Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಜನಪರ ಅಭಿವೃದ್ಧಿ ಕಾರ್ಯಕ್ರಮಗಳಿಗೆ...

ಜನಪರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಿಡುಗಡೆಯಾದ ಅನುದಾನಗಳಲ್ಲಿ ವೆಚ್ಚವಾಗದೆ ಉಳಿದ 41,942 ಕೋಟಿ ರೂ.

ಜಿ.ಮಹಾಂತೇಶ್ಜಿ.ಮಹಾಂತೇಶ್18 March 2023 8:29 AM IST
share
ಜನಪರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಿಡುಗಡೆಯಾದ ಅನುದಾನಗಳಲ್ಲಿ ವೆಚ್ಚವಾಗದೆ ಉಳಿದ 41,942 ಕೋಟಿ ರೂ.

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿನ ಪ್ರಧಾನಮಂತ್ರಿ ಜನವಿಕಾಸ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಸೌಲಭ್ಯ, ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ, ಪ್ರಧಾನಮಂತ್ರಿ ಕಿಸಾನ್, ಕೃಷಿ ಮೂಲಭೂತ ಸೌಕರ್ಯ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ, ಪ್ರಾಥಮಿಕ ಆರೋಗ್ಯ ಸೌಲಭ್ಯ ಬಲಪಡಿಸುವುದು, ವಿದ್ಯಾರ್ಥಿಗಳ ರಿಯಾಯಿತಿ ಪಾಸ್, ಕುಟೀರ ಭಾಗ್ಯ, ನೀರಾವರಿ ಪಂಪ್‌ಸೆಟ್, ಕನಿಷ್ಠ ಬೆಂಬಲ ಬೆಲೆ ಗಳಂತಹ ಮಹತ್ತರ ಕಾರ್ಯಕ್ರಮಗಳಿಗೆ 2022-23ನೇ ಸಾಲಿಗೆ ಬಿಡುಗಡೆಯಾಗಿದ್ದ ಒಟ್ಟು ಅನುದಾನದ ಪೈಕಿ 41,942.68 ಕೋಟಿ ರೂ.ಗಳನ್ನು ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ.

ಹಿಜಾಬ್, ಹಲಾಲ್ ಕಟ್, ಪಠ್ಯಪುಸ್ತಕ ಪರಿಷ್ಕರಣೆ ವಿವಾದಗಳ ಬೆಂಕಿಯಲ್ಲಿ ಕೈಕಾಯಿಸಿಕೊಂಡು ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಲೇ ವಿಜಯ ಸಂಕಲ್ಪ, ಫಲಾನುಭವಿ ಸಮಾವೇಶಗಳಿಗೆ ಕೋಟ್ಯಂತರ ರೂ. ಖರ್ಚು ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರವು ಪ್ರಮುಖ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರತ್ತ ಗಮನವನ್ನೇ ಹರಿಸಿಲ್ಲ. ಯೋಜನಾ ಇಲಾಖೆಯು 2022- 23ನೇ ಸಾಲಿನ ಪ್ರಮುಖ ಕಾರ್ಯಕ್ರಮಗಳ ಕುರಿತು ಕೆಡಿಪಿ ಸಭೆಗೆ ಒದಗಿಸಿರುವ ಅಂಕಿ ಅಂಶಗಳ ಸಮಗ್ರ ಮಾಹಿತಿಯು ‘the-file.in’ಗೆ ಲಭ್ಯವಾಗಿದೆ.

