Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಾದಾಗಿರಿಯ ದಿನಗಳು ಮುಗಿದವು. ಮೊದಲು...

ದಾದಾಗಿರಿಯ ದಿನಗಳು ಮುಗಿದವು. ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ: ಡಿಕೆಶಿಗೆ ಜೆಡಿಎಸ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ19 Sept 2025 3:28 PM IST
share
ದಾದಾಗಿರಿಯ ದಿನಗಳು ಮುಗಿದವು. ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ: ಡಿಕೆಶಿಗೆ ಜೆಡಿಎಸ್ ತರಾಟೆ

ಬೆಂಗಳೂರು: ಉದ್ಯಮಿಗಳಿಗೆ ಧಮ್ಕಿ ಹಾಕಿ, ದಾದಾಗಿರಿ ಮಾಡುವುದಕ್ಕೆ ನಿಮ್ಮನ್ನು ಡಿಸಿಎಂ ಮಾಡಿಲ್ಲ. ಕೆಲಸ ಮಾಡಿ ಎಂದು ಜನ ಕೂರಿಸಿದ್ದಾರೆ. ಹಳೆಯ ಚಾಳಿ ಬಿಡಿ. ದಾದಾಗಿರಿಯ ದಿನಗಳು ಮುಗಿದವು. ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ. ಕೈಯಲ್ಲಿ ಆಗಲಿಲ್ಲ ಎಂದರೆ, ಬೆಂಗಳೂರು ಉಸ್ತುವಾರಿ ಬಿಡಿ ಎಂದು ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಜೆಡಿಎಸ್ ತರಾಟೆಗೈದಿದೆ.

ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ರಾಜ್ಯ ಜೆಡಿಎಸ್, "ಡಿಸಿಎಂ ಡಿಕೆ ಶಿವಕುಮಾರ್ ಅವರೇ, ನಿಮ್ಮಲ್ಲೇನೋ ಮೂಲಭೂತ ಸಮಸ್ಯೆ ಇದೆ. ಬರೀ ಧಿಮಾಕು, ಎಲ್ಲವನ್ನೂ ಬಲ್ಲೆ ಎನ್ನುವ ಪೋಷಾಕು! ಅದಕ್ಕೆ ಏನೋ ಬೆಂಗಳೂರಿನ ಮೂಲಭೂತ ಸೌಕರ್ಯ ಎಕ್ಕುಟ್ಟಿ ಹೋಗಿದೆ. ಬಹುಶಃ, ನಿಮಗೆ ನೆಟ್ ವರ್ಕಿಂಗ್ ಸಮಸ್ಯೆ ಕಾಡುತ್ತಿರಬಹುದು. ನಿಮ್ಮ ಮಿದುಳು, ನಾಲಿಗೆಯ ನಡುವೆ ಲೈನಪ್ ಸರಿ ಇದ್ದಂತೆ ಇಲ್ಲ! ಏಕೆಂದರೆ, ಇನ್ನೊಬ್ಬರ ಹೇಳಿಕೆಯನ್ನು ಅರ್ಥೈಸಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ನಿಮಗಿಲ್ಲ. ಅಸಂಬದ್ಧವಾಗಿ ಪ್ರತಿಕ್ರಿಯೆ ಕೊಡುತ್ತೀರಿ. ನಗೆಪಾಟಲಿಗೆ ತುತ್ತಾಗುತ್ತೀರಿ" ಎಂದು ಟೀಕಿಸಿದೆ.

"ನಗರದ ಮೂಲಸೌಕರ್ಯದ ಬಗ್ಗೆ ಉದ್ಯಮಿಗಳು ಕಳವಳಗೊಂಡಾಗ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೈತಿಕ ಸ್ಥೈರ್ಯ ತುಂಬಿದ್ದಾರೆ. ಅದರಲ್ಲಿ ತಪ್ಪೇನಿದೆ? ಕೇಂದ್ರದ ಅನುದಾನ ತರಲಿ ಎನ್ನುತ್ತೀರಿ? ಟ್ವಿಟ್ಟರ್ ಗಿಟ್ಟರ್ ಎನ್ನುತ್ತೀರಿ.. ಆ ಬಗ್ಗೆ ಆಮೇಲೆ ಹೇಳೋಣ. ತೆರಿಗೆ ಬೀಜಾಸುರ ನಂತೆ ಬೆಂಗಳೂರು ಜನರ ರಕ್ತ ಹೀರಿ ತೆರಿಗೆ ಪೀಕುತ್ತಿದ್ದೀರಲ್ಲ.. ಮೊದಲು ಅದಕ್ಕೆ ಲೆಕ್ಕ ಮಡಗಿ. ಅದು ಯಾರಪ್ಪನ ದುಡ್ಡು ಅಲ್ಲ. ಜನರ ಬೆವರಿನ ಹಣ. ಆ ದುಡ್ಡು ಎಲ್ಲಿ ಹೋಗುತ್ತಿದೆ? ಅದನ್ನೇ ಕುಮಾರಸ್ವಾಮಿ ಅವರು ಕೇಳಿದ್ದು. ಉದ್ಯಮಿಗಳಿಗೆ ಧಮ್ಕಿ ಹಾಕಿ, ದಾದಾಗಿರಿ ಮಾಡುವುದಕ್ಕೆ ನಿಮ್ಮನ್ನು ಡಿಸಿಎಂ ಮಾಡಿಲ್ಲ ಮಿ. ಶಿವಕುಮಾರ್. ಕೆಲಸ ಮಾಡಿ ಎಂದು ಜನ ಕೂರಿಸಿದ್ದಾರೆ. ಆ ಹಳೆಯ ಚಾಳಿ ಬಿಡಿ. ದಾದಾಗಿರಿಯ ದಿನಗಳು ಮುಗಿದವು. ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ. ಕೈಯಲ್ಲಿ ಆಗಲಿಲ್ಲ ಎಂದರೆ, ಬೆಂಗಳೂರು ಉಸ್ತುವಾರಿ ಬಿಡಿ. ಟ್ವಿಟ್ಟರ್ ಗಿಟ್ಟರ್ ಎಂದು ನಾಲಿಗೆ ಜಾರಬೇಡಿ. ಜಗತ್ತಿನಲ್ಲಿ ಏನೇನು ಆಗುತ್ತಿದೆ ಎಂಬುದನ್ನು ಗಮನಿಸಿ" ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X