Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪಶ್ಚಿಮಘಟ್ಟದಲ್ಲಿ ಕಾರ್ಯಗತವಾದ ಯೋಜನೆಗಳ...

ಪಶ್ಚಿಮಘಟ್ಟದಲ್ಲಿ ಕಾರ್ಯಗತವಾದ ಯೋಜನೆಗಳ ಪರಾಮರ್ಶೆಗೆ ಈಶ್ವರ್ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Nov 2025 10:49 PM IST
share
ಪಶ್ಚಿಮಘಟ್ಟದಲ್ಲಿ ಕಾರ್ಯಗತವಾದ ಯೋಜನೆಗಳ ಪರಾಮರ್ಶೆಗೆ ಈಶ್ವರ್ ಖಂಡ್ರೆ ಸೂಚನೆ
‘ಶರಾವತಿ ಅರಣ್ಯ ಬಿಡುಗಡೆ ಪ್ರಸ್ತಾವನೆ: ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಸಲ್ಲಿಸಲು ಸಮ್ಮತಿ’

ಬೆಂಗಳೂರು : ಪಶ್ಚಿಮಘಟ್ಟದಲ್ಲಿ ಕಾರ್ಯಗತವಾಗಿರುವ ರಸ್ತೆ ಮತ್ತಿತರ ಯೋಜನೆಗಳಲ್ಲಿ ಷರತ್ತುಗಳ ಅನುಪಾಲನೆ ಆಗಿದೆಯೆ ಇಲ್ಲವೆ ಎಂಬ ಬಗ್ಗೆ ಪರಾಮರ್ಶೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ಬುಧವಾರ ನಗರದ ಅರಣ್ಯ ಭವನದಲ್ಲಿ ನಡೆದ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ 4ನೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಿರೂರು ಸೇರಿದಂತೆ ಹಲವೆಡೆ ಗುಡ್ಡ ಕುಸಿತ ಆಗಿದ್ದು, ಗುಡ್ಡವನ್ನು 90 ಡಿಗ್ರಿಯಲ್ಲಿ ಕಡಿಯುವ ಬದಲು, 45 ಡಿಗ್ರಿ ಕೋನದಲ್ಲಿ ಕಡಿದರೆ ಕುಸಿತ ತಡೆಯಬಹುದು ಎಂದರು.

ಅರಣ್ಯ, ವನ್ಯಜೀವಿಧಾಮಗಳಲ್ಲಿ ಯಾವುದೆ ಯೋಜನೆಗೆ ಅನುಮತಿ ನೀಡುವಾಗ ವನ್ಯಜೀವಿಗಳಿಗೆ ತೊಂದರೆ ಆಗದಂತೆ ಅಪಾಯ ತಗ್ಗಿಸುವಿಕೆ ಪರಿಹಾರಗಳೊಂದಿಗೆ ಪ್ರಸ್ತಾವನೆ ಮಂಡಿಸುವುದನ್ನು ಕಡ್ಡಾಯಗೊಳಿಸಲು ಈಶ್ವರ್ ಖಂಡ್ರೆ ನಿರ್ದೇಶನ ನೀಡಿದರು.

ಶರಾವತಿಯ ಸಿಂಹಬಾಲದ ಸಿಂಗಳೀಕ ವನ್ಯಜೀವಿಧಾಮದ ಅರಣ್ಯ ಪ್ರದೇಶವನ್ನು ಬಿಡುಗಡೆಗೊಳಿಸುವ ಪ್ರಸ್ತಾವನೆಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಅನುಮೋದನೆಗಾಗಿ ಶಿಫಾರಸ್ಸು ಮಾಡುವಂತೆ ಸೆಪ್ಟೆಂಬರ್ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಯ ಅನುಮೋದನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಕಳುಹಿಸಿ ಎಂದು ಅವರು ಸೂಚಿಸಿದರು.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 291 ಜನವಸತಿ ಪ್ರದೇಶಗಳಿಗೆ (ಯೋಜನೆಯ ಹಂತ-2ರಲ್ಲಿ 193 ಜನವಸತಿ ಪ್ರದೇಶಗಳಿಗೆ) ಕುಡಿಯುವ ನೀರಿನ ಸಂಪರ್ಕ ನೀಡುವ ಪ್ರಸ್ತಾವನೆಯ ಬಗ್ಗೆ ಚರ್ಚಿಸಿದ ಮಂಡಳಿ, 4.4573 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಬಿಡುಗಡೆಗೊಳಿಸುವ ಪ್ರಸ್ತಾವನೆನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಅನುಮೋದನೆಗಾಗಿ ಶಿಫಾರಸ್ಸು ಮಾಡಲು ತೀರ್ಮಾನಿಸಿತು.

