-

1,48,782 ಕಡತಗಳು ವಿಲೇವಾರಿಗೆ ಬಾಕಿ: ರಾಜ್ಯ ಸರಕಾರದ ವಿವಿಧ ಇಲಾಖೆಗಳ ಅಂಕಿ ಅಂಶಗಳಿಂದ ಬಹಿರಂಗ

-

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ತಮ್ಮ ಅವಧಿ ಪೂರ್ಣಗೊಳಿಸುವ ಹಂತಕ್ಕೆ ಬಂದಿದ್ದರೂ ಸರಕಾರದ ಬಹುತೇಕ ಇಲಾಖೆಗಳಲ್ಲಿ 2023ರ ಮಾರ್ಚ್ 16ರವರೆಗೆ ಒಟ್ಟು 1,48,782 ಕಡತಗಳು ವಿಲೇವಾರಿಗೆ ಬಾಕಿ ಇರುವುದು ಬಹಿರಂಗವಾಗಿದೆ.

ಕೇವಲ ಹಣ ಕೊಟ್ಟರಷ್ಟೇ ಕಡತಗಳು ವಿಲೇವಾರಿ ಆಗುತ್ತಿವೆ ಎಂದು ಪ್ರತಿಪಕ್ಷಗಳು ಆರೋಪ ಮತ್ತು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಡತಗಳು ವಿಲೇವಾರಿಯಾಗುತ್ತಿಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕಡತಗಳು ಬಾಕಿ ಇರುವ ಅಂಕಿ ಅಂಶಗಳು ಮುನ್ನೆಲೆಗೆ ಬಂದಿವೆ. ಸರಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ 2023ರ ಮಾರ್ಚ್ 21ರಂದು ನಡೆದ ಸಭೆಯಲ್ಲಿ ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳ ಕುರಿತು ಚರ್ಚೆಯಾಗಿದೆ. ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ ಚರ್ಚಿಸಲು ನಡೆದಿದ್ದ ಸಭೆಗೆ ಇಲಾಖೆಗಳು ಮಂಡಿಸಿರುವ ಅಂಕಿ ಅಂಶಗಳು ‘the-file.in’ಗೆ ಲಭ್ಯವಾಗಿವೆ.

ವಿಶೇಷವೆಂದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಇರುವ ಅರಣ್ಯ, ಜೀವಿಶಾಸ್ತ್ರ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ 2023ರ ಮಾರ್ಚ್ 16ರ ಅಂತ್ಯಕ್ಕೆ ಒಟ್ಟಾರೆ 12,598 ಕಡತಗಳು ವಿಲೇವಾರಿ ಆಗದೇ ಬಾಕಿ ಇವೆ.

ಇ-ಆಫೀಸ್ ತಂತ್ರಾಂಶವನ್ನು ಅಳವಡಿಸಿಕೊಂಡಿದ್ದರೂ ಬಹುತೇಕ ಇಲಾಖೆಗಳು ಸಾವಿರಾರು ಸಂಖ್ಯೆಯಲ್ಲಿ ಕಡತಗಳನ್ನು ವಿಲೇವಾರಿಗೆ ಬಾಕಿ ಇಟ್ಟುಕೊಂಡಿವೆ. ನಗರಾಭಿವೃದ್ಧಿ ಇಲಾಖೆಯಲ್ಲಿ 14,906 ಮತ್ತು ಕಂದಾಯ ಇಲಾಖೆಯಲ್ಲಿಯೇ 14,030 ಕಡತಗಳು ಬಾಕಿ ಇರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

2023 ಮಾರ್ಚ್ 16ರ ಅಂತ್ಯಕ್ಕೆ ಎಫ್‌ಎಂಎಸ್‌ನಲ್ಲಿ ಒಟ್ಟು 43,376 ಮತ್ತು ಇ ಆಫೀಸ್‌ನಲ್ಲಿ 1,02,425 ಕಡತಗಳಿದ್ದವು. ಒಟ್ಟಾರೆ 1,45,801 ಕಡತಗಳಿದ್ದವು. ಇದೇ ಅವಧಿಯಲ್ಲಿ ಹೊಸದಾಗಿ ಎಫ್‌ಎಂಎಸ್‌ನಲ್ಲಿ 3,200 ಮತ್ತು ಇ ಆಫೀಸ್‌ನಲ್ಲಿ 27,420 ಸೇರಿ ಒಟ್ಟು 30,620 ಕಡತಗಳಿದ್ದವು.

