Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜೈಲಿನಲ್ಲಿ ಸೌಲಭ್ಯಕ್ಕೆ ನಟ ದರ್ಶನ್...

ಜೈಲಿನಲ್ಲಿ ಸೌಲಭ್ಯಕ್ಕೆ ನಟ ದರ್ಶನ್ ಮನವಿ; ಶನಿವಾರಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ19 Sept 2025 9:37 PM IST
share
ಜೈಲಿನಲ್ಲಿ ಸೌಲಭ್ಯಕ್ಕೆ ನಟ ದರ್ಶನ್ ಮನವಿ; ಶನಿವಾರಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾದ ನಟ ದರ್ಶನ್‌ ತಮಗೆ ಹಾಸಿಗೆ, ತಲೆದಿಂಬು ಇನ್ನಿತರ ಸೌಲಭ್ಯ ಕಲ್ಪಿಸಲು ಜೈಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿರುವ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ‌.

ಕಾರಾಗೃಹದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ನಿರ್ದೇಶಿಸುವಂತೆ ಕೋರಿ ದರ್ಶನ್‌ ಹಾಗೂ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಪ್ರಕರಣದ 13ನೇ ಆರೋಪಿ ದೀಪಕ್ ಹಾಗೂ 14ನೇ ಆರೋಪಿ ಪ್ರದೂಷ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಾಧೀಶ ಐ.ಪಿ. ನಾಯ್ಕ್‌ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ಈ ವೇಳೆ ನ್ಯಾಯಾಧೀಶರು, ದರ್ಶನ್ ಮನವಿ ಕುರಿತು ಏನಾದರೂ ವಾದ ಮಂಡಿಸುತ್ತೀರಾ? ಎಂದು ತನಿಖಾಧಿಕಾರಿಗಳ ಪರ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕಮಾರ್‌ ಅವರನ್ನು ಕೇಳಿದರು. ಅದಕ್ಕೆ ಉತ್ತರಿಸಿದ ಪ್ರಸನ್ನ ಕುಮಾರ್ ಅವರು, ಈ ವಿಚಾರವಾಗಿ ಶನಿವಾರ ವಾದ ಮಂಡಿಸುವುದಾಗಿ ತಿಳಿಸಿದರು. ಇದರಿಂದ, ನ್ಯಾಯಾಧೀಶರು ದರ್ಶನ್‌ ಅರ್ಜಿಯನ್ನು ಶನಿವಾರಕ್ಕೆ ಮುಂದೂಡಿದರು.

ಕೊಲೆಯಲ್ಲಿ ದೀಪಕ್, ಪ್ರದೂಷ್ ಪಾತ್ರಕ್ಕೆ ಪುರಾವೆ:

ಆರೋಪ ಕೈಬಿಡುವಂತೆ ಕೋರಿ ದೀಪಕ್ ಹಾಗೂ ಪ್ರದೂಷ್ ಸಲ್ಲಿಸಿರುವ ಅರ್ಜಿ ಕುರಿತು ವಾದ ಮಂಡಿಸಿದ ಪ್ರಸನ್ನ ಕುಮಾರ್, ರೇಣುಕಾಸ್ವಾಮಿ ಮೇಲೆ ದೀಪಕ್ ಕೂಡ ಹಲ್ಲೆ ಮಾಡಿದ್ದಾನೆ ಎಂದು ಪ್ರತ್ಯಕ್ಷದರ್ಶಿ ಹೇಳಿಕೆ ನೀಡಿದ್ದಾರೆ. ದೀಪಕ್ ಬಟ್ಟೆಯಲ್ಲಿಯೂ ರೇಣುಕಾಸ್ವಾಮಿಯ ರಕ್ತದ ಕಲೆ ಪತ್ತೆಯಾಗಿದ್ದವು. ಆತನ ಚಪ್ಪಲಿಗಳು ಘಟನಾ ಸ್ಥಳದಲ್ಲಿ ಪತ್ತೆಯಾಗಿದ್ದವು. ಇತರ ಆರೋಪಿಗಳ ಸಂಪರ್ಕದಲ್ಲಿ ದೀಪಕ್‌ ಇರುವುದು ಮೊಬೈಲ್ ಕರೆಗಳ ದಾಖಲೆಗಳಿಂದ (ಸಿಡಿಆರ್‌) ದೃಢಪಟ್ಟಿದೆ. ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶಗಳನ್ನು ಓದುತ್ತಾ, ಆತನ ಮೇಲೆ ಹಲ್ಲೆ ನಡೆಸಲು ಇತರ ಆರೋಪಿಗಳಿಗೆ ಪ್ರದೂಷ್‌ ಪ್ರಚೋದನೆ ನೀಡಿದ್ದಾನೆ. ಆತನ ಪ್ಯಾಂಟ್ ಹಾಗೂ ಶರ್ಟ್‌ ಮೇಲೆಯೂ ರೇಣುಕಾಸ್ವಾಮಿಯ ರಕ್ತದ ಕಲೆಗಳು ಪತ್ತೆಯಾಗಿವೆ. ಆರೋಪಿ ಪ್ರದೂಷ್ ಕೊಲೆಯಲ್ಲಿ ಭಾಗಿಯಾಗಿರವುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು‌ ಕೋರ್ಟ್‌ಗೆ ವಿವರಿಸಿದರು.

