Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಯುಷ್ ಇಲಾಖೆ ಮುಚ್ಚುವ ಪ್ರಸ್ತಾವನೆ...

ಆಯುಷ್ ಇಲಾಖೆ ಮುಚ್ಚುವ ಪ್ರಸ್ತಾವನೆ ಇಲ್ಲ; ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ26 Aug 2025 11:11 PM IST
share
ಆಯುಷ್ ಇಲಾಖೆ ಮುಚ್ಚುವ ಪ್ರಸ್ತಾವನೆ ಇಲ್ಲ; ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ

ಬೆಂಗಳೂರು: ಆಯುಷ್ ಇಲಾಖೆಯನ್ನು ಮುಚ್ಚುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದೆ ಇಲ್ಲ. ಆಡಳಿತ ವ್ಯವಸ್ಥೆ ಸುಧಾರಿಸಲು ಆಂತರಿಕವಾಗಿ ಮಾರ್ಪಾಡು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ.

ಔಷಧಗಳ ಅಮಲ್ಜಾರಿ ವಿಭಾಗ ಮತ್ತು ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಜತೆ ವಿಲೀನಗೊಳಿಸುವುದಕ್ಕೆ ಆಕ್ಷೇಪಿಸಿ ರಾಜ್ಯ ಔಷಧ ಉತ್ಪಾದಕರ ಸಂಘ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪಿ. ಪ್ರಸನ್ನ ಕುಮಾರ್‌, ಆಯುಷ್‌ ಇಲಾಖೆಯನ್ನು ಅಲೋಪತಿ ಔಷಧಿಗಳ ಇಲಾಖೆಯ ಜತೆ ವಿಲೀನಗೊಳಿಸುವ ಸಂಬಂಧ ಸರ್ಕಾರ ಆದೇಶ ಮಾಡಿದೆ. ಇದು ಔಷಧ ಮತ್ತು ಕಾಂತಿವರ್ಧಕ ಕಾಯ್ದೆಗೆ ವಿರುದ್ಧವಾಗಿದೆ. ಇದರಿಂದ, ಅರ್ಜಿದಾರರ ಸ್ಥಳಗಳನ್ನು ಪ್ರಸ್ತಾವಿತ ಔಷಧ ಮತ್ತು ಕಾಂತಿವರ್ಧಕ ನಿಯಮಗಳಡಿ ಅನರ್ಹ ಇನ್‌ಸ್ಪೆಕ್ಟರ್‌ಗಳು ಪರಿಶೀಲನೆ ಮಾಡಲು ಅವಕಾಶ ಮಾಡಿಕೊಡಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಡೆಪ್ಯೂಟಿ ಸಾಲಿಸಿಟರ್‌ ಜನರಲ್‌ ಎಚ್‌. ಶಾಂತಿ ಭೂಷಣ್‌, ಔಷಧ ಪರವಾನಗಿ ಪ್ರಾಧಿಕಾರವನ್ನು ಔಷಧ ನಿಯಂತ್ರಕರ ಕಚೇರಿಯೊಂದಿಗೆ ವಿಲೀನಗೊಳಿಸುವುದು ಔಷಧ ಮತ್ತು ಕಾಂತಿವರ್ಧಕ ನಿಯಮಗಳು ಮತ್ತು ಕಾಯ್ದೆಗೆ ವಿರುದ್ಧವಾಗಿದೆ ಎಂದರು.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ರೊಬೆನ್‌ ಜಾಕಬ್‌, 2025ರ ಜುಲೈ 29ರಂದು ಹೊರಡಿಸಿರುವ ಆದೇಶವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿ ಬರುವ ಆಯುಷ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಆಹಾರ ಮತ್ತು ಸುರಕ್ಷತೆ ಮತ್ತು ಔಷಧ ನಿಯಂತ್ರಕರ ಆಯುಕ್ತಾಲಯಗಳಿಗೆ ಸಂಬಂಧಿಸಿದ ಆಂತರಿಕ ವ್ಯವಸ್ಥೆಯಾಗಿದೆ. 2024ರ ಡಿಸೆಂಬರ್ 13ರಂದು ಔಷಧ ನಿಯಂತ್ರಕರ ಕಚೇರಿಯನ್ನು ಆಹಾರ ಮತ್ತು ಸುರಕ್ಷತಾ ಆಯುಕ್ತಾಲಯದ ಜತೆ ವಿಲೀನಗೊಳಿಸಲಾಗಿದ್ದು, ಇದು ಆಡಳಿತಾತ್ಮಕ ವ್ಯವಸ್ಥೆಯಾಗಿದೆ. ಆಯುಷ್‌ ಆಯುಕ್ತಾಲಯವು ಔಷಧ ಜಾರಿ ಮತ್ತು ವಿಶ್ಲೇಷಣೆ ಮತ್ತು ಆಯುಷ್‌ ಆಸ್ಪತ್ರೆಗಳ ಉಸ್ತುವಾರಿ ಮಾಡಲಿದೆ ಎಂದು ತಿಳಿಸಿದರು.

ಔಷಧ ಜಾರಿ ಮತ್ತು ವಿಶ್ಲೇಷಣಾ ಆಡಳಿತವು ಆಹಾರ ಮತ್ತು ಔಷಧ ಆಯುಕ್ತಾಲಯದ ಮೇಲೆ ಬರಲಿದೆ. ಆಯುಷ್‌ ಔಷಧ ಉತ್ಪಾದನಾ ಘಟಕಗಳ ಪರಿಶೀಲನೆಯಲ್ಲಿ ಸಮರ್ಥತೆ ಖಾತ್ರಿಪಡಿಸಲು ಕಾಯ್ದೆಯ ಸೆಕ್ಷನ್‌ 33ಜಿ ಅಡಿ ಮತ್ತು ಸಂಬಂಧಿತ ನಿಯಮದಡಿ ಉಲ್ಲೇಖಿತವಾಗಿರುವ ಪ್ರಕಾರ ಅರ್ಹರನ್ನು ನೇಮಕ ಮಾಡಲಾಗುತ್ತದೆ. ಈ ಸಂಬಂಧ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಹಾಲಿ ಇರುವ ಆಯುಷ್‌ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಯಾವುದೇ ವಿಲೀನ ನಡೆಸುವುದಿಲ್ಲ ಎಂದು ಸರ್ಕಾರ ಹೇಳಿದೆ. ರಾಜ್ಯ ಔಷಧ ಉತ್ಪಾದಕರ ಸಂಘದ ಸದಸ್ಯರ ಸ್ಥಳಗಳ ಪರಿಶೀಲನೆಗೆ ಅರ್ಹ ಇನ್‌ಸ್ಪೆಕ್ಟರ್‌ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸಲು ರಾಜ್ಯ ಸರ್ಕಾರ ಸ್ವತಂತ್ರವಾಗಿದೆ ಎಂದು ಆದೇಶಿಸಿ, ಅರ್ಜಿ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿತು.

ಆಯುಷ್‌ ಇಲಾಖೆಯ ಆಯುರ್ವೇದ, ಸಿದ್ಧ ಮತ್ತು ಯುನಾನಿ ಔಷಧಿಗಳ ಅಮಲುಜಾರಿ ವಿಭಾಗ ಮತ್ತು ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೊಂದಿಗೆ ವಿಲೀನಗೊಳಿಸಿ ಸರ್ಕಾರ 2025ರ ಜುಲೈ 29ರಂದು ಆದೇಶಿಸಿತ್ತು. ಇದನ್ನು ಅರ್ಜಿದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X