ಎಫ್‌ಎಂಎಸ್‌ನಲ್ಲಿದ್ದ 43,376 ಕಡತಗಳ ಪೈಕಿ ಮುಕ್ತಾಯಗೊಂಡ ಕಡತಗಳ ಸಂಖ್ಯೆ 2,060 ಸಂಖ್ಯೆಯಲ್ಲಿದ್ದರೆ ಈ ಆಫೀಸ್‌ನಲ್ಲಿದ್ದ 1,02,425 ಕಡತಗಳ ಪೈಕಿ 25,639 ಸೇರಿ ಒಟ್ಟಾರೆ 27,699 ಕಡತಗಳು ಮುಕ್ತಾಯಗೊಂಡಿದ್ದವು. ಉಳಿದಂತೆ ವಿಲೇವಾರಿಗೆ ಎಫ್‌ಎಂಎಸ್‌ನಲ್ಲಿ 44,576, ಇ ಅಫೀಸ್‌ನಲ್ಲಿ 1,04,206 ಸೇರಿ ಒಟ್ಟಾರೆ 1,48,782 ಕಡತಗಳು ಬಾಕಿ ಇರುವುದು ಅಂಕಿ ಅಂಶಗಳಿಂದ ಗೊತ್ತಾಗಿದೆ.

ಅದೇ ರೀತಿ ಕಡತ ವಿಲೇವಾರಿಗೆ ಸಂಬಂಧಿಸಿದಂತೆ ಮೂರು ಇಲಾಖೆಗಳು ‘ಡಿ’ (ಶೇ.30ರಿಂದ 50)ವರ್ಗದಲ್ಲಿದ್ದವು.

ಡಿ ವರ್ಗದಲ್ಲಿರುವ ಇಲಾಖೆಗಳ ಪಟ್ಟಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ 2023ರ ಮಾರ್ಚ್ 16ರವರೆಗೆ ವಿಲೇವಾರಿಗೆ ಬಾಕಿ ಇದ್ದ ಕಡತಗಳ ಸಂಖ್ಯೆ 2,261 (ಶೇ.31.37), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ 1,294 (ಶೇ. 43.22), ಮುಖ್ಯಮಂತ್ರಿ ಬೊಮ್ಮಾಯಿ ಅವರ ಬಳಿ ಇರುವ ಅರಣ್ಯ ಮತ್ತು ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ 7,418 (ಶೇ. 48.32) ಕಡತಗಳು ವಿಲೇವಾರಿಗೆ ಬಾಕಿ ಇವೆ.

ಸಿ ವರ್ಗದಲ್ಲೂ (ಶೇ.50ರಿಂದ 75) 2023ರ ಮಾರ್ಚ್ 16ರ ಅಂತ್ಯಕ್ಕೆ 69,135 ಕಡತಗಳು ವಿಲೇವಾರಿಗೆ ಬಾಕಿ ಇವೆ.

ಸಿ ವರ್ಗದಲ್ಲಿರುವ ಇಲಾಖೆಗಳ ಪಟ್ಟಿ

ಕೃಷಿ-2, 078, ಲೋಕೋಪಯೋಗಿ-6,273, ಆರೋಗ್ಯ ಕುಟುಂಬ ಕಲ್ಯಾಣ-6,265, ನಗರಾಭಿವೃದ್ಧಿ-14,906, ಹಿಂದುಳಿದ ವರ್ಗಗಳ ಕಲ್ಯಾಣ-990, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ-2,813, ಕಾನೂನು-2,583, ಆಹಾರ ಮತ್ತು ನಾಗರಿಕ ಸರಬರಾಜು- 1,269, ಸಿಬ್ಬಂದಿ ಆಡಳಿತ ಸುಧಾರಣೆ- 3,702, ಮೂಲಭೂತ ಸೌಕರ್ಯ, ಅಭಿವೃದ್ಧಿ- 1,174, ಸಹಕಾರ - 1,645, ಅಲ್ಪಸಂಖ್ಯಾತ, ಹಜ್ ವಕ್ಫ್- 287, ಸಣ್ಣ ನೀರಾವರಿ-1,717, ಇಂಧನ-2,297, ಕಂದಾಯ-14,030, ವಸತಿ-1,289 ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರ ಬಳಿ ಇರುವ ಗ್ರಾಮೀಣಾಭಿವೃದ್ಧಿ ಪಂ.ರಾಜ್‌ನಲ್ಲಿ 5,180, ಕಡತಗಳು ಬಾಕಿ ಇವೆ.