ಪ್ರಮುಖ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವ ಸಾಧ್ಯತೆಗಳಿವೆ. ಸಾವಿರಾರು ಕೋಟಿ ರೂ. ಅನುದಾನವಿದ್ದರೂ ಖರ್ಚು ಮಾಡದೇ ಬಾಕಿ ಉಳಿಸಿಕೊಂಡಿರುವ ಕಾರಣ ಈ ಹಣ ಸರಕಾರಕ್ಕೆ ಮರಳಿಸಲು ದಾರಿಮಾಡಿಕೊಟ್ಟಂತಾಗುತ್ತದೆ. ಕೆಡಿಪಿ ಸಭೆಗೆ ಒದಗಿಸಿರುವ ಅಂಕಿ ಅಂಶಗಳ ವಿವರವಾದ ಮಾಹಿತಿಯು ರಾಜ್ಯ ಬಿಜೆಪಿ ಸರಕಾರದ ಪ್ರಗತಿಗೆ ಕನ್ನಡಿ ಹಿಡಿದಿದೆ. ಮತ್ತೊಂದು ವಿಶೇಷವೆಂದರೆ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಪ್ರಮುಖ ಕಾರ್ಯಕ್ರಮಗಳಿಗೆ ಒಟ್ಟು ಅನುದಾನದ ಪೈಕಿ ಬಿಡುಗಡೆಯಾಗಿದ್ದ ಕನಿಷ್ಠ ಹಣಕ್ಕಿಂತಲೂ ಹೆಚ್ಚಿನ ವೆಚ್ಚವಾಗಿರುವುದು ಇಲಾಖೆಗಳು ಒದಗಿಸಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಜಾರಿಗೊಳಿಸಿದ್ದ ಪ್ರಧಾನ ಮಂತ್ರಿ ಜನವಿಕಾಸ ಕಾರ್ಯಕ್ರಮಕ್ಕೆ 400 ಕೋಟಿ ರೂ. ಒಟ್ಟು ಅನುದಾನದಲ್ಲಿ 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರೂ 2023ರ ಫೆಬ್ರವರಿ ಅಂತ್ಯಕ್ಕೆ ಖರ್ಚು ಮಾಡಿರುವುದು ಕೇವಲ 1.91 ಕೋಟಿ ರೂ. ಮಾತ್ರ. 398.09 ಕೋಟಿ ರೂ.ಗಳನ್ನು ವೆಚ್ಚ ಮಾಡಿಲ್ಲ. ಇದು ಅಲ್ಪಸಂಖ್ಯಾತರ ಕಲ್ಯಾಣದ ಬಗ್ಗೆ ಕಾಳಜಿಯು ಹೇಗಿದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಒದಗಿಸಿದಂತಾಗಿದೆ.

ಪ್ರಾಥಮಿಕ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸಲು ಹದಿನೈದನೇ ಹಣಕಾಸು ಆಯೋಗದ ಅನುದಾನದಲ್ಲಿ 911.11 ಕೋಟಿ ರೂ., ರಾಷ್ಟ್ರೀಯ ಆರೋಗ್ಯ ಅಭಿಯಾನಕ್ಕೆ 1,372.11 ಕೋಟಿ ರೂ., ನೀರಾವರಿ ಪಂಪ್‌ಸೆಟ್ ಭಾಗ್ಯ, ಕುಟೀರ ಜ್ಯೋತಿ, ವಿದ್ಯುತ್ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿಗೆ ಸಹಾಯಧನಕ್ಕೆ ನೀಡಿದ್ದ 14,092 ಕೋಟಿ ರೂ. ಪೈಕಿ 9,193.67 ಕೋಟಿ ರೂ. ಬಿಡುಗಡೆಯಾಗಿದ್ದು ಈ ಪೈಕಿ ಇನ್ನೂ 4,898.94 ಕೋಟಿ ರೂ.ಗಳನ್ನು ಖರ್ಚು ಮಾಡದೆಯೇ ಬಾಕಿ ಉಳಿಸಿಕೊಂಡಿರುವುದು ಅಂಕಿ ಅಂಶದಿಂದ ತಿಳಿದು ಬಂದಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 1,000 ಕೋಟಿ ರೂ. ಅಂದಾಜಿಸಿದ್ದಾದರೂ ಫೆಬ್ರವರಿ ಅಂತ್ಯಕ್ಕೆ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಈ ಕಾರ್ಯಕ್ರಮದಲ್ಲಿ 1,000 ಕೋಟಿ ರೂ. ವೆಚ್ಚವಾಗಿಲ್ಲ.

ಗ್ರಾಮೀಣ ಸುಮಾರ್ಗ ಯೋಜನೆಗೆ 2,217.13 ಕೋಟಿ ರೂ. ಅಂದಾಜಿಸಿತ್ತು. ಈ ಪೈಕಿ 903.38 ಕೋಟಿ ರೂ. ಬಾಕಿ ಉಳಿಸಿ ಕೊಂಡಿದೆ. ಗ್ರಾಮೀಣ ಕುಡಿಯುವ ನೀರು ಯೋಜನೆಗೆ ಒಟ್ಟು 8,529.86 ಕೋಟಿ ರೂ. ಅನುದಾನದ ಪೈಕಿ 1,996.79 ಕೋಟಿ ರೂ. ಬಿಡುಗಡೆಯಾಗಿದ್ದರೂ 4,101.26 ಕೋಟಿ ರೂ. ಖರ್ಚು ಮಾಡಿದೆ.

