Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ಬಳಿ ಕೈಗಾರಿಕಾ ಅನಿಲ ತಯಾರಿಕಾ...

ಬೆಂಗಳೂರು ಬಳಿ ಕೈಗಾರಿಕಾ ಅನಿಲ ತಯಾರಿಕಾ ಘಟಕ; ಜಪಾನಿನ ಏರ್ ವಾಟರ್ ಒಲವು

ವಾರ್ತಾಭಾರತಿವಾರ್ತಾಭಾರತಿ11 Sept 2025 11:11 PM IST
share
ಬೆಂಗಳೂರು ಬಳಿ ಕೈಗಾರಿಕಾ ಅನಿಲ ತಯಾರಿಕಾ ಘಟಕ; ಜಪಾನಿನ ಏರ್ ವಾಟರ್ ಒಲವು
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜಪಾನ್ ಭೇಟಿ

ಬೆಂಗಳೂರು, ಸೆ. 11: ‘ಕೈಗಾರಿಕೆಗಳಲ್ಲಿ ಬಳಸುವ ಅನಿಲ ತಯಾರಿಸುವ ಜಪಾನಿನ ಬಹುರಾಷ್ಟ್ರೀಯ ಕಂಪೆನಿ ಏರ್ ವಾಟರ್, ಬೆಂಗಳೂರು ಸಮೀಪ ತನ್ನ ಎರಡನೆ ಘಟಕ ಸ್ಥಾಪಿಸಲು ಮುಂದೆ ಬಂದಿದೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.

ಗುರುವಾರ ಉನ್ನತ ಮಟ್ಟದ ನಿಯೋಗದ ಜೊತೆ ಜಪಾನ್‍ಗೆ ಭೇಟಿ ನೀಡಿರುವ ಸಚಿವ ಎಂ.ಬಿ.ಪಾಟೀಲ್ ಅವರು, ಏರ್ ವಾಟರ್ ಕಂಪೆನಿಯ ಉನ್ನತ ಅಧಿಕಾರಿಗಳ ಜೊತೆಗೆ ನಡೆಸಿದ ಸಮಾಲೋಚನೆಯಲ್ಲಿ ಕಂಪೆನಿಯು ಈ ಮಾಹಿತಿ ಹಂಚಿಕೊಂಡಿದೆ. ಕಂಪೆನಿಯ ಮೊದಲ ಘಟಕವು ಈಗಾಗಲೇ ವಿಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಗಣಿ, ಕಬ್ಬಿಣ ತಿರುಳಿನಂತಹ ಕಚ್ಚಾ ಪದಾರ್ಥಗಳನ್ನು ಬಳಸಿ ಕರ್ನಾಟಕದಲ್ಲಿ ಜೈವಿಕ ಅನಿಲ ತಯಾರಿಕಾ ಘಟಕ ಸ್ಥಾಪಿಸುವುದಕ್ಕೂ ಕಂಪೆನಿಯು ಒಲವು ತೋರಿದೆ. ಈ ಘಟಕದ ನೆರವಿನಿಂದ ಜೈವಿಕ ಅನಿಲದ ಸ್ಥಳೀಯ ಬೇಡಿಕೆ ಪೂರೈಸಲು ಸಾಧ್ಯವಾಗಲಿದೆ’ ಎಂದು ಹೇಳಿದ್ದಾರೆ.

ತನ್ನ ವಹಿವಾಟಿನಲ್ಲಿ ಕರ್ನಾಟಕವು ಪ್ರಮುಖ ಆದ್ಯತಾ ವಲಯವಾಗಿರುವುದರ ಮಾಹಿತಿಯನ್ನು ಕಂಪನಿಯು ನಿಯೋಗದ ಜೊತೆ ಹಂಚಿಕೊಂಡಿದೆ. ಭಾರತವನ್ನು ತನ್ನ ವಹಿವಾಟಿನ ಎರಡನೆ ನೆಲೆಯನ್ನಾಗಿ ಕಾರ್ಪೊರೇಟ್ ಘೋಷಣೆ ಅಳವಡಿಸಿಕೊಂಡಿರುವ-ಕೈಗಾರಿಕಾ ಸೇವೆಗಳು ಮತ್ತು ಎಂಜಿನಿಯರಿಂಗ್ ಕಂಪೆನಿ ಕೊನೊಇಕೆ ಜೊತೆಗಿನ ಮಾತುಕತೆಯಲ್ಲಿ, ಜಂಟಿ ಪಾಲುದಾರಿಕೆ ಆಧಾರಿತ ಬೆಳವಣಿಗೆ ಅವಕಾಶಗಳನ್ನು ರಾಜ್ಯದ ನಿಯೋಗವು ವಿವರವಾಗಿ ಚರ್ಚಿಸಿದೆ.

ಪಾಲುದಾರಿಕೆಯಡಿ ಕೈಗಾರಿಕಾ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಪಾಲುದಾರರ ಹುಡುಕಾಟದಲ್ಲಿ ಇರುವುದಾಗಿ ಕಂಪೆನಿಯು ರಾಜ್ಯದ ನಿಯೋಗದ ಗಮನಕ್ಕೆ ತಂದಿದೆ. ಸೂಕ್ತ ಪಾಲುದಾರರನ್ನು ಗುರುತಿಸಲು ಅಗತ್ಯ ನೆರವು ಕಲ್ಪಿಸಲಾಗುವುದು ಎಂದು ಸಚಿವ ಪಾಟೀಲ್ ಭರವಸೆ ನೀಡಿದ್ದಾರೆ.

ಶಿಂಕೊ ನೇಮ್‍ಪ್ಲೇಟ್ ಕಂಪೆನಿಯು, 100 ಕೋಟಿ ರೂ. ವೆಚ್ಚದಲ್ಲಿ ವಾಹನಗಳಲ್ಲಿ ಬಳಸುವ ಅಲಂಕಾರಿಕ ಪ್ಲಾಸ್ಟಿಕ್ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಬೆಂಗಳೂರು ಬಳಿ ಆರಂಭಿಸುವುದಾಗಿ ತಿಳಿಸಿದೆ. ಟೊಯೋಟ ಗ್ರೂಪ್‍ನ ಕ್ಯಾಟಲರ್ ಕಂಪೆನಿಯು ಬಿಡದಿಯಲ್ಲಿನ ತನ್ನ ತಯಾರಿಕಾ ಚಟುವಟಿಕೆಯನ್ನು 140 ಕೋಟಿ ರೂ. ಹೆಚ್ಚುವರಿ ಹೂಡಿಕೆ ಮೂಲಕ 2030ರ ವೇಳೆಗೆ ವಿಸ್ತರಿಸುವುದಾಗಿ ತಿಳಿಸಿದೆ.

ಸುಧಾರಿತ ಸ್ವಯಂಚಾಲಿತ ನಿಯಂತ್ರಣ ಸಾಧನ ತಯಾರಿಸುವ ಸಗಿನೋಮಿಯಾ, ಕರ್ನಾಟಕದಲ್ಲಿ ಹೊಸ ಘಟಕ ಸ್ಥಾಪಿಸಲು ಒಲವು ವ್ಯಕ್ತಪಡಿಸಿದೆ. ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X