Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಸ್ತೆ ಮೇಲ್ಸೇತುವೆ/ ಕೆಳಸೇತುವೆ...

ರಸ್ತೆ ಮೇಲ್ಸೇತುವೆ/ ಕೆಳಸೇತುವೆ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಲು ವಿ.ಸೋಮಣ್ಣ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Aug 2025 10:54 PM IST
share
ರಸ್ತೆ ಮೇಲ್ಸೇತುವೆ/ ಕೆಳಸೇತುವೆ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಲು ವಿ.ಸೋಮಣ್ಣ ಸೂಚನೆ

ಬೆಂಗಳೂರು, ಆ.29: ಬೆಂಗಳೂರಿನ ವಿವಿಧ ರಸ್ತೆ ಮೇಲ್ಸೇತುವೆ(ಆರ್.ಓ.ಬಿ.) ಮತ್ತು ರಸ್ತೆ ಕೆಳಸೇತುವೆ(ಆರ್.ಯು.ಬಿ.) ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಜನರ ಅನುಕೂಲಕ್ಕಾಗಿ ಎಲ್ಲ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು ನಮ್ಮ ಗುರಿಯಾಗಬೇಕು ಎಂದು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಬೆಂಗಳೂರಿನ ಸುತ್ತಮುತ್ತ ರಸ್ತೆ ಮೇಲ್ಸೇತುವೆ ಮತ್ತು ರಸ್ತೆ ಕೆಳಸೇತುವೆ ಕಾಮಗಾರಿಗಳ ಪ್ರಗತಿಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಯೋಜನೆಗಳ ಜಾರಿಯಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬೇಕು ಎಂದರು.

ಹಿಂದಿನ 10 ವರ್ಷಗಳಲ್ಲಿ ಸುಮಾರು 75 ರಸ್ತೆಮೇಲ್ಸೇತುವೆ ಮತ್ತು ರಸ್ತೆ ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ. ಇವುಗಳಲ್ಲಿ 56 ಆರ್.ಓ.ಬಿ./ಆರ್.ಯು.ಬಿ.ಗಳ ವೆಚ್ಚವನ್ನು ರೈಲ್ವೆ ಇಲಾಖೆಯೇ ಸಂಪೂರ್ಣವಾಗಿ ಭರಿಸಿದೆ. ಇದಲ್ಲದೇ 16 ಆರ್.ಓ.ಬಿ./ಆರ್.ಯು.ಬಿ.ಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ವೆಚ್ಚ ಹಂಚಿಕೆಯ ಆಧಾರದಲ್ಲಿ ಮತ್ತು 3 ಅನ್ನು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸಿದೆ ಎಂದು ವಿ.ಸೋಮಣ್ಣ ಹೇಳಿದರು.

ಬೆಂಗಳೂರು ಸುತ್ತಮುತ್ತ 39 ಲೆವೆಲ್ ಕ್ರಾಸಿಂಗ್ ಗೇಟ್‍ಗಳನ್ನು ಆರ್.ಓ.ಬಿ./ಆರ್.ಯು.ಬಿ. ನಿರ್ಮಾಣದ ಮೂಲಕ ತೆಗೆದುಹಾಕಲು ಈಗಾಗಲೇ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ವಿ.ಸೋಮಣ್ಣ ತಿಳಿಸಿದರು.

ಬೆಂಗಳೂರು ನಗರ ಪೊಲಿಸರು ನಗರದಲ್ಲಿ ಸಂಚಾರ ದಟ್ಟಣೆಯಿಂದ ಕೂಡಿರುವ ಹಲವು ರೈಲ್ವೆ ಗೇಟ್‍ಗಳನ್ನು ಪಟ್ಟಿ ಮಾಡಿದ್ದು, ಈ ಪೈಕಿ 13 ಗೇಟ್‍ಗಳಲ್ಲಿ ಆರ್.ಓ.ಬಿ./ಆರ್.ಯು.ಬಿಗಳಿಗೆ ಈಗಾಗಲೇ ಮಂಜೂರಾತಿ ದೊರಕಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದು ವಿ.ಸೋಮಣ್ಣ ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯಆಡಳಿತಾಧಿಕಾರಿ(ನಿರ್ಮಾಣ) ಅಜಯ್ ಶರ್ಮಾ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋಷ್‌ ಕುಮಾರ್ ಸಿಂಗ್, ಬಿ.ಡಿ.ಎ. ಆಯುಕ್ತ ಮಣಿವಣ್ಣನ್, ಜಂಟಿ ಪೊಲೀಸ್ ಆಯುಕ್ತರು(ಸಂಚಾರ) ಕಾರ್ತಿಕ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ತೆಂಗು ಬೆಳೆಯಲ್ಲಿ ರೋಗ ತಡೆಗಟ್ಟುವ ಕ್ರಮಗಳ ಕುರಿತು ಸಭೆ: ಇದೇ ವೇಳೆಯಲ್ಲಿ ತೆಂಗು ಬೆಳೆಯಲ್ಲಿ ಕೀಟ ಮತ್ತು ರೋಗಗಳನ್ನು ತಡೆಗಟ್ಟುವ ಕ್ರಮಗಳನ್ನು ಚರ್ಚಿಸಲು ಕೇಂದ್ರ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ನಡೆಯಿತು. ಈ ಸಭೆಯಲ್ಲಿ ತೆಂಗು ಅಭಿವೃದ್ಧಿ ಮಂಡಳಿಯು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ, ತೆಂಗು ಬೆಳೆಗೆ ತಗಲುವ ಕೀಟಗಳ ನಿವಾರಣೆ ಮತ್ತು ಮಣ್ಣಿನ ಆರೋಗ್ಯ ಸುಧಾರಣೆಗೆ ವೈಜ್ಞಾನಿಕ ನಿರ್ವಹಣಾ ಪದ್ಧತಿಗಳ ಕುರಿತು ಗ್ರಾಮ ಮತ್ತು ಹೋಬಳಿ ಮಟ್ಟದಲ್ಲಿ ಜಾಗೃತಿ ಸಭೆಗಳನ್ನು ಆಯೋಜಿಸಲಿದೆ ಎಂದು ತಿಳಿಸಲಾಯಿತು.

ಪ್ರಮುಖವಾಗಿ ತೆಂಗು ಬೆಳೆಯುವ ಪ್ರದೇಶವಾದ ತುಮಕೂರು ಜಿಲ್ಲೆಯಲ್ಲಿ ಸಂಶೋಧನೆ, ಕೀಟ ನಿವಾರಣೆ ಮತ್ತು ಮೌಲ್ಯವರ್ಧನೆಗಾಗಿ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾಪವನ್ನೂ ಸಹ ಮಾಡಲಾಯಿತು.

ಈ ಸಭೆಯಲ್ಲಿ ಸಂಸದರಾದ ಪಿ.ಸಿ.ಮೋಹನ್, ಡಾ.ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಶ್ರೇಯಸ್ ಪಟೇಲ್ ಮತ್ತು ತಿಪಟೂರಿನ ಶಾಸಕ ಷಡಕ್ಷರಿ, ತೆಂಗು ಅಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ ಸಹಿತ ರಾಜ್ಯ ಸರಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X