Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಳಮೀಸಲಾತಿ | ಅಲೆಮಾರಿಗಳ ಹಿತ ಕಾಯುವ...

ಒಳಮೀಸಲಾತಿ | ಅಲೆಮಾರಿಗಳ ಹಿತ ಕಾಯುವ ಕೆಲಸ ಮಾಡುತ್ತೇವೆ : ಎಚ್.ಆಂಜನೇಯ

ವಾರ್ತಾಭಾರತಿವಾರ್ತಾಭಾರತಿ31 Aug 2025 8:29 PM IST
share
ಒಳಮೀಸಲಾತಿ | ಅಲೆಮಾರಿಗಳ ಹಿತ ಕಾಯುವ ಕೆಲಸ ಮಾಡುತ್ತೇವೆ : ಎಚ್.ಆಂಜನೇಯ
‘ಒಳ ಮೀಸಲಾತಿ-ಮುಂದಿನ ಹೆಜ್ಜೆಗಳು’ ಎಂಬ ವಿಚಾರ ಸಂಕಿರಣ

ಬೆಂಗಳೂರು, ಆ.31: ಇನ್ನು ಮುಂದೆ ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಆದೇಶ ಹೊರಡಿಸುವ ಮೊದಲೇ ಮಾದಿಗ ಸಮುದಾಯದ ಸಚಿವರ ಗಮನಕ್ಕೆ ತರಬೇಕು ಎಂದು ಮಾಜಿ ಸಚಿವ ಎಚ್. ಆಂಜನೇಯ ಆಗ್ರಹಿಸಿದ್ದಾರೆ.

ರವಿವಾರ ನಗರದ ಗಾಂಧಿಭವನದಲ್ಲಿ ಕರ್ನಾಟಕ ಮಾದಿಗ ಅಧಿಕಾರಿ ಮತ್ತು ನೌಕರರ ಸಮನ್ವಯ ಸಮಿತಿ ವತಿಯಿಂದ ನಡೆದ ‘ಒಳ ಮೀಸಲಾತಿ-ಮುಂದಿನ ಹೆಜ್ಜೆಗಳು’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ಇಲಾಖೆಯಿಂದ ಯಾವುದೇ ಆದೇಶ ಹೊರಡಿಸಿದರೂ ಮೊದಲೇ ತಮ್ಮ ಗಮನಕ್ಕೆ ತರಬೇಕೆಂದು ಮಾದಿಗ ಸಮುದಾಯದ ಸಚಿವರು ಸೂಚನೆ ನೀಡಬೇಕು. ಈ ಬಗ್ಗೆ ಸಚಿವ ಡಾ.ಮಹದೇವಪ್ಪ ಅವರೊಂದಿಗೂ ಸಮುದಾಯದ ಸಚಿವರು ಮಾತನಾಡಬೇಕು ಎಂದರು.

ನ್ಯಾ.ನಾಗಮೋಹನ ದಾಸ್ ಅವರು ಹಿಂದುಳಿದಿರುವಿಕೆಯ ಆಧಾರದಲ್ಲಿ ಮೀಸಲಾತಿ ವರ್ಗೀಕರಣ ಮಾಡಿದ್ದರು. ಅವರು ಜಾತಿಯ ಆಧಾರದಲ್ಲಿ ಒಳಮೀಸಲಾತಿ ನೀಡಿರಲಿಲ್ಲ. ಸುಪ್ರೀಂಕೋರ್ಟ್ ಸೂಚನೆಯನ್ನು ಪಾಲಿಸಿದ್ದರು. ಆದರೆ, ನಾಗಮೋಹನ ದಾಸ್ ಬಗ್ಗೆ ಕೆಲವರು ಹಗುರವಾಗಿ ಮಾತನಾಡಿದರು. ವರದಿಯನ್ನು ಸುಟ್ಟು ಹಾಕಿ, ಪ್ರತಿಭಟನೆಯನ್ನು ನಡೆಸಿದರು. ಅಂತಿಮವಾಗಿ ಒಳಮೀಸಲಾತಿ ಜಾರಿಯಾಗಿದೆ. ಅದಕ್ಕಾಗಿ ಸರಕಾರವನ್ನು ಅಭಿನಂದಿಸುತ್ತೇವೆ ಎಂದು ಅವರು ಹೇಳಿದರು.

ಪರೆಯ, ಮೊಗೇರ ಸಮುದಾಯಗಳನ್ನು ಮಾದಿಗರೊಂದಿಗೆ ಸೇರಿಸಲಾಗಿತ್ತು. ಅವರನ್ನು ಹೊರತುಪಡಿಸಿದರೂ ಮಾದಿಗರೇ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 27ಲಕ್ಷ ಜನರು ಮಾದಿಗ ಎಂದೂ, 5ಲಕ್ಷ ಜನರು ಮಾದಾರ ಎಂದು ಬರೆಸಿದ್ದಾರೆ. ಜೆಡಿಎಸ್‍ನವರು ತಮ್ಮ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಯ ಭರವಸೆ ನೀಡಿದ್ದರು. ಬಿಜೆಪಿಯವರು ವರ್ಗೀಕರಣಕ್ಕೆ ಶಿಫಾರಸ್ಸು ಮಾಡಿದ್ದರು. ಆದರೆ, ಅವರು ಇನ್ನೊಂದು ಹೆಜ್ಜೆ ಮುಂದೆ ಇಟ್ಟಿದ್ದರೆ ಜಾರಿಯಾಗುತ್ತಿತ್ತು. ಯಾರೂ ಮಾಡಲಾಗದ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಎಚ್.ಆಂಜನೇಯ ಶ್ಲಾಘಿಸಿದರು.

