Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಜಾಪ್ರಭುತ್ವದ ಹೃದಯದಂತೆ ಸದನ...

ಪ್ರಜಾಪ್ರಭುತ್ವದ ಹೃದಯದಂತೆ ಸದನ ಚರ್ಚೆಗಳು ಕಾರ್ಯನಿರ್ವಹಿಸಬೇಕು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ13 Sept 2025 9:21 PM IST
share
ಪ್ರಜಾಪ್ರಭುತ್ವದ ಹೃದಯದಂತೆ ಸದನ ಚರ್ಚೆಗಳು ಕಾರ್ಯನಿರ್ವಹಿಸಬೇಕು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕಾಮನ್‍ವೆಲ್ತ್ ಸಂಸದೀಯ ಸಂಘ ಭಾರತ ವಲಯ ಸಮ್ಮೇಳನದ ಸಮಾರೋಪ

ಬೆಂಗಳೂರು, ಸೆ.13: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ವಿಧಾನಮಂಡಲವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. ಭಾರತದ ಸಂವಿಧಾನವು ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ. ಇದು ನಾಗರಿಕರಿಗೆ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಹಕ್ಕನ್ನು ನೀಡುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಶನಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಿದ್ದ ಕಾಮನ್‍ವೆಲ್ತ್ ಸಂಸದೀಯ ಸಂಘ (ಸಿಪಿಎ)ಭಾರತ ವಲಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

1949ರ ನ.25ರಂದು, ಸಂವಿಧಾನದ ಕೊನೆಯ ಸಭೆಯಲ್ಲಿ, ಅಂಬೇಡ್ಕರ್ ಅವರು ಐತಿಹಾಸಿಕ ಭಾಷಣ ಮಾಡಿದರು. ‘ಒಂದು ಸಂವಿಧಾನವು ಒಳ್ಳೆಯದಾಗಿರಬಹುದು, ಅದು ಕೆಟ್ಟದಾಗಿ ಪರಿಣಮಿಸುವುದು ಖಚಿತ ಏಕೆಂದರೆ ಅದನ್ನು ಕೆಲಸ ಮಾಡಲು ಕರೆಯಲ್ಪಟ್ಟವರು ಕೆಟ್ಟವರಾಗಿರುತ್ತಾರೆ. ಆದಾಗ್ಯೂ, ಒಂದು ಸಂವಿಧಾನವು ಕೆಟ್ಟದಾಗಿರಬಹುದು, ಅದನ್ನು ಕೆಲಸ ಮಾಡಲು ಕರೆಯಲ್ಪಟ್ಟವರು ಒಳ್ಳೆಯವರಾಗಿದ್ದರೆ ಅದು ಒಳ್ಳೆಯದಾಗಿ ಪರಿಣಮಿಸಬಹುದು’. ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಾಗಿದ್ದು, ಇವುಗಳೆ ಅದರ ಅಸ್ತಿತ್ವವನ್ನು ಬಲಪಡಿಸುತ್ತವೆ ಎಂದು ಅಂಬೇಡ್ಕರ್ ನಂಬಿದ್ದರು ಎಂದು ಅವರು ಹೇಳಿದರು.