ಒಟ್ಟು ಅನುದಾನದ ಪೈಕಿ ವೆಚ್ಚಕ್ಕೆ 4,428.60 ಕೋಟಿ ರೂ. ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ. ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನಕ್ಕೆ 60 ಕೋಟಿ ರೂ. ಬಿಡುಗಡೆಯಾಗಿದ್ದರೂ ಬಿಡಿಗಾಸನ್ನೂ ಖರ್ಚು ಮಾಡಿಲ್ಲ. ಕರ್ನಾಟಕ ನೀರಾವರಿ ನಿಗಮದಲ್ಲಿ 4,758.77 ಕೋಟಿ ರೂ. ಅನು ದಾನದ ಪೈಕಿ 3,022.46 ಕೋಟಿ ರೂ. ಬಿಡುಗಡೆಯಾಗಿದೆ. ಈ ಪೈಕಿ 3,240.41 ಕೋಟಿ ರೂ. ವೆಚ್ಚವಾಗಿದ್ದು ಇನ್ನೂ ವೆಚ್ಚಕ್ಕೆ 1,518.36 ಕೋಟಿ ರೂ. ಬಾಕಿ ಉಳಿದಿದೆ.

ಕೃಷ್ಣಭಾಗ್ಯ ಜಲನಿಗಮ ಭೂ ಸ್ವಾಧೀನ ವೆಚ್ಚಗಳಿಗಾಗಿ 2,726.30 ಕೋಟಿ ರೂ. ಅನುದಾನದ ಪೈಕಿ ಬಿಡುಗಡೆಯಾಗಿದ್ದು 705.36 ಕೋಟಿ ರೂ. ಮಾತ್ರ. ಆದರೆ 1,234.64 ಕೋಟಿ ರೂ. ಒಟ್ಟು ವೆಚ್ಚವಾಗಿದೆ ಎಂದು ತೋರಿಸಲಾಗಿದೆ. ವೆಚ್ಚಕ್ಕೆ 1,491.66 ಕೋಟಿ ರೂ. ಬಾಕಿ ಉಳಿದಿದೆ. ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಭೂ ಸ್ವಾಧೀನ ವೆಚ್ಚಕ್ಕೆಂದು 472.72 ಕೋಟಿ ರೂ. ಪೈಕಿ 225.00 ಕೋಟಿ ರೂ. ಬಿಡುಗಡೆಯಾಗಿತ್ತು. ಈ ಪೈಕಿ 172.71 ಕೋಟಿ ರೂ. ಮಾತ್ರ ವೆಚ್ಚವಾಗಿದ್ದು ವೆಚ್ಚಕ್ಕೆ 300.01 ಕೋಟಿ ರೂ. ಬಾಕಿ ಉಳಿದಿದೆ.

ನಗರಾಭಿವೃದ್ದಿ ಇಲಾಖೆಯ ಅಮೃತ್ ಮಿಷನ್ ಕಾರ್ಯಕ್ರಮಕ್ಕೆ 1,155.14 ಕೋಟಿ ರೂ. ಅನುದಾನವಿದೆ. ಇದರಲ್ಲಿ ಬಿಡುಗಡೆಯಾಗಿದ್ದು 814.37 ಕೋಟಿ ರೂ. ಮಾತ್ರ. ಈ ಪೈಕಿ 121.51 ಕೋಟಿ ರೂ. ಖರ್ಚು ಮಾಡಿದ್ದು ವೆಚ್ಚಕ್ಕೆ 1,033.63 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಸ್ಮಾರ್ಟ್ ಸಿಟಿ ಮಿಷನ್‌ಗೆಂದು 2,332.00 ಕೋಟಿ ರೂ. ಅನುದಾನದಲ್ಲಿ 568.75 ಕೋಟಿ ರೂ. ಮಾತ್ರ ಬಿಡುಗಡೆ ಮಾಡಲಾಗಿದೆ. ಆದರೆ 1,300.94 ಕೋಟಿ ರೂ. ವೆಚ್ಚವಾಗಿದೆ ಎಂದು ತೋರಿಸಲಾಗಿದೆ. ವೆಚ್ಚಕ್ಕೆ 1,031.06 ಕೋಟಿ ರೂ. ಬಾಕಿ ಉಳಿದಿರುವುದು ಅಂಕಿ ಅಂಶದಿಂದ ಗೊತ್ತಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 3,783.59 ಕೋಟಿ ರೂ. ಅನುದಾನದ ಪೈಕಿ 1,500.00 ಕೋಟಿ ರೂ. ಬಿಡುಗಡೆಯಾಗಿತ್ತು. ಈ ಪೈಕಿ 1,117.87 ಕೋಟಿ ರೂ. ಖರ್ಚಾಗಿದೆ. ವೆಚ್ಚಕ್ಕೆ 2,685.72 ಕೋಟಿ ರೂ. ಬಾಕಿ ಇದೆ. ಪೂರಕ ಪೌಷ್ಟಿಕಾಂಶ ಕಾರ್ಯಕ್ರಮಕ್ಕೆ ಕೇಂದ್ರದ ನೆರವು ಕಾರ್ಯಕ್ರಮದಡಿಯಲ್ಲಿ 1,505.41 ಕೋಟಿ ರೂ. ಅನುದಾನದಲ್ಲಿ 1,204.37 ಕೋಟಿ ರೂ. ಬಿಡುಗಡೆಯಾಗಿತ್ತು. ಈ ಪೈಕಿ ಖರ್ಚಾಗಿರುವುದು 814.85 ಕೋಟಿ ರೂ. ಮಾತ್ರ. ವೆಚ್ಚ ಮಾಡಲು ಇನ್ನೂ 690.56 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.

