Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಕೈ ತಪ್ಪಿದ ಬಾಗಲಕೋಟೆ ಟಿಕೆಟ್; ಪಕ್ಷ...

ಕೈ ತಪ್ಪಿದ ಬಾಗಲಕೋಟೆ ಟಿಕೆಟ್; ಪಕ್ಷ ಬಿಡಲ್ಲ, ಹುದ್ದೆ ಬಿಡುತ್ತೇನೆ ಎಂದ ವೀಣಾ ಕಾಶಪ್ಪನವರ್

ವಾರ್ತಾಭಾರತಿವಾರ್ತಾಭಾರತಿ29 March 2024 3:06 PM IST
share
ಕೈ ತಪ್ಪಿದ ಬಾಗಲಕೋಟೆ ಟಿಕೆಟ್; ಪಕ್ಷ ಬಿಡಲ್ಲ, ಹುದ್ದೆ ಬಿಡುತ್ತೇನೆ ಎಂದ ವೀಣಾ ಕಾಶಪ್ಪನವರ್

ಬಾಗಲಕೋಟೆ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಂಯುಕ್ತಾ ಪಾಟೀಲ ಅವರ ಹೆಸರು ಘೋಷಣೆಯಾದ ಬಳಿಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತಲೆ ಎತ್ತಿರುವ ಬಗ್ಗೆ ವರದಿಯಾಗಿದೆ.

ಸಂಯುಕ್ತಾ ಪಾಟೀಲ ಅಭ್ಯರ್ಥಿಯಾದ ಬಳಿಕ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಿಎಂ ಡಿಸಿಎಂ ನೇತೃತ್ವದ ಸಭೆಯಲ್ಲಿ ಸಂಧಾನವೂ ವಿಫಲವಾಗಿದೆ ಎನ್ನಲಾಗಿದೆ. ಇದೀಗ ವೀಣಾ ಕಾಶಪ್ಪನವರ್ ತಟಸ್ಥರಾಗಿ ಉಳಿಯಬೇಕು ಎಂದು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವೀಣಾ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತರೂ, ಧೃತಿಗೆಡದೆ ಮತ್ತೆ ಇಡೀ ಕ್ಷೇತ್ರದಲ್ಲಿ ಸಂಚಾರ ಮಾಡುತ್ತ, ತಮ್ಮದೇ ಆದ ಛಾಪು ಮೂಡಿಸಿದ್ದರು. ಆದರೆ ಕೊನೆಯ ಘಳಿಗೆಯಲ್ಲಿ ಹೈಕಮಾಂಡ್ ಸಂಯುಕ್ತಾ ಪಾಟೀಲ ಅವರೆಡೆಗೆ ಒಲವು ತೋರಿದ್ದರಿಂದ, ವೀಣಾ ಅವರ ಟಿಕೆಟ್ ಕೈ ತಪ್ಪಿದೆ. ಗುರುವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ, ಟಿಕೆಟ್ ಬದಲಾವಣೆ ಮಾಡಲು ಸಾಧ್ಯವಿಲ್ಲ. ಪಕ್ಷವು ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುವಂತೆ ಶ್ರಮ ವಹಿಸಿ, ಮುಂದೆ ಏನಾದರೂ ಮಾಡೋಣವೆಂದು ಹೇಳಿದ್ದಾಗಿ ತಿಳಿದು ಬಂದಿದೆ.

ತನಗಿಂತ ಸಂಯುಕ್ತಾ ಪಾಟೀಲ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡಿದ್ದಾರೆ ಎಂದು ಮುಖಂಡರು ಹೇಳಿರುವುದು ವೀಣಾ ಮನಸ್ಸಿಗೆ ನೋವಾಗಿದೆ. ಐದು ವರ್ಷದಿಂದ ಕೆಲಸ ಮಾಡಿದರೂ, ಈಗ ತಾನೆ ಬಂದಿರುವ ಸಂಯುಕ್ತಾರನ್ನು ಎಲ್ಲರೂ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆ ಮಾಡಿದರೆ ಸೂಕ್ತ ಸ್ಥಾನ ಮಾನ ಸಿಗಲ್ಲ. ನಾನೇಕೆ ಈಗ ಚುನಾವಣೆಗೆ ಕೆಲಸ ಮಾಡಬೇಕು. ನನಗೆ ಅನ್ಯಾಯವಾಗಿದೆ, ತಟಸ್ಥವಾಗಿ ಉಳಿಯುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಬಿಜೆಪಿಯಲ್ಲಿ ಆಹ್ವಾನ ಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದಲ್ಲಿನ ನಿಷ್ಠೆ ಹಾಗೂ ಇಲ್ಲಿಯೇ ಟಿಕೆಟ್ ಸಿಗಲಿದೆ ಎಂಬ ಕಾರಣದಿಂದಾಗಿ ವೀಣಾ ಕಾಶಪ್ಪನವರ ನಿರಾಕರಿಸಿದದ್ದರು ಎನ್ನಲಾಗಿದೆ. ಈಗ ಕಾಂಗ್ರೆಸ್ ಪಕ್ಷದಿಂದಲೇ ಅನ್ಯಾಯವಾಗಿರುವುದರಿಂದ ಪಕ್ಷದ ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷೆ ಸ್ಥಾನ ಸೇರಿದಂತೆ, ಪಕ್ಷದ ಇತರ ಹುದ್ದೆಗಳಿಗೆ ರಾಜಿನಾಮೆ ನೀಡಿ, ತಟಸ್ಥವಾಗಿ ಉಳಿಯಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿರುವ ಪತಿ ವಿಜಯಾನಂದ ಕಾಶಪ್ಪನವರ ಅವರಿಗೆ ಲಿಂಗಾಯತ ಅಭಿವೃದ್ಧಿ ನಿಗಮ ನೀಡಿದ್ದಾರೆ. ಹೀಗಾಗಿ ಪತಿಗೆ ವಿರೋಧ ಮಾಡಿ, ಪಕ್ಷೇತರ ನಿಲ್ಲಲ್ಲು ಸಾಧ್ಯವಿಲ್ಲ. ರಾಜ್ಯ ಮಟ್ಟದ ಮಹಿಳಾ ಘಟಕದ ಅಧ್ಯಕ್ಷರಾಗುವಂತೆ ಪಕ್ಷದಿಂದ ವೀಣಾಗೆ ಆಹ್ವಾನ ಬಂದಿದೆ. ಆದರೆ ಈ ಬಗ್ಗೆ ವೀಣಾ ಕಾಶಪ್ಪನವರ್ ಒಲವು ತೋರಿಸಿಲ್ಲ. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದರಿಂದ ಅಧಿಕಾರ ಸಿಗುವ ಖಚಿತತೆಯಿತ್ತು. ಆದರೆ ಕೊನೆಯ ಘಳಿಗೆಯಲ್ಲಿ ಅನ್ಯಾಯವಾಗಿದೆ. ಪಕ್ಷ ನಡೆಸಿಕೊಂಡ ರೀತಿಗೆ ಬೇಸರಗೊಂಡ ವೀಣಾ ಕಾಶಪ್ಪನವರ ತಟಸ್ಥರಾಗಿ ಉಳಿಯಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Tags

BagalkotVeena Kashappanavar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X