Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಂಘಟಿತ ಅಪರಾಧ ಪ್ರಕರಣಗಳು ಬಾಕಿ...

ಸಂಘಟಿತ ಅಪರಾಧ ಪ್ರಕರಣಗಳು ಬಾಕಿ ಇಲ್ಲದಿದ್ದರೂ ಕೊಕಾ ಅನ್ವಯ : ಬೈರತಿ ಬಸವರಾಜ್ ವಕೀಲರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ16 Nov 2025 12:15 AM IST
share
ಸಂಘಟಿತ ಅಪರಾಧ ಪ್ರಕರಣಗಳು ಬಾಕಿ ಇಲ್ಲದಿದ್ದರೂ ಕೊಕಾ ಅನ್ವಯ : ಬೈರತಿ ಬಸವರಾಜ್ ವಕೀಲರ ಆಕ್ಷೇಪ

ಬೆಂಗಳೂರು : ಸಂಘಟಿತ ಅಪರಾಧದ ಅಡಿ ಕೊಕಾ ಕಾಯ್ದೆ ಅನ್ವಯಿಸಲು ಕ್ರಿಮಿನಲ್‌ ಹಿನ್ನೆಲೆ ಇರಬೇಕು. ಆದರೆ, ಅಂತಹ ಪ್ರಕರಣಗಳ ಅನುಪಸ್ಥಿತಿಯಲ್ಲಿ ಕೊಕಾ ಕಾಯ್ದೆ ವಿಧಿಸುವುದು ಕಾನೂನುಬಾಹಿರ ಎಂದು ಶಾಸಕ ಬೈರತಿ ಬಸವರಾಜು ಪರ ಹಿರಿಯ ವಕೀಲರು ಹೈಕೋರ್ಟ್‌‌ನಲ್ಲಿ ವಾದ ಮಂಡಿಸಿದರು.

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೊಕಾ ಕಾಯ್ದೆ ಅನ್ವಯಿಸಿರುವುದನ್ನು ಪ್ರಶ್ನಿಸಿ ಮತ್ತು ಕೊಲೆ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಇದೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ನಡೆಸಿತು.

ಬೈರತಿ ಬಸವರಾಜು ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ ಅವರು, ಕೊಕಾ ಕಾಯ್ದೆ ಸೆಕ್ಷನ್‌ 22(3)ರ ಅಡಿ ವಿಚಾರಣಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಲು ನಿರ್ಬಂಧವಿದೆ. ಆದ್ದರಿಂದ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಕೊಕಾ ಕಾಯ್ದೆ ಅನ್ವಯಿಸಿರುವುದು ಸರಿಯೋ, ತಪ್ಪೋ ಎನ್ನುವ ಪ್ರಶ್ನೆಯೂ ಇದೆ. ರಿಟ್‌ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದರೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ರಕ್ಷಣೆ ಒದಗಿಸಬಹುದು. ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಅದು ಜಾರಿಯಲ್ಲಿರಲಿದೆ ಎಂದರು.

ತನಿಖೆಗೆ ಸಹಕರಿಸುತ್ತಿಲ್ಲ ಅಥವಾ ಪ್ರಾಸಿಕ್ಯೂಷನ್‌ಗೆ ಪೂರಕವಾಗಿ ಹೇಳಿಕೆ ನೀಡುತ್ತಿಲ್ಲ ಎಂದು ಜಾಮೀನು ಅಥವಾ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಲಾಗದು. ಕೊಕಾ ಕಾಯ್ದೆ ಅನ್ವಯಿಸಿರುವ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದರೆ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಕೊಕಾ ಅನ್ವಯಿಸಿರುವುದಕ್ಕೆ ಬಾಕಿ 6 ಎಫ್‌ಐಆರ್‌ಗಳಿವೆ ಎಂದು ಹೇಳಿರುವ ಪ್ರಾಸಿಕ್ಯೂಷನ್‌, ಈ ಪೈಕಿ ಮೂರು ಆಸ್ತಿ ವಿವಾದಕ್ಕೆ ಸಂಬಂಧಿಸಿವೆ ಎಂದು ಹೇಳಿದೆ. ಆದರೆ, ಯಾವುದೇ ಎಫ್‌ಐಆರ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿಲ್ಲ. ಸಂಘಟಿತ ಅಪರಾಧ ಸಿಂಡಿಕೇಟ್‌ ಆರೋಪದ ಅಡಿ 3 ವರ್ಷ ಶಿಕ್ಷೆ ವಿಧಿಸಬಹುದಾದ ಎರಡು ಪ್ರಕರಣಗಳು ಬಾಕಿ ಇದ್ದಾಗ ಕೊಕಾ ಅನ್ವಯಿಸಬಹುದು. ಈ ಪ್ರಕರಣದಲ್ಲಿ ಒಂದೇ ಒಂದು ಪ್ರಕರಣ ಇರುವುದರಿಂದ ಕೊಕಾ ಅನ್ವಯಿಸಿರುವ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.

ಸಿಐಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಅವರು, ಬೈರತಿ ಬಸವರಾಜು ಅವರು 2025ರ ಸೆಪ್ಟೆಂಬರ್ 9ರಂದು ಮ್ಯಾಜಿಸ್ಟ್ರೇಟ್‌ ಮುಂದೆ ದಾಖಲಿಸಿರುವ ಹೇಳಿಕೆಯನ್ನು ಪರಿಶೀಲಿಸಬಹುದು. ಬೈರತಿ ಬಸವರಾಜು ಅವರ ಉದ್ಯಮ ಪಾಲುದಾರರ ಹೇಳಿಕೆಯನ್ನು ದಾಖಲಿಸಲಾಗಿದೆ. ಇದೆಲ್ಲವನ್ನೂ ನ್ಯಾಯಾಲಯ ನೋಡಬಹುದು ಎಂದರು.

ಬೈರತಿ ಬಸವರಾಜು ಅವರು ಉತ್ತರ ಪ್ರದೇಶದಲ್ಲಿ ನಡೆದಿದ್ದ ಕುಂಭಮೇಳಕ್ಕೆ ತೆರಳಿದ್ದರು. ಅವರ ಜತೆ ಇತರ ಆರೋಪಿಗಳೂ ಹೋಗಿದ್ದರು. ಇದಕ್ಕೆ ಪೂರಕವಾದ ವಿಮಾನ ಪ್ರಯಾಣದ ಟಿಕೆಟ್‌ ಇವೆ. ಒಟ್ಟಿಗೆ ಜನ್ಮದಿನ ಆಚರಿಸಿರುವ ಚಿತ್ರಗಳಿವೆ. ಆದರೆ, ಅವರಾರೂ ನನಗೆ ಗೊತ್ತಿಲ್ಲ ಎಂದು ಬಸವರಾಜು ತಿಳಿಸಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದ ಮೊದಲನೇ ಆರೋಪಿ ವಿದೇಶಕ್ಕೆ ಹೋಗಿದ್ದು, ಮೊಬೈಲ್‌ ನಾಶಪಡಿಸಿದ್ದಾರೆ. ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಿ, ಆತನನ್ನು ಶ್ರೀಲಂಕಾದಲ್ಲಿ ಬಂಧಿಸಲಾಗಿದೆ. ಆತನ ಜತೆ ಹೋಗಿದ್ದ ಇನ್ನೊಬ್ಬ ವ್ಯಕ್ತಿಯನ್ನು ಇದುವರೆಗೆ ಪತ್ತೆ ಮಾಡಲಾಗಿಲ್ಲ ಎಂದರು.

ಬೈರತಿ ಬಸವರಾಜು ಅವರು ಇಡೀ ತನಿಖೆಯನ್ನು ಹಾದಿ ತಪ್ಪಿಸಿದ್ದಾರೆ. ಅವರನ್ನು ಕಸ್ಟಡಿಗೆ ಪಡೆಯದೇ ತನಿಖೆ ಮುಂದುವರಿಸಲಾಗದು. ಬಸವರಾಜು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಅಥವಾ ಹೈಕೋರ್ಟ್ ಪರಿಗಣಿಸಲು ಅವಕಾಶವಿಲ್ಲ. ಬೈರತಿ ಬಸವರಾಜು ಅವರು ತನಿಖೆಗೆ ಹಿಂದೆಯೂ ಸಹಕರಿಸಿಲ್ಲ. ಆದ್ದರಿಂದ, ಬೈರತಿ ಬಸವರಾಜು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಮತ್ತು ಎಫ್‌ಐಆರ್‌ ಪ್ರಶ್ನಿಸಿರುವ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X