ಪೋಷಣ ಅಭಿಯಾನದಲ್ಲಿ 91.38 ಕೋಟಿ ರೂ. ಅನುದಾನದ ಪೈಕಿ ಬಿಡುಗಡೆಯಾಗಿದ್ದು 23.38 ಕೋಟಿ ರೂ. ಮಾತ್ರ. ಇದನ್ನು ಪೂರ್ಣವಾಗಿ ವೆಚ್ಚ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯು ಈ ಕಾರ್ಯಕ್ರಮದಡಿಯಲ್ಲಿ ಇನ್ನೂ 68.00 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದೆ.

ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿಯಲ್ಲಿ 1,368.84 ಕೋಟಿ ರೂ. ಅನುದಾನವಿದ್ದು ಈ ಪೈಕಿ 596.00 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ 526.48 ಕೋಟಿ ರೂ. ಖರ್ಚು ಮಾಡಿರುವ ಇಲಾಖೆಯು 842.36 ಕೋಟಿ ರೂ. ವೆಚ್ಚಕ್ಕೆ ಬಾಕಿ ಉಳಿಸಿಕೊಂಡಿದೆ. ಜಿಲ್ಲಾ ಮತ್ತು ಇತರ ರಸ್ತೆಗಳ ಕಾಮಗಾರಿಗಳ ಕಾರ್ಯಕ್ರಮಗಳಡಿ ಯಲ್ಲಿ 2,348.81 ಕೋಟಿ ರೂ. ಅನುದಾನವಿದ್ದು ಇದರಲ್ಲಿ 1,560. 68 ಕೋಟಿ ರೂ. ಬಿಡುಗಡೆಯಾಗಿತ್ತು. ಇದರಲ್ಲಿ 1,331.16 ಕೋಟಿ ರೂ. ಖರ್ಚು ಮಾಡಿ ಇನ್ನು 1,017.65 ಕೋಟಿ ರೂ. ವೆಚ್ಚಕ್ಕೆ ಬಾಕಿ ಉಳಿಸಿಕೊಂಡಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 718.84 ಕೋಟಿ ರೂ. ಅನುದಾನವಿದ್ದು ಇದನ್ನು ಪೂರ್ಣ ಬಿಡುಗಡೆ ಮಾಡಲಾಗಿದೆ. ಆದರೆ ಖರ್ಚು ಮಾಡಿದ್ದು 290.94 ಕೋಟಿ ಮಾತ್ರ. ವೆಚ್ಚಕ್ಕೆ ಇನ್ನೂ 427.90 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ್) 371.75 ಕೋಟಿ ರೂ. ಅನುದಾನದ ಪೈಕಿ ಬಿಡಿಗಾಸನ್ನೂ ಬಿಡುಗಡೆ ಮಾಡದಿದ್ದರೂ 67.17ಕೋಟಿ ರೂ. ಖರ್ಚಾಗಿದೆ ಎಂದು ತೋರಿಸಲಾಗಿದೆ. ವೆಚ್ಚಕ್ಕೆ ಇನ್ನೂ 304.58 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 1,075.90 ಕೋಟಿ ರೂ. ಅನುದಾನದ ಪೈಕಿ ಬಿಡುಗಡೆಯಾಗಿದ್ದ 38.40 ಕೋಟಿ ರೂ. ಗಳನ್ನು ಖರ್ಚು ಮಾಡಿರುವ ಸಹಕಾರ ಇಲಾಖೆಯು ಇನ್ನೂ 1,037. 50 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದೆ. ವಿದ್ಯಾರ್ಥಿಗಳು ಮತ್ತು ಇತರ ರಿಯಾಯಿತಿ ಪಾಸ್‌ಗಳ ಕಾರ್ಯಕ್ರಮದಡಿಯಲ್ಲಿ 948.53 ಕೋಟಿ ರೂ. ಅನುದಾನದಲ್ಲಿ 652.22 ಕೋಟಿ ರೂ. ಬಿಡುಗಡೆ ಮಾಡಿದ್ದು ಇದರಲ್ಲಿ 172.86 ಕೋಟಿ ರೂ. ಮಾತ್ರ ಖರ್ಚು ಮಾಡಿದೆ. ಖರ್ಚಿಗೆ 775.67 ಕೋಟಿ ರೂ. ಬಾಕಿ ಉಳಿಸಿಕೊಂಡಿರುವುದು ಅಂಕಿ ಅಂಶದಿಂದ ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X