Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿದ್ಯುತ್ ಖಾಸಗೀಕರಣ, ಸ್ಮಾರ್ಟ್ ಮೀಟರ್...

ವಿದ್ಯುತ್ ಖಾಸಗೀಕರಣ, ಸ್ಮಾರ್ಟ್ ಮೀಟರ್ ಅಳವಡಿಕೆಗೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ26 Oct 2025 11:56 PM IST
share
ವಿದ್ಯುತ್ ಖಾಸಗೀಕರಣ, ಸ್ಮಾರ್ಟ್ ಮೀಟರ್ ಅಳವಡಿಕೆಗೆ ಖಂಡನೆ

ಬೆಂಗಳೂರು : ಸಾಮಾಜಿಕ ಜೀವನದ ಮೂಲಭೂತ ಅಗತ್ಯಗಳಲ್ಲಿ ವಿದ್ಯುತ್ ಪ್ರಮುಖ ಅಂಶ. ವಿದ್ಯುತ್ ಇಲ್ಲದಿದ್ದರೆ ಜೀವನವು ಸ್ಥಗಿತಗೊಳ್ಳುವ ಮಟ್ಟಿಗೆ ನಾವು ಅವಲಂಬಿತರಾಗಿದ್ದೇವೆ. ಒಂದು ಕಾಲದಲ್ಲಿ ಸರಕಾರದ ಅಡಿಯಲ್ಲಿದ್ದ ವಿದ್ಯುತ್ ಉದ್ಯಮವು ಈಗ ಖಾಸಗೀಕರಣವಾಗುತ್ತಿದೆ. ಬಂಡವಾಳಶಾಹಿ ವರ್ಗವು ವಿದ್ಯುತ್ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು ಬಯಸುತ್ತಿದೆ. ಕೂಡಲೇ ವಿದ್ಯುತ್ ವಲಯದ ಖಾಸಗೀಕರಣ ಹಾಗೂ ಸ್ಮಾರ್ಟ್‌ಮೀಟರ್ ಅಳವಡಿಕೆಯನ್ನು ನಿಲ್ಲಿಸಬೇಕು ಎಂದು ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘದ(ಎಐಇಸಿಎ)ಅಧ್ಯಕ್ಷ ಸ್ವಪನ್ ಘೋಷ್ ಆಗ್ರಹಿಸಿದ್ದಾರೆ.

ರವಿವಾರ ನಗರದ ಗಾಂಧಿಭವನದಲ್ಲಿ ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ(ಎಐಇಸಿಎ)ದ ವತಿಯಿಂದ ನಡೆದ ‘ದಕ್ಷಿಣ ಭಾರತದ ವಿದ್ಯುತ್ ಗ್ರಾಹಕರ ಸಮಾವೇಶ’ದಲ್ಲಿ ಮಾತನಾಡಿದ ಅವರು, ವಿದ್ಯುತ್ ವಲಯದ ಮೇಲೆ ಬಂಡವಾಳಶಾಹಿಗಳ ಗಮನವು ಸಾರ್ವಜನಿಕ ಸೇವಾ ಸ್ವರೂಪವನ್ನು ನಾಶಪಡಿಸಲಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ವಿದ್ಯುತ್ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆಯಂತಹ ಜನವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಬಳಕೆದಾರರೆಲ್ಲರೂ ಬೃಹತ್ ಚಳವಳಿಯನ್ನು ಪ್ರಾರಂಭಿಸಬೇಕು ಎಂದು ಕರೆ ನೀಡಿದರು.

ಹರಿಯಾಣ ವಿದ್ಯುತ್ ಮಂಡಳಿಯ ಮಾಜಿ ಅಧ್ಯಕ್ಷ ಎಂ.ಜಿ.ದೇವಸಹಾಯಂ ಮಾತನಾಡಿ, ವಿದ್ಯುತ್ ಕ್ಷೇತ್ರದ ಖಾಸಗೀಕರಣವು 30 ವಷರ್ಗಳ ಹಿಂದೆ ಪ್ರಾರಂಭವಾಗಿದ್ದು, ಅಧಿಕ ಲಾಭದ ಉದ್ದೇಶದಿಂದ ವಿದೇಶಿ ಹೂಡಿಕೆ ಆಕರ್ಷಿಸುವ ಗುರಿ ಹೊಂದಿದೆ. ಪ್ರಸ್ತುತ ಹಂತವು ರೈತರು ಮತ್ತು ವಸತಿ ಬಳಕೆದಾರರಿಗೆ ಅಡ್ಡ-ಸಬ್ಸಿಡಿಗಳನ್ನು ತೆಗೆದುಹಾಕಿ, ಬೆಲೆ ಹೆಚ್ಚಿಸುವ ಸ್ಮಾರ್ಟ್ ಮೀಟರ್‌ಗಳ ಬಳಕೆಯ ಬಲವಂತದ ಕಾರ್ಯವಿಧಾನವಾಗಿ ಮಾಡಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಸರಕಾರವು ಸಾರ್ವಜನಿಕ ಉಪಯುಕ್ತತೆಯ ಪಾಲನ್ನು ಖಾಸಗಿ ಕಂಪೆನಿಗಳಿಗೆ ಮಾರಾಟ ಮಾಡುವುದನ್ನು ಕಡ್ಡಾಯಗೊಳಿಸುತ್ತಿದೆ, ಪರಿಣಾಮಕಾರಿಯಾಗಿ ವಿದ್ಯುತ್ ಅನ್ನು ‘ಸಾರ್ವಜನಿಕ ಕಲ್ಯಾಣಕ್ಕಾಗಿ ಹಾಗೂ ಸಾರ್ವಜನಿಕರ ಒಳಿತಿಗಾಗಿ’ ಎಂದಿದ್ದದ್ದನ್ನು, ಮಾರುಕಟ್ಟೆ ಶಕ್ತಿಗಳು ಬೆಲೆಯನ್ನು ನಿರ್ಧರಿಸುವ ‘ಖಾಸಗಿ ಕಲ್ಯಾಣಕ್ಕಾಗಿ ಹಾಗೂ ಖಾಸಗಿ ಒಳಿತಿಗಾಗಿ’ ಎಂಬುದಾಗಿ ಪರಿವರ್ತಿಸುತ್ತಿವೆ ಎಂದು ಎಂ.ಜಿ.ದೇವಸಹಾಯಂ ತಿಳಿಸಿದರು.