ವಿಸಿ ಮೂಲಕ ಹಾಜರಾದ ಆರೋಪಿಗಳು:

ಬೆಳಗಿನ ಕಲಾಪದ ವೇಳೆ ದರ್ಶನ್‌, ಪವಿತ್ರಾ ಗೌಡ ಸೇರಿ ಜೈಲಿನಲ್ಲಿರುವ 7 ಆರೋಪಿಗಳು ವಿಡಿಯೊ ಕಾನ್ಫರೆನ್ಸ್ (ವಿಸಿ) ಮೂಲಕ ನ್ಯಾಯಾಧೀಶರ ಮುಂದೆ ತಮ್ಮ ಹಾಜರಾತಿ ದಾಖಲಿಸಿದರು. ಈ ವೇಳೆ ವಿಸಿ ಡಿವೈಸ್‌ನ ಮೈಕ್‌ ಅನ್ನು (ಆಡಿಯೋ) ಜೈಲು ಸಿಬ್ಬಂದಿ ಆಫ್‌ ಮಾಡಿದ್ದರು.

ಕಳೆದ ವಿಚಾರಣೆ ವೇಳೆ ವಿಸಿ ಮೂಲಕ ಹಾಜರಾಗಿದ್ದ ದರ್ಶನ್‌, ತಮ್ಮ ಕೈಗೆ ಫಂಗಸ್‌ ಆಗಿದೆ. ಕೈ ಮುಚ್ಚಲು ಬೆಚ್ಚಗಿನ ವಸ್ತುಗಳನ್ನು ಕೋರಿದರೂ ಅಧಿಕಾರಿಗಳು ಪೂರೈಸುತ್ತಿಲ್ಲ. ಇತರ ಆರೋಪಿಗಳೊಂದಿಗೆ ಸಮಾಲೋಚಿಸಲೂ ಬಿಡುತ್ತಿಲ್ಲ. ಕೊಠಡಿಯಿಂದ ಹೊರಗೆ ಬಿಡುತ್ತಿಲ್ಲ. ಜೈಲಿನಲ್ಲಿ ಬಹಳ ತೊಂದರೆ ಉಂಟಾಗಿದ್ದು, ತಮಗೆ ವಿಷ ನೀಡಲು ನಿರ್ದೇಶಿಸುವಂತೆ ನ್ಯಾಯಾಧೀಶರನ್ನು ಕೋರಿದ್ದರು. ಆದರೆ, ಶುಕ್ರವಾರ ಮಾತ್ರ ದರ್ಶನ್‌, ನ್ಯಾಯಾಧೀಶರ ಮುಂದೆ ಏನೂ ಹೇಳದೆ ಮೌನವಾಗಿ ನಿಂತಿದ್ದರು.

ಜೈಲಿನಲ್ಲಿರುವ ಆರೋಪಿಗಳು ಹಾಗೂ ಜಾಮೀನು ಮೇಲೆ ಬಿಡುಗಡೆಗೊಂಡು, ಕೋರ್ಟ್‌ಗೆ ಖುದ್ದು ಹಾಜರಾಗಿದ್ದ ಆರೋಪಿಗಳ ಹಾಜರಾತಿ ದಾಖಲಿಸಿಕೊಂಡ ನ್ಯಾಯಾಲಯ, ದೋಷಾರೋಪ ನಿಗದಿ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X