Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಆಡಿಯೋ ವೈರಲ್ ವಿವಾದ; ತಿಮ್ಮಾಪುರ ಜೊತೆ...

ಆಡಿಯೋ ವೈರಲ್ ವಿವಾದ; ತಿಮ್ಮಾಪುರ ಜೊತೆ ಮಾತನಾಡಿದ್ದು ನಿಜ, ಆದರೆ ವಿಷಯ ತಿರುಚಲಾಗಿದೆ : ಎಸ್.ಜಿ.ನಂಜಯ್ಯನಮಠ

ವಾರ್ತಾಭಾರತಿವಾರ್ತಾಭಾರತಿ6 Aug 2026 1:09 PM IST
share
ಆಡಿಯೋ ವೈರಲ್ ವಿವಾದ; ತಿಮ್ಮಾಪುರ ಜೊತೆ ಮಾತನಾಡಿದ್ದು ನಿಜ, ಆದರೆ ವಿಷಯ ತಿರುಚಲಾಗಿದೆ : ಎಸ್.ಜಿ.ನಂಜಯ್ಯನಮಠ
"ಹೈಕಮಾಂಡ್ ಅಥವಾ ಪೇಮೆಂಟ್ ಸೀಟ್ ಕುರಿತು ನಾವು ಯಾವುದೇ ಮಾತುಕತೆ ನಡೆಸಿಲ್ಲ"

ಬಾಗಲಕೋಟೆ : ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿರುವುದು ನಿಜ. ಆದರೆ ಆ ಮಾತುಕತೆಯಲ್ಲಿ ಇಲ್ಲದ ವಿಷಯಗಳನ್ನು ಸೇರಿಸಿ ಷಡ್ಯಂತ್ರ ರೂಪಿಸಿ ವೈರಲ್ ಮಾಡಲಾಗಿದೆ ಎಂದು ಕಾಂಗ್ರೆಸ್ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಸ್ಪಷ್ಟನೆ ನೀಡಿದ್ದಾರೆ.

ನಗರದ ನವನಗರ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವರಾದ ಬಳಿಕ ವಿಜಯಾನಂದ ಕಾಶಪ್ಪನವರ ಅವರನ್ನು ಭೇಟಿ ಮಾಡಿ ಸನ್ಮಾನಿಸಿದ್ದೇನೆ. ಅವರು ನನ್ನೊಂದಿಗೆ ಗೌರವಯುತವಾಗಿ ನಡೆದುಕೊಂಡಿದ್ದಾರೆ. ಸನ್ಮಾನ ಕಾರ್ಯಕ್ರಮದಿಂದ ಹಿಂದಿರುಗುವ ವೇಳೆ ಕಾರಿನಲ್ಲಿ ತಿಮ್ಮಾಪುರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದು ಹೇಳಿದರು.

ಸಚಿವ ಸಂಪುಟದ ಬಗ್ಗೆ ತಿಮ್ಮಾಪುರ ಅವರೊಂದಿಗೆ ಅಸಮಾಧಾನ ವ್ಯಕ್ತಪಡಿಸಿರುವುದು ನಿಜ. ಆದರೆ ವೈರಲ್ ಆಗಿರುವ ಆಡಿಯೋದಲ್ಲಿ ಕೆಲವೊಂದು ವಿಷಯಗಳನ್ನು ಉದ್ದೇಶಪೂರ್ವಕವಾಗಿ ಸೇರಿಸಲಾಗಿದೆ. ಹೈಕಮಾಂಡ್ ಅಥವಾ ‘ಪೇಮೆಂಟ್ ಸೀಟ್’ ಕುರಿತು ನಾವು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ತಮ್ಮ ಹಾಗೂ ತಿಮ್ಮಾಪುರ ಅವರ ನಡುವೆ ಭಿನ್ನಾಭಿಪ್ರಾಯ ಉಂಟುಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ. ಇದರ ಹಿಂದೆ ಬಿಜೆಪಿ ಕಾರ್ಯಕರ್ತರ ಕೈವಾಡ ಇರಬಹುದೆಂಬ ಅನುಮಾನವಿದೆ ಎಂದು ಆರೋಪಿಸಿದರು.

ಈ ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿ, ಆಡಿಯೋ ವೈರಲ್ ಮಾಡಿದವರು ಯಾರು ಹಾಗೂ ಅದರಲ್ಲಿ ಸುಳ್ಳು ಮಾಹಿತಿಯನ್ನು ಸೇರಿಸಿರುವವರ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸುವುದಾಗಿ ತಿಳಿಸಿದರು.

“ನಾನು ಕಟ್ಟಾ ಕಾಂಗ್ರೆಸ್ ಕಾರ್ಯಕರ್ತ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ” ಎಂದು ಎಸ್.ಜಿ. ನಂಜಯ್ಯನಮಠ ಸ್ಪಷ್ಟಪಡಿಸಿದರು.

Tags

S.G.NanjayyanamathTimmapurAudio Viral
share
ವಾರ್ತಾಭಾರತಿ
ವಾರ್ತಾಭಾರತಿ
Next Story
X