿರುವುದು ಕಾನೂನು ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕೆ.ಎಲ್.ಒ. ನಿಯಮಾವಳಿಗಳ ಪ್ರಕಾರ ಪ್ರತೀ ದಿನದ ಹಾಜರಾತಿಗೆ 42,500 ರೂ.ನಂತೆ 15 ದಿನಗಳಿಗೆ 6,37,500 ರೂ.ಗಳನ್ನು ಅಡ್ವೊಕೇಟ್ ಜನರಲ್ ಅವರಿಗೆ ಪಾವತಿಸಬೇಕೇ ಅಥವಾ ಈ ಪ್ರಕರಣದಲ್ಲಿ ಅವರನ್ನು ವಿಶೇಷ ವಕೀಲರೆಂದು ನೇಮಕಗೊಳಿಸಿ 45 ಲಕ್ಷ ರೂ. ಸಂಭಾವನೆ ಪಾವತಿಸಬೇಕೇ ಎಂಬ ಕುರಿತು (ಇಡಿ 14 ಡಿಜಿಡಬ್ಲ್ಯೂ 2022 (ಪಿ-2) ಕಾನೂನು ಸಚಿವರ ಆದೇಶವನ್ನು ಕೋರಿದೆ. ಈ ಸಂಬಂಧ ಕಾನೂನು ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ಕಚೇರಿಯು ಕಡತ ಸಲ್ಲಿಸಿದೆ ಎಂದು ಗೊತ್ತಾಗಿದೆ.
ಒಂದೊಮ್ಮೆ ಈ ಪ್ರಕರಣದಲ್ಲಿ ಅಡ್ವೊಕೇಟ್ ಜನರಲ್ ಅವರನ್ನು ವಿಶೇಷ ವಕೀಲರು ಎಂದು ಪರಿಗಣಿಸಲು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಒಪ್ಪಿದರೆ ಕೆಎಲ್ಒ ನಿಯಮಾವಳಿಗಳನ್ನು ಮೀರಿದಂತಾಗುವುದಲ್ಲದೇ ಹೆಚ್ಚುವರಿಯಾಗಿ 38,62,500 ರೂ. ಪಾವತಿಸಿದಂತಾಗುತ್ತದೆ.
ಇದೇ ಹಿಜಾಬ್ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ರಾಜ್ಯದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ಮತ್ತು ಅಡಿಷನಲ್ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಇವರಿಗೆ 88.00 ಲಕ್ಷ ರೂ. ಸಂಭಾವನೆ ನೀಡಲು ಪ್ರಸ್ತಾವ ಸಲ್ಲಿಕೆಯಾಗಿರುವ ಬೆನ್ನಲ್ಲೇ ಉಚ್ಛ ನ್ಯಾಯಾಲಯದಲ್ಲಿನ ಪ್ರಕರಣದಲ್ಲಿ ಹಾಜರಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಅವರಿಗೆ ವಿಶೇಷ ಶುಲ್ಕ ಪಾವತಿಸಲು ಬಿಲ್ಗಳು ಸಲ್ಲಿಕೆಯಾಗಿರುವುದು ಮುನ್ನೆಲೆಗೆ ಬಂದಿವೆ.
ಈ ಸಂಬಂಧ ಕಾನೂನು ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ(1) ಸಂತೋಷ್ ಗಜಾನನ ಭಟ್ ಅವರು ಕಾನೂನು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಮುಖಾಂತರ ಕಾನೂನು ಸಚಿವರಿಗೆ ಕಡತ ಮಂಡಿಸಿದ್ದಾರೆ. ಈ ಕುರಿತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು "the-file.in"ಖಚಿತಪಡಿಸಿದ್ದಾರೆ.
ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ರೇಷಂ ಮತ್ತಿತರರು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ಸಂಬಂಧ ರಾಜ್ಯ ಸರ್ಕಾರದ ಪರ ನ್ಯಾಯಾಲಯಕ್ಕೆ 2022ರ ಫೆಬ್ರವರಿ 3 ರಿಂದ ಮಾರ್ಚ್ 15ರವರೆಗೆ ಒಟ್ಟು 15 ದಿನಗಳವರೆಗೆ ರಾಜ್ಯ ಅಡ್ವೋಕೇಟ್ ಜನರಲ್ ಹಾಜರಾಗಿದ್ದರು.
