Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಬಾಗಲಕೋಟೆಯ 4 ತಾಲ್ಲೂಕಿನಲ್ಲಿ ಬರ...

ಬಾಗಲಕೋಟೆಯ 4 ತಾಲ್ಲೂಕಿನಲ್ಲಿ ಬರ ಪರಿಶೀಲನೆ; ಸರಿಯಾಗಿ ಬೆಳೆ ಬಂದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್

"ಮನಮೋಹನ್ ಸಿಂಗ್ ಅವರು ಸಾಲಮನ್ನಾ ಮಾಡಿದಂತೆ ಕೇಂದ್ರ ಸಾಲಮನ್ನಾ ಮಾಡಲಿ"

ವಾರ್ತಾಭಾರತಿವಾರ್ತಾಭಾರತಿ4 Sept 2026 10:34 PM IST
share
ಬಾಗಲಕೋಟೆಯ 4 ತಾಲ್ಲೂಕಿನಲ್ಲಿ ಬರ ಪರಿಶೀಲನೆ; ಸರಿಯಾಗಿ ಬೆಳೆ ಬಂದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್

ಬಾಗಲಕೋಟೆ: "ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಗೆ ಭೇಟಿ ಕೊಟ್ಟಿದ್ದೇನೆ, ಎಲ್ಲೂ ಯಾವುದೇ ಬೆಳೆ ಸರಿಯಾಗಿ ಬಂದಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬಾಗಲಕೋಟೆ ಜಿಲ್ಲೆಯ ಶಿರೂರ್ ಗ್ರಾಮದಲ್ಲಿ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ಬಳಿಕ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

"ಸೂರ್ಯಕಾಂತಿ ಇಲ್ಲ, ಮೆಣಸು ಇಲ್ಲ, ಹುರುಳಿ ಇಲ್ಲ, ತೊಗರಿ ಇಲ್ಲ. ಕೆಲವರು 20-30 ಎಕರೆ ಬಿತ್ತಿದ್ದಾರೆ, ವಿಮೆ ಮಾಡಿಸಿದ್ದೇವೆ ಎನ್ನುತ್ತಿದ್ದಾರೆ. ನಾನು ಅಧಿಕಾರಿಗಳು, ಶಾಸಕರ ಜೊತೆ ಚರ್ಚಿಸಿ ಪರಿಹಾರ ಏನು ಮಾಡಬಹುದು ಎಂದು ನೋಡುತ್ತೇನೆ. ಕೆಲವು ಕಡೆ ಬರ ಘೋಷಣೆ ಆಗಿದೆ, ಇನ್ನ ಕೆಲವು ಕಡೆ ಬರ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ" ಎಂದರು.

"ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ, ಉಳುಮೆ, ಟ್ರಾಕ್ಟರ್ ಖರ್ಚು ಎಷ್ಟು ಬೀಳುತ್ತಿದೆ ಎಂದು ನಾನೇ ಖುದ್ದಾಗಿ ಅಧ್ಯಯನ ಮಾಡಿದ್ದೇನೆ. ಮುಂದೆ ಏನು ಸಹಾಯ ಮಾಡಬಹುದು ಎಂದು ಯೋಚಿಸುತ್ತಿದ್ದೇನೆ. ನೋಡಕ್ಕೆ ಹಸಿ ಇರುತ್ತೆ, ಆದರೆ ಬೆಳೆ ಇರಲ್ಲ. ಸೂರ್ಯಕಾಂತಿ ಒಣಗಿದೆ, ಮೆಣಸಿನಕಾಯಿಗೆ ರೋಗ ಬಂದಿದೆ. ಹಸಿರು ಇದ್ದ ಮಾತ್ರಕ್ಕೆ ಬೆಳೆ ಕೈಗೆ ಬಂದಂತೆ ಅಲ್ಲ" ಎಂದು ಹೇಳಿದರು.

ರೈತರಿಗೆ ನೆರವು ನೀಡುವುದು ಕೇಂದ್ರದ ಜವಾಬ್ದಾರಿ

"ಕೇಂದ್ರ ಸರ್ಕಾರದವರು ರೈತರ ಸಹಾಯಕ್ಕೆ ಬರಬೇಕು. ಇದು ಬಿಜೆಪಿಯವರ ಜವಾಬ್ದಾರಿ. ಅವರ ಶಾಸಕರು ಕೇಂದ್ರ ಸರ್ಕಾರ, ಪ್ರಧಾನಿ ಮೇಲೆ ಒತ್ತಾಯ ಮಾಡಿ ಸಾಲಮನ್ನಾ ಮಾಡಿಸಬೇಕು. ಹಿಂದೆ ನಮ್ಮ ಸರ್ಕಾರ ಮನಮೋಹನ್ ಸಿಂಗ್ ಅವರು ಮಾಡಿದರು, ಇವರು ಕೂಡ ಮಾಡಬೇಕು. ಬ್ಯಾಂಕ್ ಗಳು ಅವರ ಹಿಡಿತದಲ್ಲಿದೆ" ಎಂದರು.

"ಹಿಂದಿನ ವಿಮೆ ಇನ್ನೂ ಬಂದಿಲ್ಲ, ಅದಕ್ಕೇ ಮೀಟಿಂಗ್ ಮಾಡುತ್ತಿದ್ದೇನೆ. ಅರ್ಧ ನೀರಾವರಿ, ಅರ್ಧ ಖುಷ್ಕಿ ಎಂದು ಲೆಕ್ಕ ಹಾಕುವುದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ವರದಿ ಕಳಿಸಿದ್ದೇನೆ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಎರಡನೇ ಪಟ್ಟಿ ಪರಿಶೀಲಿಸುತ್ತಿದ್ದಾರೆ, ಆದಷ್ಟು ಬೇಗ ಘೋಷಣೆ ಮಾಡುತ್ತೇವೆ" ಎಂದರು.

ಫಸಲ್ ಬಿಮಾ ಯೋಜನೆಯಲ್ಲಿ 30 ಕೋಟಿ ರೂ. ಹಗರಣ

ಫಸಲ್ ಬಿಮಾ ಯೋಜನೆಯಲ್ಲಿ ಬಾಗಲಕೋಟೆಯಲ್ಲಿ 30 ಕೋಟಿ ಹಗರಣ ಆಗಿದೆ, ಅಧಿಕಾರಿಗಳೇ ದೂರು ಕೊಟ್ಟು ಎಫ್ಐಆರ್ ಆಗಿದೆ, ಆದರೆ ಕ್ರಮ ಇಲ್ಲ, ಏಜೆಂಟ್ಗಳ ಜಾಲ ಇದೆ ಎಂದು ಮಾಧ್ಯಮಗಳು ಗಮನ ಸೆಳೆದಾಗ, "ಇದು ರಾಜ್ಯ ಮಟ್ಟದ ಜಾಲ, ವಿಮೆಯಲ್ಲಿ ದೊಡ್ಡ ಜಾಲ ಇದೆ. ವರದಿ ತರಿಸಿ ಬೆಂಗಳೂರಲ್ಲಿ ಮೀಟಿಂಗ್ ಮಾಡುತ್ತೇನೆ" ಎಂದು ಹೇಳಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X