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ನನಗೆ ಸೋಲಿನ ಸುಳಿವು ಇತ್ತು. ಸ್ಪರ್ಧಿಸಬೇಡಿ, ನೀವು ಹಾಗೆಯೇ ಸಚಿವರಾಗುತ್ತೀರಿ ಎಂದು ಪಕ್ಷ ಹೇಳಿತ್ತು. ಆದರೆ, ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆಂದು ಹೋದೆ, ಸೋತೆ. ನನಗೆ ಅಧಿಕಾರದ ಆಸೆ ಇಲ್ಲ. ಒಳಮೀಸಲಾತಿ ನಾನು ಸತ್ತ ಮೇಲೆ ಆಗಬಹುದು ಎಂದುಕೊಂಡಿದ್ದೆ. ಸದ್ಯ ಬದುಕಿದ್ದಾಗಲೇ ಜಾರಿಗೆ ಬಂದಿದೆ ಎಂದು ಎಚ್.ಆಂಜನೇಯ ಹೇಳಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಒಳಮೀಸಲಾತಿ ಜಾರಿಯ ಗೆಲುವು ಪ್ರತಿಯೊಬ್ಬ ಮಾದಿಗ ಬಂಧುಗಳಿಗೂ ಸೇರಬೇಕು. ಒಳಮೀಸಲಾತಿಯಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಶೇ.17ರಷ್ಟು ಮೀಸಲಾತಿಯಲ್ಲಿ ನಮಗೆ ಈವರೆಗೆ ಸಿಗುತ್ತಿದ್ದದ್ದು ಕೇವಲ ಶೇ.1.5ರಷ್ಟು ಅಷ್ಟೇ. ಮಿಕ್ಕಿದ್ದನ್ನು ಬೇರೆಯವರು ತಿನ್ನುತ್ತಿದ್ದರು. ನಾವು ಸುಮ್ಮನೇ ನೋಡುತ್ತಾ ಕೂರುತ್ತಿದ್ದೆವು. ಆದರೆ ಈಗ ಒಳಮೀಸಲಾತಿ ಜಾರಿಯಾಗಿದೆ. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಂಪುಟದೊಳಗೆ ಎಷ್ಟೆಲ್ಲ ನಾಟಕೀಯ ಬೆಳವಣಿಗೆಗಳಾದವು ಎಂಬುದು ಗೊತ್ತಿದೆ ಎಂದರು.

ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸಮಿತಿಯ ಗೌರವಾಧ್ಯಕ್ಷ ಗೋನಾಳ ಭೀಮಪ್ಪ, ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ, ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಹೋರಾಟಗಾರರಾದ ಎಸ್.ಮಾರೆಪ್ಪ, ಅಂಬಣ್ಣ ಅರೋಲಿಕರ್, ಬಸವರಾಜ ಕೌತಾಳ್, ದಾಸನೂರು ಕೂಸಣ್ಣ, ಪಾವಗಡ ಶ್ರೀರಾಮ್, ಕೇಶವಮೂರ್ತಿ, ಸಿ.ರಮೇಶ್, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಿವೃತ್ತ ಅಧಿಕಾರಿ ಭೀಮಶಂಕರ್, ಅಲೆಮಾರಿ ಒಕ್ಕೂಟದ ಕಾರ್ಯಾಧ್ಯಕ್ಷ ಚಾವಡಿ ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಲೆಮಾರಿಗಳ ಹಿತ ಕಾಯುತ್ತೇವೆ: ‘ಮಾದಿಗರು ತಾಯಿ ಕರುಳಿನವರು, ಅಲೆಮಾರಿ ಸಮುದಾಯಗಳ ಜೊತೆ ನಾವು ಸದಾ ಇರುತ್ತೇವೆ. ನಾವು ಉಪವಾಸವಿದ್ದರೂ ಬೇರೆಯವರಿಗೆ ಅನ್ನ ಹಾಕಿದ ಸಮುದಾಯ ನಮ್ಮದು. ಹಂಚಿಕೊಂಡು ತಿಂದವರು ಮಾದಿಗರು. ಅಲೆಮಾರಿಗಳ ಹಿತ ಕಾಯುವ ಕೆಲಸ ಮಾಡುತ್ತೇವೆ. ಅಲೆಮಾರಿಗಳನ್ನು ಮುಂದುವರಿದವರ ಗುಂಪಿಗೆ ಹಾಕಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದ್ದೇನೆ. ಅಲೆಮಾರಿಗಳ ಜೊತೆ ಒಳಮೀಸಲಾತಿ ಹೋರಾಟಗಾರರು ಇದ್ದಾರೆ. ಅಲೆಮಾರಿಗಳಿಗೆ ಬೇರೆ ವ್ಯವಸ್ಥೆ ಮಾಡುವ ಭರವಸೆಯನ್ನು ಸಿಎಂ ನೀಡಿದ್ದಾರೆ’

-ಎಚ್.ಆಂಜನೇಯ ಮಾಜಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X