ಒಟ್ಟು 15 ದಿನಗಳವರೆಗೆ ನಡೆದ ವಿಚಾರಣೆಗೆ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಅವರು ಒಟ್ಟು 45 ಲಕ್ಷ ರೂ. ಸಂಭಾವನೆ ಪಾವತಿಸಲು ಅಡ್ವೋಕೇಟ್ ಜನರಲ್ ಕಚೇರಿಯ ಆಡಳಿತಾಧಿಕಾರಿಗಳು ಬಿಲ್ ದೃಢೀಕರಿಸಿ ಸರಕಾರಕ್ಕೆ ಸಲ್ಲಿಸಿದ್ದರು ಎಂದು ಗೊತ್ತಾಗಿದೆ.
ಕೆಎಲ್ಒ ನಿಯಮಾ ವಳಿಗಳಲ್ಲೇನಿದೆ?: ಕೆಎಲ್ಒ ನಿಯಮಾವಳಿಗಳು (2017ರ ತಿದ್ದುಪಡಿ) 1977ರ ಅನ್ವಯ ಅಡ್ವೊಕೇಟ್ ಜನರಲ್ ಅವರು ಉಚ್ಛ ನ್ಯಾಯಾಲಯದಲ್ಲಿ ಹಾಜರಾದ ಬಗ್ಗೆ ಒಂದು ದಿನದ ಹಾಜರಾತಿಗೆ ಒಂದು ಪ್ರಕರಣಕ್ಕೆ 20,000 ರು ಮತ್ತು ಒಗ್ಗೂಡಿದ ಪ್ರಕರಣಗಳಿಗೆ ಮೊದಲನೇ ಪ್ರಕರಣಕ್ಕೆ ಒಂದು ದಿನದ ಹಾಜರಾತಿಗೆ 15,000 ರೂ. ಮತ್ತು ಉಳಿದ ಒಗ್ಗೂಡಿದ ಪ್ರಕರಣಗಳಿಗೆ ಪ್ರತಿ ಪ್ರಕರಣಕ್ಕೆ 1,500 ರೂ.ನಂತೆ ಗರಿಷ್ಠ 50,000 ರೂ. ಸಂಭಾವನೆ ಪಡೆಯಲು ಅರ್ಹರಾಗಿರುತ್ತಾರೆ.
ಈ ಕುರಿತು ಕಾನೂನು ಇಲಾಖೆಯು ಸದರಿ ಹಿಜಾಬ್ ಪ್ರಕರಣದಲ್ಲಿ ಅಡ್ವೋಕೇಟ್ ಜನರಲ್ ಅವರು ಉಚ್ಛ ನ್ಯಾಯಾಲಯದಲ್ಲಿ ಹಾಜರಾದ ಬಗ್ಗೆ ಕೆಎಲ್ಒ ನಿಯಮಾವಳಿಗಳು (2017ರ ತಿದ್ದುಡಪಿ) 1977ರ ಅನ್ವಯ ಪ್ರತೀ ದಿನದ ಹಾಜರಾತಿಗೆ 42,500 (20,000+15,000+5ಘಿ1,500) ರಂತೆ ಒಟ್ಟು 15 ದಿನಗಳ ಹಾಜರಾತಿಗೆ 6,37,500 ರೂ. ಸಂಭಾವನೆ ಪಡೆಯಲು ಅರ್ಹರಾಗಿದ್ದಾರೆ,’ ಎಂದು ಅಭಿಪ್ರಾಯಿಸಿದೆ ಎಂದು ತಿಳಿದು ಬಂದಿದೆ.
