Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. Bagalkote | ಪಕ್ಷ ವಿರೋಧಿ ಚಟುವಟಿಕೆ...

Bagalkote | ಪಕ್ಷ ವಿರೋಧಿ ಚಟುವಟಿಕೆ ಆರೋಪ : ಕಾಂಗ್ರೆಸ್‌ನ ಮೂವರು ಮುಖಂಡರು ಅಮಾನತು

ವಾರ್ತಾಭಾರತಿವಾರ್ತಾಭಾರತಿ28 April 2026 1:52 PM IST
share
Bagalkote | ಪಕ್ಷ ವಿರೋಧಿ ಚಟುವಟಿಕೆ ಆರೋಪ : ಕಾಂಗ್ರೆಸ್‌ನ ಮೂವರು ಮುಖಂಡರು ಅಮಾನತು

ಬಾಗಲಕೋಟೆ : ವಿಧಾನಸಭೆ ಉಪಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕಮತಗಿಯ ಮೂವರು ಕಾಂಗ್ರೆಸ್ ಮುಖಂಡರ ವಿರುದ್ಧ ಪಕ್ಷ ಅಮಾನತು ಕ್ರಮ ಕೈಗೊಂಡಿದೆ. ಉಚ್ಚಾಟನೆ ಭೀತಿ ಎದುರಿಸುತ್ತಿದ್ದ ಅವರು ಕೊನೆಗೂ ಅಮಾನತುಗೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರು ಕಮತಗಿ ಪಟ್ಟಣ ಪಂಚಾಯತ್‌ ಸದಸ್ಯರಾದ ರಮೇಶ್ ಜಮಖಂಡಿ, ಗುರು ಪಾಟೀಲ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ದೂರುದಾರರಿಂದ ಕ್ರಮಕ್ಕೆ ಒತ್ತಾಯ :

ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಂ.ರಾಂಪೂರ ಹಾಗೂ ಕಮತಗಿ ಪಪಂ ಸದಸ್ಯರು, ಉಪಚುನಾವಣೆಯಲ್ಲಿ ಈ ಮೂವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಜಿಲ್ಲಾಧ್ಯಕ್ಷರಿಗೆ ದೂರು ಸಲ್ಲಿಸಿದ್ದರು.

ನೋಟಿಸ್ ಬಳಿಕ ಅಮಾನತು :

ದೂರು ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರು ಮೂವರಿಗೆ ಮೂರು ದಿನಗಳ ಗಡುವಿನೊಂದಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರು. ಮೂವರೂ ಲಿಖಿತ ಉತ್ತರ ಸಲ್ಲಿಸಿದ್ದರೂ, ಉತ್ತರಗಳು ಆಧಾರ ರಹಿತವಾಗಿವೆ ಎಂಬ ಕಾರಣ ನೀಡಿ ರವಿವಾರ ಸಂಜೆ ಅಮಾನತು ಆದೇಶ ಹೊರಡಿಸಲಾಗಿದೆ.

ಉಚ್ಚಾಟನೆ ನಿರೀಕ್ಷೆ ವಿಫಲ :

ಈ ಮೂವರ ವಿರುದ್ಧ ಉಚ್ಚಾಟನೆ ಕ್ರಮ ಜರುಗಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಉಚ್ಚಾಟನೆ ಬದಲು ಅಮಾನತು ಕ್ರಮ ಮಾತ್ರ ಕೈಗೊಳ್ಳಲಾಗಿದೆ. ಅಮಾನತುಗೊಂಡ ಮೂವರು ಕಮತಗಿ ಭಾಗದ ಪ್ರಭಾವಿ ಮುಖಂಡರಾಗಿದ್ದು, ಕಳೆದ ಒಂದು ವರ್ಷದಿಂದ ಅವರನ್ನು ಪಕ್ಷದಿಂದ ಹೊರಹಾಕುವ ಒತ್ತಡ ಇತ್ತು ಎನ್ನಲಾಗಿದೆ. ಆದರೆ ಪ್ರಭಾವಿ ನಾಯಕರ ಬೆಂಬಲದಿಂದ ಉಚ್ಚಾಟನೆ ತಪ್ಪಿಸಿಕೊಂಡಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ತಟಸ್ಥ ನಿಲುವೇ ಕಾರಣ? :

ಉಪಚುನಾವಣೆಯಲ್ಲಿ ತಮಗೆ ಸೂಕ್ತ ಗೌರವ ಸಿಗುತ್ತಿಲ್ಲ, ತಮ್ಮನ್ನು ರಾಜಕೀಯವಾಗಿ ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನದಿಂದ ಮೂವರು ತಟಸ್ಥ ನಿಲುವು ತಾಳಿದ್ದರು ಎನ್ನಲಾಗಿದೆ. ಇದನ್ನೇ ಕೆಲವರು ಪಕ್ಷ ವಿರೋಧಿ ಚಟುವಟಿಕೆ ಎಂದು ಆರೋಪಿಸಿ ಕ್ರಮಕ್ಕೆ ಒತ್ತಾಯಿಸಿದ್ದರು.

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೂವರೂ ಮುಖಂಡರು ಪಕ್ಷದ ಪ್ರಭಾವಿ ಮುಖಂಡರ ಜತೆ ಒಳ್ಳೆಯ ರಾಜಕೀಯ ಒಡನಾಟ ಹೊಂದಿದ್ದಾರೆ. ಅವರ ಉಚ್ಚಾಟನೆ ತಡೆಗೆ ಪ್ರಭಾವಿಗಳು ಪ್ರಭಾವ ಬೀರಿದ್ದರಿಂದ ಉಚ್ಚಾಟನೆ ಕ್ರಮದಿಂದ ಅವರು ಪರಾಗಿದ್ದು, ಅಮಾನತು ಕ್ರಮಕ್ಕೆ ಒಳಗಾಗಿದ್ದಾರೆ.

Tags

anti-party activitiesCongressBagalkote
share
ವಾರ್ತಾಭಾರತಿ
ವಾರ್ತಾಭಾರತಿ
Next Story
X