ಇನ್ನು ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ ಇಲಾಖಾ ಮುಖ್ಯಸ್ಥರು ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ನಿರಂತರವಾಗಿ ಸಭೆ ನಡೆಸಿ ಮೇಲ್ವಿಚಾರಣೆ ನಡೆಸುತ್ತಿದ್ದರೂ ಕಳೆದ ಎರಡು ವರ್ಷಗಳಿಂದಲೂ ಕಡತಗಳ ವಿಲೇವಾರಿಗೆ ಚಿರತೆ ವೇಗವೇ ಸಿಕ್ಕಿಲ್ಲ.

ಕಡತ ವಿಲೇವಾರಿಗೆ ಬೊಮ್ಮಾಯಿ ಅದೆಷ್ಟೇ ಗಡುವು ನೀಡಿ ಎಚ್ಚರಿಕೆ ನೀಡಿದ್ದರೂ 2021ರ ಅಕ್ಟೋಬರ್ 25ರ ಅಂತ್ಯಕ್ಕೆಒಟ್ಟು 31,308 ಕಡತಗಳು ವಿಲೇವಾರಿಗೆ ಬಾಕಿ ಉಳಿದಿದ್ದವು. ಇದೇ ಅವಧಿಯಲ್ಲಿ 18 ಇಲಾಖೆಗಳ ಮುಖ್ಯಸ್ಥರ ಹಂತದಲ್ಲೇ 31,308 ಕಡತಗಳು ವಿಲೇವಾರಿಯಾಗಿರಲಿಲ್ಲ. ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುವ ಹಣಕಾಸು ಇಲಾಖೆಯಲ್ಲಿಯೇ 2021ರ ಅಕ್ಟೋಬರ್ 27ರ ಅಂತ್ಯಕ್ಕೆ 3,351 ಕಡತಗಳು ಬಾಕಿ ಉಳಿದಿದ್ದವು.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಂದೇ ಕಡತ ವಿಲೇವಾರಿಗೆ ಸೂಚಿಸಿದ್ದರಲ್ಲದೆ 15 ದಿನದಲ್ಲಿ ಕಡತಗಳು ವಿಲೇವಾರಿಯಾಗಿರಬೇಕು ಎಂದೂ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದರು. ಹಿಂದಿನ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಪ್ರತೀ ತಿಂಗಳು ಅಧಿಕಾರಿಗಳ ಸಭೆ ನಡೆಸುತ್ತಿದ್ದರಾದರೂ ಕಡತ ವಿಲೇವಾರಿಯಲ್ಲಿ ಒಂದಿನಿತೂ ಪ್ರಗತಿಯಾಗಿಲ್ಲ.

ಹಾಗೆಯೇ 2021ರ ಆಗಸ್ಟ್ ಅಂತ್ಯಕ್ಕೆ 41 ಆಡಳಿತ ಇಲಾಖೆಗಳಲ್ಲಿ 1.60 ಲಕ್ಷ ಕಡತಗಳು ವಿಲೇವಾರಿಗೆ ಬಾಕಿ ಇದ್ದವು. ಈ ಪೈಕಿ 31,077 ಕಡತಗಳು ಈ ಆಫೀಸ್‌ನಲ್ಲಿಯೇ ವಿಲೇವಾರಿ ಆಗಿರಲಿಲ್ಲ. ನಗರಾಭಿವೃದ್ಧಿ ಇಲಾಖೆಯಲ್ಲಿ 11,250, ಕಂದಾಯ ಇಲಾಖೆಯಲ್ಲಿ 9,314, ಪ್ರಾಥಮಿಕ, ಪ್ರೌಢಶಿಕ್ಷಣದಲ್ಲಿ 7,689, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ 5,446, ಜಲ ಸಂಪನ್ಮೂಲ ಇಲಾಖೆಯಲ್ಲಿ 5,490 ಕಡತಗಳು ಬಾಕಿ ಇದ್ದವು.

ಕಡತಗಳ ವಿಲೇವಾರಿಗೆ ಅಧೀನ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿಗಳನ್ನು ಕಡತ ವಿಲೇವಾರಿ ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಲು ಮುಂದಾಗಿದೆ. ನೋಡೆಲ್ ಅಧಿಕಾರಿಗಳು ಕಾನೂನು ಇಲಾಖೆ ಸಂಯೋಜನೆ ಮಾಡಿ ಎರಡು ತಿಂಗಳೊಳಗೆ ಕಡತ ವಿಲೇವಾರಿ ಮಾಡಿಸಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದ್ದನ್ನು ಸ್ಮರಿಸಬಹುದು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top