Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ‘ಸುರಂಗ ರಸ್ತೆ ಯೋಜನೆ...

ಬೆಂಗಳೂರಿನಲ್ಲಿ ‘ಸುರಂಗ ರಸ್ತೆ ಯೋಜನೆ ವಿರೋಧಿಸಿ’ ಬಿಜೆಪಿ ಸಹಿ ಸಂಗ್ರಹ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ2 Nov 2025 8:14 PM IST
share
ಬೆಂಗಳೂರಿನಲ್ಲಿ ‘ಸುರಂಗ ರಸ್ತೆ ಯೋಜನೆ ವಿರೋಧಿಸಿ’ ಬಿಜೆಪಿ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು, ನ.2: ರಾಜ್ಯ ಸರಕಾರ ಉದ್ದೇಶಿತ ಸುರಂಗ ರಸ್ತೆ (ಟನಲ್) ಯೋಜನೆ ವಿರೋಧಿಸಿದ ಬಿಜೆಪಿ ನಾಯಕರು, ಸಹಿ ಸಂಗ್ರಹ ಜಾಗೃತಿ ಅಭಿಯಾನವನ್ನು ನಡೆಸಿದರು.

ರವಿವಾರ ಇಲ್ಲಿನ ಲಾಲ್‍ಬಾಗ್‍ನಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು, ಕಾರ್ಯಕರ್ತರು, ಲಾಲ್‍ಬಾಗ್ ಉದ್ಯಾನವನದಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ಕೈಬಿಡಿ ಎಂದು ಘೋಷಣೆ ಕೂಗಿ, ಬೆಂಗಳೂರು ರಕ್ಷಿಸಿ ಎಂದು ಸಹಿ ಸಂಗ್ರಹ ಮಾಡಿದರು.

ಸುರಂಗ ರಸ್ತೆ ಯೋಜನೆ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗಳಿಗೆ ಪರಿಹಾರವಲ್ಲ. ಸುರಂಗ ರಸ್ತೆಗಳು ನಗರಗಳಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡುವುದಿಲ್ಲ, ಬದಲಿಗೆ ಖಾಸಗಿ ಸಾರಿಗೆಯ ಮೇಲೆ ಹೆಚ್ಚು ಅವಲಂಬನೆ ಮತ್ತು ಸಾರ್ವಜನಿಕ ಸಾರಿಗೆಯ ಕೊರತೆ ಎಂಬ ಮೂಲ ಕಾರಣವನ್ನು ಪರಿಹರಿಸದೆ, ಕೇವಲ ಒಂದು ಜಂಕ್ಷನ್‍ನಿಂದ ಇನ್ನೊಂದಕ್ಕೆ ಸಂಚಾರವನ್ನು ಸ್ಥಳಾಂತರಿಸುತ್ತವೆ ಎಂದು ಬಿಜೆಪಿ ನಾಯಕರು ಟೀಕಿಸಿದರು.

ಈ ಯೋಜನೆಯು ಸೂಕ್ತವಾದ ಪರಿಸರ ಅಥವಾ ಭೂವೈಜ್ಞಾನಿಕ ಪರಿಣಾಮಗಳ ಅಧ್ಯಯನವಿಲ್ಲದೆ ಮುಂದುವರೆದಿರುವುದರಿಂದ, ಲಾಲ್‍ಬಾಗ್‍ನ ಪರಿಸರ ಮತ್ತು 3000 ದಶಲಕ್ಷ ವರ್ಷಗಳಷ್ಟು ಹಳೆಯದಾದ ಪೆನಿನ್ಸುಲಾರ್ ಬಂಡೆ ಎಂಬ ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕಕ್ಕೆ ಶಾಶ್ವತ ಹಾನಿ ಉಂಟು ಮಾಡುವ ಆತಂಕ ಇದೆ ಎಂದು ಆರೋಪಿಸಿದರು.

