Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ...

ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ26 Nov 2025 7:30 PM IST
share
ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು : ಎಂ.ಬಿ.ಪಾಟೀಲ್

ಲಂಡನ್ : ರಾಜ್ಯಕ್ಕೆ ಬಂಡವಾಳ ಹೂಡಿಕೆ ಸೆಳೆಯುವ ಉದ್ದೇಶದಿಂದ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಗ್ರೀನ್-ಜೆಟ್ಸ್, ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್, ಎಂಬಿಡಿಎ ಮುಂತಾದ ದಿಗ್ಗಜ ಕಂಪನಿಗಳೊಂದಿಗೆ ಎರಡನೆಯ ದಿನವಾದ ಮಂಗಳವಾರ ಮಾತುಕತೆ ನಡೆಸಿ, ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ.

ಇಲ್ಲಿನ ಫೋರ್ ಸೀಸನ್ ಹೋಟೆಲಿನಲ್ಲಿ ಮಾತುಕತೆ ನಡೆಸಿರುವ ಅವರು, ಡ್ರೋನ್ ಮತ್ತು ಮುಂದಿನ ತಲೆಮಾರಿನ ವಿಮಾನಗಳಿಗೆ ಬೇಕಾಗುವ ಅಧಿಕ ಸಾಮಥ್ರ್ಯದ ಎಲೆಕ್ಟ್ರಿಕ್ ಜೆಟ್ ಮತ್ತು ಡಕ್ಟೆಡ್-ಫ್ಯಾನ್ ಪ್ರೊಪಲ್ಶನ್ ತಯಾರಿಕೆಗೆ ಹೆಸರಾಗಿರುವ ಗ್ರೀನ್ ಜೆಟ್ಸ್ ಕಂಪನಿಯು ಬೆಂಗಳೂರಿಗೆ ಸಮೀಪವಿರುವ ಜಾಗದಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದೆ. ನಾವು ಕೂಡ ಆದ್ಯತೆಯ ಮೇಲೆ ಭೂಮಿ ಒದಗಿಸುವ ಭರವಸೆ ನೀಡಿದ್ದೇವೆ ಎಂದಿದ್ದಾರೆ.

ಫಿಡೋ ಎಐ ಕಂಪನಿ ಕೂಡ ಕರ್ನಾಟಕದಲ್ಲಿ ತನ್ನದೊಂದು ತಯಾರಿಕಾ ಘಟಕ ಆರಂಭಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದೆ ಎಂದು ಅದರ ಉನ್ನತಾಧಿಕಾರಿಗಳು ತಿಳಿಸಿದ್ದಾರೆ. ವಿನ್ಯಾಸಕ್ಕೆ ಹೆಚ್ಚಿನ ಮಹತ್ವ್ವವಿರುವ ಸ್ಮಾರ್ಟ್ ಫೋನ್ ತಯಾರಿಸುವ ನಥಿಂಗ್ ಕಂಪನಿಯೊಂದಿಗಿನ ಚರ್ಚೆಯಲ್ಲಿ ರಾಜ್ಯದಲ್ಲಿ ಒಂದು ತಯಾರಿಕಾ ಸ್ಥಾವರ ಸ್ಥಾಪಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಉನ್ನತ ಎಂಜಿನಿಯರಿಂಗ್ ವಲಯದಲ್ಲಿ ಹೆಸರು ಮಾಡಿರುವ ರೋಡ್ಸ್ ಗ್ರೂಪ್ ಜತೆಗಿನ ಮಾತುಕತೆಯಲ್ಲಿ, ಕಂಪನಿಯ ಉನ್ನತ ಮಟ್ಟದ ನಿಯೋಗವು ಆದಷ್ಟು ಬೇಗ ಕರ್ನಾಟಕಕ್ಕೆ ಭೇಟಿ ನೀಡಬೇಕೆಂದು ಆಹ್ವಾನಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಈ ಮಾತುಕತೆಗಳಲ್ಲಿ ಗ್ರೀನ್ ಜೆಟ್ಸ್ ಸಿಇಒ ಅನ್ಮೋಲ್ ಮನೋಹರ್, ಫಿಡೋ ಎಐ ಸಹ ಸಂಸ್ಥಾಪಕಿ ವಿಕ್ಟೋರಿಯಾ ಎಡ್ವಡ್ರ್ಸ್, ನಥಿಂಗ್ ಕಂಪನಿಯ ಜಾಗತಿಕ ಕಾರ್ಯತಂತ್ರ ನಿರ್ದೇಶಕಿ ಟಮೀನಾ, ರೋಡ್ಸ್ ಗ್ರೂಪ್ ಸಿಇಒ ಮಾರ್ಕ್ ರಿಡ್ಜ್ವೇ ಮತ್ತು ಎಂಬಿಡಿಎ ಕಂಪನಿಯ ಭಾರತೀಯ ಪ್ರಾದೇಶಿಕ ವ್ಯವಹಾರಗಳ ಮುಖ್ಯಸ್ಥ ಟಾಮ್ ಫೆಲ್ ಪಾಲ್ಗೊಂಡಿದ್ದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಮತ್ತಿತರರು ನಿಯೋಗದಲ್ಲಿ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X