ತಮಿಳುನಾಡಿನ ಪವರ್ ಇಂಜಿನಿಯರ್ಸ್ ಸೊಸೈಟಿಯ ಅಧ್ಯಕ್ಷ ಎಸ್.ಗಾಂಧಿ ಮಾತನಾಡಿ, ವಿದ್ಯುತ್ ಹಂಚಿಕೆಯು ರಾಷ್ಟ್ರೀಯ ಸಂಪನ್ಮೂಲವಾಗಿದ್ದು, ಅದನ್ನು ಲಾಭಕ್ಕಾಗಿ ಖಾಸಗೀಕರಣ ಮಾಡಬಾರದು. ಕೇಂದ್ರ ಸರಕಾರ ಸ್ಮಾರ್ಟ್ ಮೀಟರ್ ಮತ್ತು ತಿದ್ದುಪಡಿ ಮಸೂದೆಯನ್ನು ಮಂಡಿಸುತ್ತಿರುವುದು ಇದು ಆರನೇ ಬಾರಿ. ಖಾಸಗಿ ಸ್ಮಾರ್ಟ್ ಮೀಟರ್‌ಗಳ ಅಳವಡಿಕೆಯ ಒತ್ತಾಯವು ರಾಜ್ಯಗಳ ಮೇಲೆ ಭಾರೀ ಆರ್ಥಿಕ ಹೊರೆಯನ್ನು ಹೇರುತ್ತದೆ. ಇದು ಅಂತಿಮವಾಗಿ ತಿಂಗಳಿಗೆ 100 ಯೂನಿಟ್‌ಗಳಿಗಿಂತ ಕಡಿಮೆ ಬಳಸುವ 70 ಲಕ್ಷ ಕಡಿಮೆ ಆದಾಯದ ಗ್ರಾಹಕರನ್ನು ನಾಶಗೊಳಿಸಲಿದೆ ಎಂದರು.

ಸಮಾವೇಶದಲ್ಲಿ ಎಐಇಸಿಎ ಕಾರ್ಯಾಧ್ಯಕ್ಷ ಸಮರ್ ಸಿನ್ಹಾ, ಕೇರಳದ ಜನಕೀಯ ಪ್ರತಿರೋಧ ಸಮಿತಿ (ಜೆಪಿಎಸ್) ರಾಜ್ಯ ಉಪಾಧ್ಯಕ್ಷ ಬಿ.ದಿಲೀಪನ್, ಎಐಇಸಿಎ ಉಪಾಧ್ಯಕ್ಷ ಕೆ.ಸೋಮಶೇಖರ್, ಎಐಇಸಿಎ ಪ್ರಧಾನ ಕಾರ್ಯದರ್ಶಿ ಕೆ.ವೇಣುಗೋಪಾಲ್ ಭಟ್, ಹಲವರು ಭಾಗವಹಿಸಿದ್ದರು.

ನಿರ್ಣಯಗಳು

ವಿದ್ಯುತ್ ವಲಯದ ಖಾಸಗೀಕರಣ ನಿಲ್ಲಿಸಿ.

ಸ್ಮಾರ್ಟ್ ಮೀಟರ್‌ಗಳ ಅಳವಡಿಕೆ ಪ್ರಸ್ತಾವಕ್ಕೆ ತಡೆಯೊಡ್ಡಿ.

ಟೈಮ್ ಆಫ್ ಡೇ ಸುಂಕವನ್ನು ಹಿಂಪಡೆಯಿರಿ.

ಕರ್ನಾಟಕದಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆಯ ಮೇಲುತೆರಿಗೆ ಮತ್ತು ಸ್ಥಿರ ಶುಲ್ಕಗಳ ಹೆಚ್ಚಳವನ್ನು ಹಿಂಪಡೆಯಿರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X