Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಲ್ಲ ಜಿಲ್ಲೆಗಳಲ್ಲಿ ತುಳು ಉಪನ್ಯಾಸ...

ಎಲ್ಲ ಜಿಲ್ಲೆಗಳಲ್ಲಿ ತುಳು ಉಪನ್ಯಾಸ ಆಯೋಜಿಸಲು ಪ್ರಸ್ತಾವ ಸಲ್ಲಿಸಿ : ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ2 Nov 2025 10:08 PM IST
share
ಎಲ್ಲ ಜಿಲ್ಲೆಗಳಲ್ಲಿ ತುಳು ಉಪನ್ಯಾಸ ಆಯೋಜಿಸಲು ಪ್ರಸ್ತಾವ ಸಲ್ಲಿಸಿ : ಪುರುಷೋತ್ತಮ ಬಿಳಿಮಲೆ


ಬೆಂಗಳೂರು : ತುಳುವರಿಗೆ ಕನ್ನಡದ ಬಗ್ಗೆ ಗೊತ್ತಿದೆ. ಕನ್ನಡಿಗರಿಗೆ ತುಳುವಿನ ಬಗ್ಗೆ ಗೊತ್ತಾಗಬೇಕು. ಅದಕ್ಕಾಗಿ ಉಡುಪಿ ಮತ್ತು ಮಂಗಳೂರು ಬಿಟ್ಟು ಉಳಿದ ಎಲ್ಲ ಜಿಲ್ಲೆಗಳಲ್ಲಿ ತುಳುಭಾಷೆಯ ಬಗ್ಗೆ ಉಪನ್ಯಾಸ ಆಯೋಜಿಸಲು ಮುಂದಿನ ವರ್ಷದ ಬಜೆಟ್‍ನಲ್ಲಿ ಹಣ ನೀಡುವಂತೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸಲಹೆ ನೀಡಿದ್ದಾರೆ.

ರವಿವಾರ ನಗರದ ಬಿಎಂಶ್ರೀ ಕಲಾ ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಹಾಗೂ ಋತುಗಾನ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ‘ಕನ್ನಡ ಜಗತ್ತಿಗೆ ತುಳು ಲೋಕದ ಪರಿಚಯ ಮಾಲಿಕೆ-ತುಳು ಪಾಡ್ದನಗಳ ಲೋಕದೃಷ್ಟಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಸಮಾಜ ಹೇಗೆ ಬೆಳೆದಿದೆ ಎಂದರೆ ಒಂದು ಸಮುದಾಯ ಇನ್ನೊಂದು ಸಮುದಾಯದ ಬಗ್ಗೆ ಏನನ್ನು ತಿಳಿದುಕೊಳ್ಳುವುದಿಲ್ಲ. ತುಳುವರು ಮತ್ತು ಕನ್ನಡಿಗರು ಒಟ್ಟಿಗೆ ಬೆಳೆದಿದ್ದೇವೆ. ತುಳುನಾಡು ಕರ್ನಾಟಕದ ಭಾಗವೇ ಆಗಿದೆ. ಆದರೆ ಕನ್ನಡಿಗರು ತುಳುವಿನ ಬಗ್ಗೆ ತಿಳಿದುಕೊಂಡಿರುವುದು ಬಹಳ ಕಡಿಮೆ ಎಂದು ಬೇಸರ ವ್ಯಕ್ತಪಡಿಸಿದರು.

ಯಕ್ಷಗಾನದಂತಹ ದೊಡ್ಡ ಕಲೆಯನ್ನು ಕೂಡ ತುಳು ಭಾಷಿಕರೇ ಹೆಚ್ಚು ನೋಡುತ್ತಾರೆ. ನನ್ನ ಮಾತೃ ಭಾಷೆ ತುಳು ಆದರೂ ಕೂಡ ಕನ್ನಡದಲ್ಲೇ ಎಂಎ ಮಾಡಿದ್ದೇನೆ. ಮಂಜೇಶ್ವರ ಗೋವಿಂದಪೈ, ಕಯ್ಯಾರ ಕಿಞ್ಞಣ್ಣರೈ, ಪಂಜೆ ಮಂಗೇಶರಾಯರು ಸೇರಿ ಅನೇಕ ತುಳುವರು ಕನ್ನಡಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ತುಳು ಪಾಡ್ದನಗಳ ಬಗ್ಗೆ ಕನ್ನಡಿಗರಿಗೆ ಹೇಳುವ ಜೊತೆಗೆ ಹೊಸ ತಲೆಮಾರಿನ ತುಳುವರಿಗೂ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಪಾಡ್ದನ ಎಂದರೆ ತುಳುನಾಡಿನ ದೈವಗಳ ಕಥನ. ಪಾಡ್ದನಗಳು ಮೌಖಿಕ ರೂಪದಲ್ಲಿ ಬಂದಿವೆ. ಆದ್ದರಿಂದ ಅವುಗಳ ಲೋಕದೃಷ್ಟಿಯೇ ಬೇರೆ. ಪಾಡ್ದನಗಳ ಲೋಕದೃಷ್ಟಿಯಲ್ಲಿ ಹಸಿವು, ಬಡತನ, ಜಾತೀಯತೆಯನ್ನು ಹೇಳಲಾಗಿದೆ. ತುಳುನಾಡಿನಲ್ಲಿ ಅನೇಕ ದೈವಗಳು ಇವೆ. ಎಲ್ಲ ದೈವಗಳ ಪದಕೋಶವನ್ನು ಹೊರತರಬೇಕಿದೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಂಬಾ ಜನರು ತುಳುವಿನಲ್ಲಿ ಏನಿದೆ? ಎಂದು ಕೇಳುತ್ತಾರೆ. ಕನ್ನಡ ಜಗತ್ತಿನಲ್ಲಿ ಏನೇನು ಇದೆಯೋ ಅದೆಲ್ಲವೂ ತುಳುವಿನಲ್ಲಿದೆ. ಕನ್ನಡ ಸಾಹಿತ್ಯದಲ್ಲಿರುವ ಎಲ್ಲ ಪ್ರಕಾರಗಳು ತುಳು ಸಾಹಿತ್ಯದಲ್ಲಿಯೂ ಇವೆ ಎಂದು ತಿಳಿಸಿದರು.

