Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜೆ.ಪಿ.ಪಾರ್ಕ್‌ನಲ್ಲಿ ಜಯಪ್ರಕಾಶ್...

ಜೆ.ಪಿ.ಪಾರ್ಕ್‌ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ : ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ12 Oct 2025 4:22 PM IST
share
ಜೆ.ಪಿ.ಪಾರ್ಕ್‌ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ : ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು, ಅ.12 : "ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ್‌ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು.

'ಬೆಂಗಳೂರು ನಡಿಗೆ' ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ರವಿವಾರ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಪಾಲಿಕೆ ಆಯುಕ್ತರು ಹಾಗೂ ಜೆ.ಪಿ‌.ಪಾರ್ಕ್ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಿಂದ ಉದ್ಯಾನದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಟಾಯ್ ಟ್ರೈನ್, ಮಕ್ಕಳ ಆಟಿಕೆಗಳು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಏಕೆ ಉಂಟಾಗಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

ಪ್ರತಿದಿನವೂ ಎಲ್ಲಾ ಶೌಚಾಲಯಗಳಿಗೂ ಬೀಗ ಹಾಕಲಾಗಿರುತ್ತದೆ ಎನ್ನುವ ದೂರಿಗೆ, "ಇನ್ನೆರಡು ದಿನದಲ್ಲಿ ಈ ಸಮಸ್ಯೆ ಬಗೆಹರಿಯಲೇ ಬೇಕು" ಎಂದು ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರಿಗೆ ಸೂಚನೆ ನೀಡಿದರು. ಜಿಮ್ ಪರಿಕರಗಳು ಹಾಳಾಗಿರುವುದನ್ನು ನೋಡಿದ ಡಿಸಿಎಂ ಅವರು ಗರಂ ಆದರು.

ಉದ್ಯಾನದಲ್ಲಿನ ಕೆರೆಗೆ ಈ ಮೊದಲು ಮಳೆ ನೀರು ಹರಿಯುತ್ತಿತ್ತು. ಈಗ ಬರುತ್ತಿಲ್ಲ ಎಂದು ನಾಗರಿಕರೊಬ್ಬರು ದೂರಿದಾಗ, "ಹಾಗಾದರೆ ಕಾಲುವೆಯನ್ನು ಮುಚ್ಚಲಾಗಿದೆ. ಅದನ್ನು ಸರಿಪಡೊಸೋಣ" ಎಂದರು‌.

ಉದ್ಯಾನದ ಮೂಲೆಯೊಂದರಲ್ಲಿ ಬೇಲಿ ಕಿತ್ತು ಹಾಕಿ ಮಾದಕ ವ್ಯಸನಿಗಳ ಅಡ್ಡೆಯಾಗಿ ಮಾಡಿಕೊಳ್ಳಲಾಗಿದೆ ಎಂದು ದೂರಿದಾಗ, "ಚಲನವಲನಗಳನ್ನು ಗಮನಿಸಲು ಕ್ಯಾಮೆರಾ ಅಳವಡಿಸಬೇಕು, ಪೊಲೀಸರನ್ನು ನಿಯೋಜಿಸಬೇಕು, ವ್ಯಸನಿಗಳನ್ನು ಮಟ್ಟ ಹಾಕಬೇಕು" ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಗೆ ಖಡಕ್ ಸೂಚನೆ ನೀಡಿದರು.

"ಉದ್ಯಾನದಲ್ಲಿನ ಅಧ್ವಾನಗಳನ್ನು ನಾನೇ ಕಣ್ಣಾರೆ ನೋಡಿದ್ದೇನೆ. ಅದರ ವಿಡಿಯೋ ಚಿತ್ರೀಕರಣ ಕೂಡ ಮಾಡಿಸಿದ್ದೇನೆ. ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಕುಂದುಕೊರತೆಗಳು, ಸಮಸ್ಯೆಗಳು ಕಂಡುಬಂದರೆ 1533 ಸಹಾಯವಾಣಿಗೆ ದೂರು ನೀಡಿ ನಿಮ್ಮ ಅಹವಾಲನ್ನು ಸಲ್ಲಿಸಬಹುದು" ಎಂದರು.

"ಎಲ್ಲಿ ಕಸವಿದೆ, ರಸ್ತೆಗುಂಡಿಯಿದೆ ಎಂದು ಈ ಮೊದಲು ಸರ್ಕಾರದ ಗಮನಕ್ಕೆ ತರುವ ವ್ಯವಸ್ಥೆ ಸಾರ್ವಜನಿಕರಿಗೆ ಇತ್ತೇ? ನಾನು ಮೊಬೈಲ್ ಆ್ಯಪ್ ಮೂಲಕ ದೂರು ಸಲ್ಲಿಸುವ ವ್ಯವಸ್ಥೆ ತಂದಿದ್ದೇನೆ. ತೆರಿಗೆದಾರರಿಗೆ ಗೌರವ ಕೊಡಬೇಕಿರುವುದು ನಮ್ಮ ಕರ್ತವ್ಯ" ಎಂದರು.

"ಬೆಂಗಳೂರು ಯೋಜಿತ ನಗರವಲ್ಲ. ಕಂದಾಯ ಬಡಾವಣೆಗಳಾದ ನಂತರ ಪಾಲಿಕೆಯಾಗಿ ಪರಿವರ್ತನೆಯಾಗಿದೆ. ಕೆಲವೊಂದು ಕಡೆ ಮಾತ್ರ ಯೋಜಿತ ಬಡಾವಣೆಗಳಿವೆ. ಯಾವುದೇ ಪಕ್ಷವಿದ್ದರೂ ಸಹ ಸೇವೆ ಮಾಡಿದ್ದು ಮಾತ್ರ ಶಾಶ್ವತವಾಗಿ ಉಳಿದುಕೊಳ್ಳುತ್ತದೆ" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X