ಆದರೆ, ಹಿಜಾಬ್ ಪ್ರಕರಣವು ವಿಶೇಷ ಎಂದು ಅಡ್ವೋಕೇಟ್ ಜನರಲ್ ಕಚೇರಿ ಪರಿಗಣಿಸಿತ್ತು. ಅದರಂತೆ ವಿಶೇಷ ಶುಲ್ಕ ಪಾವತಿಸಬೇಕು ಎಂದು ಬಿಲ್ಗಳನ್ನು ಸಲ್ಲಿಸಿದ್ದಾರೆ. ‘ಅಡ್ವೋಕೇಟ್ ಜನರಲ್ ಅವರು ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ವಿಶೇಷ ಸಂಭಾವನೆಯಾದ 45,00,000 ರೂ.ಗಳನ್ನು ಪಾವತಿಸುವಂತೆ ಕೋರಿರುತ್ತಾರೆ. ಈ ವಿಶೇಷ ಪ್ರಕರಣದಲ್ಲಿ ವಿಶೇಷ ಸಂಭಾವನೆ ಮಂಜೂರು ಮಾಡುವ ಮೊದಲಿಗೆ ಅಡ್ವೊಕೇಟ್ ಜನರಲ್ ಅವರನ್ನು ಈ ಪ್ರಕರಣದಲ್ಲಿ ವಿಶೇಷ ವಕೀಲರೆಂದು ನೇಮಕ ಮಾಡುವುದು ಅವಶ್ಯವಾಗಿರುತ್ತದೆ,’ ಎಂದೂ ಕಾನೂನು ಇಲಾಖೆಯು ಅಭಿಪ್ರಾಯಿಸಿರುವುದು ಗೊತ್ತಾಗಿದೆ.
ಹೀಗಾಗಿ ಕಾನೂನು ಇಲಾಖೆಯು ಕೆಎಲ್ಒ ನಿಯಮಾವಳಿಗಳನ್ವಯ ಪ್ರತಿ ದಿನದ ಹಾಜರಾತಿಗೆ 42,500 ರೂ.ನಂತೆ 15 ದಿನಗಳಿಗೆ 6,37,500 ರೂ.ನಂತೆ ಪಾವತಿಸಬೇಕೇ ಅಥವಾ ಅಡ್ವೊಕೇಟ್ ಜನರಲ್ ಅವರನ್ನೇ ಈ ಪ್ರಕರಣದಲ್ಲಿ ವಿಶೇಷ ವಕೀಲರೆಂದು ನೇಮಕ ಮಾಡಿ ಅವರಿಗೆ 45,00,000 ರೂ. ಸಂಭಾವನೆ ಪಾವತಿಸಬೇಕೇ ಎಂಬ ಬಗ್ಗೆ ಕಾನೂನು ಸಚಿವರಿಗೆ ಕಡತವನ್ನು ಸಲ್ಲಿಸಿದೆ ಎಂದು ತಿಳಿದು ಬಂದಿದೆ.
ಕುಂದಾಪುರದ ಸರಕಾರಿ ಪಿಯು ಕಾಲೇಜಿನ ರೇಷಂ ಸೇರಿದಂತೆ ಮತ್ತಿತರ ಹಿಜಾಬ್ ಧರಿಸಿ ಪ್ರವೇಶಿಸಲು ಮುಂದಾಗಿದ್ದಾಗ ತಮ್ಮ ಕಾಲೇಜಿನ ಆವರಣದ ಒಳಗೆ ಬರದಂತೆ ಅವರ ಶಿಕ್ಷಕರೇ ತಡೆದಿದ್ದರು. ಇದು ವಿವಾದದ ಸ್ವರೂಪ ಪಡೆದುಕೊಂಡು ಜಗತ್ತಿನಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಕಡೆಗಿದು ಹೈಕೋರ್ಟ್ ಮೆಟ್ಟಿಲೇರಿತ್ತು.
ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು ಎಂಬ ಕೋರಿಕೆಯ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್, ಈ ವಿಷಯವನ್ನು ದೇಶಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.
ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠವು ಬಲವಾದ ಸಂಶಯ ವ್ಯಕ್ತಪಡಿಸಿತ್ತು.