ಈ ಯೋಜನೆಗೆ ಸಾವಿರಾರು ಕೋಟಿಗಳನ್ನು ಖರ್ಚು ಮಾಡುವ ಬದಲು, ರಾಜ್ಯ ಸರಕಾರವು ಸುಸ್ಥಿರವಾದ, ದೀರ್ಘಕಾಲೀನ ಸಾರಿಗೆ ಪರಿಹಾರಗಳಲ್ಲಿ ಹೂಡಿಕೆ ಮಾಡಿ, ಎಲ್ಲರಿಗೂ ಸುಲಭವಾಗಿ ಮತ್ತು ಸಮರ್ಥವಾಗಿ ಲಭ್ಯವಿರುವ ಸಾರ್ವಜನಿಕ ಸಂಚಾರಕ್ಕಾಗಿ ಮೆಟ್ರೋ, ಉಪನಗರ ರೈಲು ಮತ್ತು ಬಿಎಂಟಿಸಿ ಜಾಲಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಶಾಸಕರಾದ ಕೆ.ಸಿ.ರಾಮೂರ್ತಿ, ಉದಯ್ ಗರುಡಾಚಾರ್, ವಿಧಾನ ಪರಿಷತ್ತಿನ ಸದಸ್ಯ ಗೋಪಿನಾಥ್ ರೆಡ್ಡಿ ಸೇರಿದಂತೆ ಪ್ರಮುಖರು ಇದ್ದರು.

ವಾರಕ್ಕೆ 20 ಸಾವಿರ ರೂ.ಬೇಕು: ನಗರದ ರಸ್ತೆ ಗುಂಡಿ ಮುಚ್ಚಲು ಸಿಎಂ ಸಿದ್ದರಾಮಯ್ಯ ಒಂದು ವಾರ ಗಡುವು ನೀಡಿದ್ದರೂ ಅದಕ್ಕೆ ಅಧಿಕಾರಿಗಳು ಸ್ವಲ್ಪವೂ ಬೆಲೆ ನೀಡಿಲ್ಲ. ಈ ಬಗ್ಗೆ ಗಮನ ಕೊಡದೆ ಸುರಂಗ ಯೋಜನೆ ರೂಪಿಸಲಾಗುತ್ತಿದೆ. ಯಾವುದೇ ಯೋಜನೆಗೆ ವರ್ಷಗಟ್ಟಲೆ ಅವಧಿ ಬೇಕಾಗುತ್ತದೆ. ಸುರಂಗ ಮಾಡಲು ಹೊರಟರೆ ಮುಂದಿನ ಪೀಳಿಗೆಗೆ ಆ ಯೋಜನೆ ಸಿಗಬಹುದು. ಒಬ್ಬ ಚಾಲಕ ಒಂದು ವಾರ ಸುರಂಗ ರಸ್ತೆಯಲ್ಲಿ ಹೋದರೆ, 20 ಸಾವಿರ ರೂ. ಶುಲ್ಕ ಪಾವತಿಸಬೇಕಾಗುತ್ತದೆ’

-ಆರ್.ಅಶೋಕ್, ವಿಪಕ್ಷ ನಾಯಕ, ವಿಧಾನಸಭೆ

ಸಹಿ ಸಂಗ್ರಹದಲ್ಲಿ ಕನ್ನಡ: ಸಹಿ ಸಂಗ್ರಹ ಸಂದರ್ಭದಲ್ಲಿ ಮೊದಲಿಗೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಫಲಕದ ಮೇಲೆ ‘ಬೆಂಗಳೂರು ರಕ್ಷಿಸಿ’ ಎಂಬ ವಾಕ್ಯ ಬರೆದು ಇದು ಸರಿಯಿದೆಯೇ ಎಂದು ಪತ್ರಕರ್ತರನ್ನು ಪ್ರಶ್ನಿಸಿದ ಪ್ರಸಂಗ ಜರುಗಿತು. ಅನಂತರ, ಕನ್ನಡದಲ್ಲಿ ಲಾಲ್‍ಬಾಗ್ ರಕ್ಷಿಸಿ ಬರೆಯುವಂತೆ ಸಂಸದ ತೇಜಸ್ವಿ ಸೂರ್ಯಗೆ ಅಶೋಕ್ ಸೂಚಿಸಿದರೂ, ಟೆನಲ್ ರೋಡ್ ಎಂದು ಇಂಗ್ಲಿಷ್‍ನಲ್ಲಿ ಬರೆದು ರಕ್ಷಿಸಿ ಪದ ಮಾತ್ರ ಕನ್ನಡದಲ್ಲಿ ಬರೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X