ಹಿರಿಯ ತುಳು ನಾಟಕ ನಿರ್ದೇಶಕ ಸುಧಾಕರ ಬನ್ನಂಜೆ ಮಾತನಾಡಿ, ತುಳುವರು ಕನ್ನಡದ ಅಭಿವ್ಯಕ್ತಿಯಲ್ಲಿ ದೊಡ್ಡ ಪಾತ್ರವಹಿಸಿದ್ದೇವೆ. ನಮ್ಮ ಮಾತೃಭಾಷೆ ತುಳುವಾದರೂ ನಾವು ಶಾಲೆಯಲ್ಲಿ ತುಳು ಮಾತನಾಡಿದರೆ ಶಿಕ್ಷಕರು ಹೊಡೆಯುತ್ತಿದ್ದರು. ತುಳು-ಕನ್ನಡ ಎರಡೂ ಕೂಡ ಏಕರೂಪದಲ್ಲಿ ಬೆಳೆದ ಭಾಷೆಗಳು. ತುಳು ಭಾಷೆಯ ಲಿಪಿಯಿಲ್ಲದ ಒಂದು ಕಾಲದಲ್ಲಿ ಜನರ ಭಾವನೆ ಮತ್ತು ಮನಸ್ಸಿನ ಮಾತುಗಳ ಮೂಲಕ ಇಲ್ಲಿಯ ತನಕ ಉಳಿದಿರುವುದನ್ನು ನೋಡಿದರೆ ತುಳುವಿನ ಮಹತ್ವ ಗೊತ್ತಾಗುತ್ತದೆ ಎಂದು ತಿಳಿಸಿದರು.

ಕನ್ನಡ ಮತ್ತು ತುಳು ಭಾಷೆಗಳು ಮೇರು ಶಿಖರಕ್ಕೆ ಏರುತ್ತಿವೆ. ತುಳುವರು ಯಾವತ್ತಿಗೂ ಸಾಹಸಪ್ರಿಯರು, ಹಾಸ್ಯಪ್ರವೃತ್ತಿವುಳ್ಳವರು. ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸುವ ಕುರಿತು ಅನೇಕ ಪ್ರಯತ್ನಗಳು ಆಗುತ್ತಿವೆ. ಅದರ ಜತೆಗೆ ಕರ್ನಾಟಕದಲ್ಲಿ ತುಳು ರಾಜ್ಯದ ಅಧಿಕೃತ ಭಾಷೆಯಾಗಬೇಕು ಎಂದು ತಿಳಿಸಿದರು.

ಇದೇ ವೇಳೆ ಕವಿಗಳಾದ ರುಕ್ಮಿಣಿ ನಾಯರ್, ಆನಂದ ಕುಮಾರ್.ಎಸ್.ಡಿ, ಸಯ್ಯದ್ ಯೇಜಸ್ ಪಾಷ, ಡಾ.ಪದ್ಮಾ ಟಿ.ಚಿನ್ಮಯಿ, ರಾಕೇಶ್ ಎಂ, ಸ್ಮಿತಾ ಬಲ್ಲಾಳ್ ಬೆಂಗಳೂರು ಅವರು ಕವಿತೆ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ಸಂಚಾಲಕ ಶೇಖರ್ ಪುತ್ರನ್, ಋತುಗಾನ ಪ್ರತಿಷ್ಠಾನದ ಅಧ್ಯಕ್ಷೆ ವಿಜಯಲಕ್ಷ್ಮಿ ಸತ್ಯಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X