ಸಮವಸ್ತ್ರ ಸಂಹಿತೆ ಕುರಿತಂತೆ 2022ರ ಫೆಬ್ರವರಿ 5ರಂದು ಸುತ್ತೋಲೆ ಹೊರಡಿಸುವುದಕ್ಕೂ ಮುನ್ನವೇ ಉಡುಪಿಯ ಸರಕಾರಿ ಪದವಿಪೂರ್ವ ಕಾಲೇಜಿನ ಆರು ಮಂದಿ ಮುಸ್ಲಿಮ್ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿದ್ದರು. ಇದನ್ನು ಗಮನಿಸಿದಾಗ, 2021ರ ಡಿಸೆಂಬರ್ ಮೊದಲ ವಾರದಲ್ಲೇ ಈ ಕಾಲೇಜಿನಲ್ಲಿ ಹಿಜಾಬ್ ಕುರಿತಂತೆ ಹುನ್ನಾರ ರೂಪಿಸುವ ಪ್ರಯತ್ನ ನಡೆದಿವೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ್ದನ್ನು ಸ್ಮರಿಸಬಹುದು.
ಕುಂದಾಪುರ ಮೂಲದ ವಿದ್ಯಾರ್ಥಿನಿ ಸಹ ಸುಪ್ರೀಂ ಕೋರ್ಟ್ (ರಿಟ್ ಅರ್ಜಿ (ಸಿ) ಸಂಖ್ಯೆ; 95/2022) ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ರಾಜ್ಯ ಸರಕಾರದ ಪರವಾಗಿ ವಕಾಲತ್ತು ವಹಿಸಿದ್ದ ತುಷಾರ್ ಮೆಹ್ತಾ (ಸಾಲಿಸಿಟರ್ ಜನರಲ್ ಅಫ್ ಇಂಡಿಯಾ) ಅವರಿಗೆ ಒಂದು ದಿನದ ಹಾಜರಾತಿಗೆ 4,40,000 ರೂ. ನಂತೆ ಒಟ್ಟು 9 ದಿನಗಳಿಗೆ (2022ರ ಆಗಸ್ಟ್ 29ರಿಂದ ಸೆ.22ರವರೆಗೆ) 39,60,000 ರೂ. ಮತ್ತು ಕೆ.ಎಂ.ನಟರಾಜ್ (ಅಡಿಷನಲ್ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ) ಇವರಿಗೆ ಪ್ರತೀ ದಿನ ಹಾಜರಾತಿಗೆ 4,40,000 ರೂ.ನಂತೆ ಒಟ್ಟು 11 ದಿನಗಳಿಗೆ (2022ರ ಅಗಸ್ಟ್ 29ರಿಂದ ಸೆ.22ರವರೆಗೆ) ಒಟ್ಟು 48,40,000 ರೂ.ಗಳನ್ನು ಪಾವತಿಸಲು ಸಲ್ಲಿಕೆಯಾಗಿದ್ದ ಪ್ರಸ್ತಾವ ಕುರಿತು ದಾಖಲೆ ಸಹಿತ "the-file.in" ಮತ್ತು ವಾರ್ತಾಭಾರತಿ ವರದಿ ಪ್ರಕಟಿಸಿತ್ತು.
ಶಿರವಸ್ತ್ರ ಹಾಕಿಕೊಂಡು ಅಥವಾ ತಲೆಯನ್ನು ಮುಚ್ಚಿ ಕೊಂಡು ಶಾಲೆಗೆ ಬರದಂತೆ ವಿದ್ಯಾರ್ಥಿಗಳನ್ನು ತಡೆದರೆ, ಅದು ಸಂವಿಧಾನದ ಅನುಚ್ಛೇದ 25 ಉಲ್ಲಂಘನೆ ಅಲ್ಲ ಎಂದು ಸುಪ್ರೀಂ ಕೋರ್ಟ್ ಮತ್ತು ವಿವಿಧ ರಾಜ್ಯಗಳ ಹೈಕೋರ್ಟ್ಳು ಈಗಾಗಲೇ ತೀರ್ಪು ನೀಡಿವೆ. ಹೀಗಾಗಿ, ಈ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ಸರಕಾರ ಸಮರ್ಥನೆಯನ್ನೂ ನೀಡಿದ್ದನ್ನು ಸ್ಮರಿಸಬಹುದು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.