Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸದನದಲ್ಲಿ ಪದಗಳ ಪ್ರಯೋಗ ಬಗ್ಗೆ ಎಚ್ಚರಿಕೆ...

ಸದನದಲ್ಲಿ ಪದಗಳ ಪ್ರಯೋಗ ಬಗ್ಗೆ ಎಚ್ಚರಿಕೆ ಅಗತ್ಯ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 Aug 2025 9:44 PM IST
share
ಸದನದಲ್ಲಿ ಪದಗಳ ಪ್ರಯೋಗ ಬಗ್ಗೆ ಎಚ್ಚರಿಕೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ.13: ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ನಾವು ಸದನದಲ್ಲಿ ಬಳಸುವಂತಹ ಪದಗಳ ಬಗ್ಗೆ ಬಹಳ ಎಚ್ಚರಿಕೆ ವಹಿಸುವುದು ಅಗತ್ಯ. ನಮ್ಮ ನಡೆ, ನುಡಿಗಳನ್ನು ಜನತೆ, ವಿದ್ಯಾರ್ಥಿಗಳು ನೋಡುತ್ತಿರುತ್ತಾರೆ. ಆದುದರಿಂದ, ಪ್ರತಿಯೊಬ್ಬರೂ ತಾವು ಹೇಗಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಅಶ್ವತ್ಥ ನಾರಾಯಣ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೆ.ಜೆ.ಜಾರ್ಜ್ ನಡುವೆ ನಡೆದಂತಹ ವಾಗ್ವಾದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಸರಕಾರದ ವಿರುದ್ಧ ಟೀಕೆ ಮಾಡಲು ನಮ್ಮ ವಿರೋಧವಿಲ್ಲ. ಆದರೆ, ಪದ ಪ್ರಯೋಗ ಮಾಡುವಾಗ, ವಿಷಯಾಂತರ ಮಾಡುವುದು, ವೈಯಕ್ತಿಕ ದ್ವೇಷ ತೀರಿಸಿಕೊಳ್ಳುವ ರೀತಿ ಮಾತನಾಡುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.

ಟೀಕೆಗಳು ರಚನಾತ್ಮಕವಾಗಿ ಇರಬೇಕು. ಸರಕಾರ ನಡೆಸುತ್ತಿರುವವರು ಏನು ಹೇಳಬೇಕೋ ವಸ್ತು ಸ್ಥಿತಿ ತಿಳಿಸುತ್ತೇವೆ. ನಾವು ಯಾರು ಕೂಡ ಬೃಹಸ್ಪತಿಗಳಲ್ಲ. ಹೊಸ ಸದಸ್ಯರು ಅನೇಕ ಮಂದಿ ಈ ಸದನಕ್ಕೆ ಬಂದಿದ್ದಾರೆ. ಅವರಿಗೆ ಹಿರಿಯರಾದ ನಾವು ಮಾದರಿಯಾಗಿರಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಎರಡು ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 13 ಚುನಾವಣೆಗಳನ್ನು ಎದುರಿಸಿದ್ದೇನೆ. ಸಂಸತ್ತಿಗೆ ಹೋಗಬೇಕು ಅನ್ನೋ ಆಸೆ ಇತ್ತು. ಆದರೆ, ಜನ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ತಿರಸ್ಕರಿಸಿದ್ದರಿಂದ ಮುಂದೆ ಲೋಕಸಭಾ ಚುನಾವಣೆಗೆ ನಿಲ್ಲಬಾರದು ಎಂದು ನಿರ್ಧರಿಸಿದೆ ಎಂದು ಅವರು ಹೇಳಿದರು.

ಅಶ್ವತ್ಥ ನಾರಾಯಣ ಅವರ ಗಂಟಲು ಜೋರಾಗಿದೆ. ಅದನ್ನು ದುರುಪಯೋಗ ಮಾಡಿಕೊಳ್ಳಬೇಡಿ. ಜಾರ್ಜ್ ಹಿರಿಯ ಸದಸ್ಯ ಅವರ ವಿರುದ್ಧ ಆರೋಪ ಮಾಡುವಾಗ ಏಕ ವಚನದಲ್ಲಿ ಮಾತನಾಡುವುದು, ಅಸಮರ್ಥ ಅನ್ನೋದು ಸರಿಯಲ್ಲ. ಇನ್ನು ಮುಂದೆ ನಮ್ಮ ಸದನ ಬೇರೆಯವರಿಗೆ ಮಾದರಿಯಾಗುವ ರೀತಿಯಲ್ಲಿ ನಡೆದುಕೊಳ್ಳೋಣ ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

‘ನಮ್ಮ ರಾಜ್ಯದ ವಿಧಾನಸಭೆಗೆ ವಿಶೇಷ ಸ್ಥಾನಮಾನ ಇದೆ. ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ನಡೆಯುವ ಕಲಾಪಗಳನ್ನು ನೋಡಿದ್ದೇವೆ. ನಮ್ಮ ರಾಜ್ಯದಲ್ಲಿ ನಮ್ಮದೆ ಅದ ಘನತೆ, ಗೌರವ ಇಟ್ಟುಕೊಂಡು ಬಂದಿದ್ದೇವೆ. ವೈಯಕ್ತಿಕವಾಗಿ ಮಾತನಾಡುವುದು ಸರಿಯಲ್ಲ. ಸರಕಾರವನ್ನು ಟೀಕಿಸೋಣ, ವೈಯಕ್ತಿಕ ಟೀಕೆಗಳು ಮಾಡದೆ ಇದ್ದರೆ ಒಳ್ಳೆಯದು. ನಮ್ಮನ್ನು ಜನ ಇಲ್ಲಿ ಕೂರಿಸಿರುವುದು ಟೀಕೆ ಮಾಡಲು. ಸರಕಾರ ಮಾಡುವ ತಪ್ಪುಗಳು, ಅವ್ಯವಹಾರಗಳನ್ನು ಹೇಳಲೇ ಬೇಕು. ಆದರೆ, ಆಡಳಿತ ಪಕ್ಷದವರು ಸಂಯಮ ಕಳೆದುಕೊಳ್ಳಬಾರದು’

-ಆರ್.ಅಶೋಕ್, ವಿರೋಧ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X