Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೈಕೋರ್ಟ್ ತೀರ್ಪಿನ ನಂತರ ‘ಬೈಕ್...

ಹೈಕೋರ್ಟ್ ತೀರ್ಪಿನ ನಂತರ ‘ಬೈಕ್ ಟ್ಯಾಕ್ಸಿ ಯೋಜನೆ ಜಾರಿಗೆ ಬದ್ಧ’: ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ14 Aug 2025 12:56 AM IST
share
ಹೈಕೋರ್ಟ್ ತೀರ್ಪಿನ ನಂತರ ‘ಬೈಕ್ ಟ್ಯಾಕ್ಸಿ ಯೋಜನೆ ಜಾರಿಗೆ ಬದ್ಧ’: ರಾಮಲಿಂಗಾರೆಡ್ಡಿ

ಬೆಂಗಳೂರು, ಆ.13: ಹೈಕೋರ್ಟ್ ತೀರ್ಪಿನ ನಂತರ, ನ್ಯಾಯಾಲಯದ ತೀರ್ಪಿಗೆ ಬದ್ದರಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಯೋಜನೆಯನ್ನು ಜಾರಿಗೊಳಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬುಧವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 2018ರಂದು ಸರಕಾರದ ಮುಖ್ಯ ಕಾರ್ಯದರ್ಶಿಗಳು ನಡೆಸಿದ ಸಭೆಯ ತೀರ್ಮಾನದಂತೆ ಬೈಕ್ ಟ್ಯಾಕ್ಸಿ ಯೋಜನೆ ಜಾರಿಗೊಳಿಸುವ ಕುರಿತಾಗಿ ಸಾಧಕ-ಬಾಧಕಗಳನ್ನು ಪರಿಶೀಲಸಲು ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು 2019ರಂದು ಸಲ್ಲಿಸಿದ ವರದಿಯಲ್ಲಿ ಬೈಕ್ ಟ್ಯಾಕ್ಸಿ ಯೋಜನೆ ಜಾರಿಗೊಳಿಸುವುದು ಕಾರ್ಯಸಾಧುವಲ್ಲ ಎಂಬುದಾಗಿ ತಿಳಿಸಿತ್ತು ಎಂದರು.

2021ರಲ್ಲಿ ಸಾರ್ವಜನಿಕರಿಗೆ ಸಾರಿಗೆ ಸಂಪರ್ಕವನ್ನು ಕಲ್ಪಿಸುವ ಉದ್ದೇಶದಿಂದ ಸರಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಯೋಜನೆಯು ಬ್ಯಾಟರಿ ಚಾಲಿತ ವಿದ್ಯುತ್ ಮೋಟಾರು ಸೈಕಲ್ ಅಥವಾ ವಿದ್ಯುತ್ ಬೈಕ್‍ಗಳಿಗೆ ಮಾತ್ರ ಅನ್ವಯವಾಗತಕ್ಕದ್ದು ಎಂದು ಆದೇಶಿಸಿತ್ತು. ಆದರೆ ಪ್ರಸ್ತುತ ಕೆಲವು ಖಾಸಗಿ ಆಫ್ ಆಧಾರಿತ ಸಂಸ್ಥೆಗಳು ಮೋಟಾರು ವಾಹನ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಪೆಟ್ರೋಲ್ ದ್ವಿ-ಚಕ್ರ ವಾಹನಗಳನ್ನು ಉಪಯೋಗಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹಾಗಾಗಿ ಇದು ಕಾನೂನಿನಲ್ಲಿ ಅವಕಾಶವಿಲ್ಲದಿರುವುದರಿಂದ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಸರಕಾರ ರದ್ದುಗೊಳಿಸಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಓಲಾ, ಉಬರ್, ರಾಪಿಡೋ ಕಂಪೆನಿಗಳು ರಾಜ್ಯದಲ್ಲಿ ಬೈಕ್, ಟ್ಯಾಕ್ಸಿ ಸೇವೆಯನ್ನು ನಿರ್ವಹಿಸುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಂದೆ ರಿಟ್ ಅರ್ಜಿಗಳನ್ವಯ ಪ್ರಕರಣಗಳನ್ನು ದಾಖಲಿಸಿದ್ದು, ಅವುಗಳನ್ನು ನ್ಯಾಯಾಲಯವು ವಜಾಗೊಳಿಸಿದೆ. ಆದರೆ, ಊಬರ್, ಎಎನ್‍ಐ, ರೂಪೇನ್ ಮತ್ತು ಬೈಕ್ ಟ್ಯಾಕ್ಸಿ ವೆಲ್ಪೇರ್ ಅಸೋಸಿಯೇಷನ್‍ಗಳು ಹೈಕೋರ್ಟ್ ದ್ವಿ ಸದಸ್ಯ ಪೀಠದ ಮುಂದೆ ಸರಕಾರದ ವಿರುದ್ಧ ಪ್ರಕರಣಗಳನ್ನು ದಾಖಲಿಸಿವೆ. ಈ ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ಮುಗಿದ ನಂತರ ನ್ಯಾಯಾಲಯವು ಹೊರಡಿಸುವ ಆದೇಶದ ತೀರ್ಪಿಗೆ ಬದ್ಧರಾಗಿ ಕ್ರಮ ವಹಿಸಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X