ಶಾಸಕಾಂಗ ಸಂಸ್ಥೆಗಳನ್ನು ನಡೆಸುವುದು, ಸದಸ್ಯರಲ್ಲಿ ಶಿಸ್ತು ಕಾಯ್ದುಕೊಳ್ಳುವುದು, ಶಾಸಕಾಂಗ ಪ್ರಕ್ರಿಯೆಗಳನ್ನು ಸಮಯೋಚಿತ ಮತ್ತು ಪರಿಣಾಮಕಾರಿ ರೀತಿಯಲ್ಲಿ ಪೂರ್ಣಗೊಳಿಸುವುದು, ನಿಯಮಗಳ ಪ್ರಕಾರ ಚರ್ಚಿಸಲು ಸದಸ್ಯರಿಗೆ ಅವಕಾಶ ಒದಗಿಸುವುದು, ಶಾಸಕಾಂಗ ಕೆಲಸಕ್ಕೆ ಮಾರ್ಗದರ್ಶನ ನೀಡುವುದು, ಸಂಸದೀಯ ಸಮಿತಿಗಳನ್ನು ರಚಿಸುವುದು ಇತ್ಯಾದಿಗಳ ಜವಾಬ್ದಾರಿಗಳು ಸಂಬಂಧಪಟ್ಟ ಅಧ್ಯಕ್ಷರು ಮತ್ತು ಸ್ಪೀಕರ್ ಅವರ ಮೇಲಿರುತ್ತದೆ. ಆದುದರಿಂದ ಅವರನ್ನು ಸಂಸತ್ತು, ಶಾಸಕಾಂಗ ಸಭೆಯ ರಕ್ಷಕರೆಂದು ಎಂದು ಪರಿಗಣಿಸಲಾಗುತ್ತದೆ ಎಂದು ರಾಜ್ಯಪಾಲ ಹೇಳಿದರು.

ವಿರೋಧ ಪಕ್ಷ ಮತ್ತು ಆಡಳಿತ ಪಕ್ಷವು ಅರ್ಥಪೂರ್ಣ ವಾದಗಳ ಆಧಾರದ ಮೇಲೆ ಚರ್ಚಿಸಿದಾಗ, ಅದು ನೀತಿ ನಿರೂಪಣೆಯನ್ನು ಬಲವಾದ, ಹೆಚ್ಚು ನ್ಯಾಯಯುತ ಮತ್ತು ದೂರದೃಷ್ಟಿಯತ್ತ ಕೊಂಡೊಯ್ಯುತ್ತದೆ. ಈ ಪ್ರಕ್ರಿಯೆಯು ಸಾರ್ವಜನಿಕ ವಿಶ್ವಾಸವನ್ನು ಬೆಳೆಸುತ್ತದೆ. ತಮ್ಮ ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕ ಹಿತಾಸಕ್ತಿ, ರಾಷ್ಟ್ರೀಯ ಹಿತಾಸಕ್ತಿ, ವೈಯಕ್ತಿಕ ಅಥವಾ ಪಕ್ಷದ ಹಿತಾಸಕ್ತಿಗಳಿಗಿಂತ ಹೆಚ್ಚಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂಬ ನಂಬಿಕೆ ಸಾರ್ವಜನಿಕರಲ್ಲಿ ಇದೆ ಎಂದು ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ, ಯುವಜನರ ಉನ್ನತಿ, ಪರಿಸರ ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿ ವ್ಯವಸ್ಥೆಗಳು ಬಲಗೊಳ್ಳಬೇಕೆಂದು ಸಾರ್ವಜನಿಕರು ನಿರೀಕ್ಷಿಸುತ್ತಾರೆ. ಹೊಸ ತಂತ್ರಜ್ಞಾನ, ಜಾಗತೀಕರಣ, ಶಿಕ್ಷಣದ ಹರಡುವಿಕೆ ಮತ್ತು ಸಾಮಾಜಿಕ ಬದಲಾವಣೆಯು ಆಕಾಂಕ್ಷೆಗಳನ್ನು ಇನ್ನಷ್ಟು ವ್ಯಾಪಕಗೊಳಿಸಿದೆ ಎಂದು ಅವರು ಹೇಳಿದರು.