ಬಿಎಸ್ಸೆನ್ನೆಲ್ ಅತ್ತಿವೇರಿ ಪಕ್ಷಿಧಾಮ, ಶರಾವತಿ ಸಿಂಗಳೀಕ ವನ್ಯಜೀವಿಧಾಮ ಹಾಗೂ ಸೋಮೇಶ್ವರ ವನ್ಯಜೀವಿಧಾಮದಲ್ಲಿ ಸಂವಹನ ಕಂಬಗಳನ್ನು ಅಳವಡಿಸುವ ಪ್ರಸ್ತಾವನೆಯನ್ನು ಮುಂದೂಡಲು ಮತ್ತು ಮುಂದಿನ ಸಭೆಯಲ್ಲಿ ಪರಿಸರಕ್ಕೆ, ಪಶು ಪಕ್ಷಿಗಳಿಗೆ ಆಗುವ ತೊಂದರೆಯ ಕುರಿತಂತೆ ವಿವರ ನೀಡಲು ಸೂಚಿಸಲಾಯಿತು.

ಶರಾವತಿ ಸಿಂಗಳೀಕ ವನ್ಯಜೀವಿಧಾಮ, ರಂಗನತಿಟ್ಟು ಪಕ್ಷಿಧಾಮದ ಪರಿಸರ ಸೂಕ್ಷ್ಮ ವಲಯ ಹಾಗೂ ಸೋಮೇಶ್ವರ ವನ್ಯಜೀವಿಧಾಮದಲ್ಲಿ ರಸ್ತೆ ನಿರ್ಮಾಣ, ಅಗಲೀಕರಣ ಯೋಜನೆಗಳಿಗೆ ಸಂಬಂಧಿಸಿದ ಯೋಜನೆಗಳಿಗೆ ಅನುಮೋದನೆ ನೀಡುವ ಪೂರ್ವದಲ್ಲಿ ವನ್ಯಜೀವಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಯೋಜನೆ ರೂಪಿಸುವ ಷರತ್ತಿನೊಂದಿಗೆ ಸಮ್ಮತಿಸಲು ಅನುಮೋದನೆ ನೀಡಲಾಯಿತು.

ಚಿತ್ತಾಪುರದಲ್ಲಿ ಚಿರತೆ ಸಂರಕ್ಷಣಾ ಮೀಸಲು ಸ್ಥಾಪಿಸುವ ಕುರಿತಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುವಂತೆ ಮತ್ತು ವರದಿ ಸಲ್ಲಿಸುವಂತೆ ಈಶ್ವರ್ ಖಂಡ್ರೆ ಸೂಚಿಸಿದರು. ಸಭೆಯಲ್ಲಿ ಮಂಡಳಿಯ ಸದಸ್ಯರು ಹಾಗೂ ಶಾಸಕ ಅಶೋಕ್ ಪಟ್ಟಣ್, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್, ಅರಣ್ಯ ಕಾರ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ, ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

‘ಕೆರೆಕಟ್ಟೆ ಆನೆಗೆ ರೇಡಿಯೊ ಕಾಲರ್ ಹಾಕಿ ಕಾಡಿಗೆ ಬಿಡಿ’: ಚಿಕ್ಕಮಗಳೂರು ಜಿಲ್ಲೆ ಕೆರೆಕಟ್ಟೆ ಬಳಿ ಸೆರೆ ಹಿಡಿಯಲಾಗಿರುವ ಆನೆಗೆ ರೇಡಿಯೊ ಕಾಲರ್ ಅಳವಡಿಸಿ ಕಾಡಿಗೆ ಬಿಡುವುದು ಸೂಕ್ತ. ಇತ್ತೀಚೆಗೆ ಇಬ್ಬರ ಸಾವಿಗೆ ಕಾರಣವಾದ ಆನೆಯನ್ನು ಸೆರೆ ಹಿಡಿದು ಶಿಬಿರದಲ್ಲಿರಿಸಲಾಗಿದೆ. ಆನೆಯ ಸ್ವಭಾವದ ಪರಾಮರ್ಶೆ ನಡೆಸಿ, ಉನ್ನತಾಧಿಕಾರಿಗಳು ಹಾಗೂ ತಜ್ಞರು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಈಶ್ವರ್ ಖಂಡ್ರೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X