ಶಾಸಕಾಂಗದಲ್ಲಿ ಸುಸಂಘಟಿತ ಗಂಭೀರತೆ, ಸಭ್ಯತೆ ಮತ್ತು ತಾಳ್ಮೆಯೊಂದಿಗೆ ಅರ್ಥಪೂರ್ಣ ಚರ್ಚೆಗಳ ಮೂಲಕ ಮಾತ್ರ ಈ ಆಕಾಂಕ್ಷೆಗಳ ಈಡೇರಲು ಸಾಧ್ಯ. ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ, ಭಿನ್ನಾಭಿಪ್ರಾಯಗಳಿರಬಹುದು. ಆದರೆ ಮನಸ್ಸಿನ ಭಿನ್ನಾಭಿಪ್ರಾಯಗಳು ಇರಬಾರದು. ಪ್ರಜಾಪ್ರಭುತ್ವದ ದೊಡ್ಡ ಶಕ್ತಿ ಎಂದರೆ ಒಮ್ಮತವನ್ನು ನಿರ್ಮಿಸುವ ಸಾಮಥ್ರ್ಯ. ಸದನದಲ್ಲಿ ಚರ್ಚೆ ಬಿಸಿಯಾಗಬಹುದು, ದೃಷ್ಟಿಕೋನಗಳು ವಿಭಿನ್ನವಾಗಿರಬಹುದು, ಆದರೆ ಅಂತಿಮವಾಗಿ ಗುರಿ ಒಂದೇ ಆಗಿರಬೇಕು ಎಂದು ಅವರು ತಿಳಿಸಿದರು.

ಸದನಗಳಲ್ಲಿ ದೇಶ ಮತ್ತು ಸಮಾಜಕ್ಕೆ ಸಂಬಂಧಿಸಿದ ಗಂಭೀರ ವಿಷಯಗಳ ಕುರಿತು ಆಳವಾದ ಚರ್ಚೆ ನಡೆಯಬೇಕು, ಇದರಿಂದ ಪರಿಹಾರಗಳನ್ನು ಕಂಡುಹಿಡಿಯಬಹುದು. ಆದರೆ ಪ್ರಸ್ತುತ ಪರಿಸ್ಥಿತಿ ಸ್ವಲ್ಪ ವಿಭಿನ್ನವಾಗಿದೆ. ಸದನಗಳಲ್ಲಿ, ಚರ್ಚೆಯ ಬದಲು ಗದ್ದಲ, ಘೋಷಣೆಗಳು ಮತ್ತು ಅವ್ಯವಸ್ಥೆ ಹೆಚ್ಚಿರುವುದನ್ನು ಹೆಚ್ಚಾಗಿ ಕಾಣಬಹುದು ಎಂದು ರಾಜ್ಯಪಾಲ ಬೇಸರ ವ್ಯಕ್ತಪಡಿಸಿದರು.

ಸಾರ್ವಜನಿಕರ ಸಮಸ್ಯೆಗಳು, ಪ್ರಶ್ನೋತ್ತರ ಅವಧಿಗಳು ಗದ್ದಲಕ್ಕೆ ಬಲಿಯಾಗುತ್ತದೆ. ಹಲವು ಬಾರಿ ಸ್ಪೀಕರ್, ಅಧ್ಯಕ್ಷರು ಕಲಾಪವನ್ನು ಮುಂದೂಡಬೇಕಾಗುತ್ತದೆ. ನಿಯಮಗಳು ಮತ್ತು ಶಿಸ್ತಿನ ಅನುಸರಣೆ ಕಡಿಮೆಯಾಗುತ್ತಿದೆ. ಇದು ಸದನದ ಘನತೆಗೆ ಧಕ್ಕೆ ತರುತ್ತದೆ ಮತ್ತು ಸಾರ್ವಜನಿಕರ ನಂಬಿಕೆಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದರು.

ವಿಧಾನಮಂಡಲದ ಕೆಲಸವನ್ನು ಹೆಚ್ಚು ಸುಗಮ ಮತ್ತು ಪರಿಣಾಮಕಾರಿಯಾಗಿ ಮಾಡಲು, ತಂತ್ರಜ್ಞಾನ ಮತ್ತು ಆಧುನಿಕ ಸಂಪನ್ಮೂಲಗಳ ಬಳಕೆಯನ್ನು ಪೆÇ್ರೀತ್ಸಾಹಿಸಬೇಕು. ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ನಿಯಮಗಳು ಮತ್ತು ಸಂಸದೀಯ ಶಿಷ್ಟಾಚಾರದ ಬಗ್ಗೆ ತರಬೇತಿ ನೀಡಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X