Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಪರಾಧಿಗಳಿಗೆ ಮಾಲೆ ಹಾಕಿ...

ಅಪರಾಧಿಗಳಿಗೆ ಮಾಲೆ ಹಾಕಿ ಸಂಭ್ರಮಿಸಿರುವುದು ಮಾನವೀಯ ಮೌಲ್ಯಗಳ ಸಾವಿನ ಪ್ರತೀಕ : ಪ್ರೊ.ರಾಮೇಶ್ವರಿ ವರ್ಮಾ

ವಾರ್ತಾಭಾರತಿವಾರ್ತಾಭಾರತಿ7 Jan 2026 11:32 PM IST
share
ಅಪರಾಧಿಗಳಿಗೆ ಮಾಲೆ ಹಾಕಿ ಸಂಭ್ರಮಿಸಿರುವುದು ಮಾನವೀಯ ಮೌಲ್ಯಗಳ ಸಾವಿನ ಪ್ರತೀಕ : ಪ್ರೊ.ರಾಮೇಶ್ವರಿ ವರ್ಮಾ

ಬೆಂಗಳೂರು : ದೇಶದಲ್ಲಿ ಉನ್ನವೋ ಮತ್ತು ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಮಾಲೆ ಹಾಕಿ, ಲಡ್ಡು ಹಂಚಿ ಸಂಭ್ರಮಿಸಿದ ಘಟನೆಗಳು ನಡೆದಿದ್ದು, ಇದು ಮಾನವೀಯ ಮೌಲ್ಯಗಳ ಸಾವಿನ ಪ್ರತೀಕವಾಗಿವೆ ಎಂದು ರಂಗಕರ್ಮಿ ಪ್ರೊ.ರಾಮೇಶ್ವರಿ ವರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.

ಬುಧವಾರ ಇಲ್ಲಿನ ಗಾಂಧಿ ಭವನದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ಆಯೋಜಿಸಿದ್ದ ‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಹೂಡಲು-ಮಹಿಳೆಯರ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದಿದರೂ, ಮಹಿಳೆಯರ ಮೇಲೆ ಹಿಂಸೆ, ಅಗೌರವಗಳು ಹೆಚ್ಚುತ್ತಲೇ ಇವೆ. ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾಗೇಡು ಹತ್ಯೆ, ಹಾಸನದ ಪೆನ್‍ಡ್ರೈವ್ ಪ್ರಕರಣ, ಉನ್ನವೋ ಮತ್ತು ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಬಂಡವಾಳಶಾಹಿಗಳ ಲಾಭದಾಹ, ಯುದ್ಧೊಪಕರಣಗಳ ಮಾರಾಟದ ಹುನ್ನಾರ ಯುದ್ಧಗಳನ್ನು ಹುಟ್ಟುಹಾಕುತ್ತಿವೆ. ಯುದ್ಧಗಳಲ್ಲೂ ಮಹಿಳೆಯರು ಮತ್ತು ಮಕ್ಕಳು ಮೊದಲ ಬಲಿಪಶುಗಳಾಗುತ್ತಿದ್ದಾರೆ. ಇನ್ನೊಂದೆಡೆ ಮಾಧ್ಯಮಗಳು ಕ್ರೌರ್ಯ-ಹಿಂಸೆ ಅನಾಚಾರಗಳನ್ನು ವೈಭವಿಕರಿಸುತ್ತಿವೆ. ಅದರ ಪರಿಣಾಮ ಹಾಡಹಗಲೇ ಹೆಣ್ಣುಮಕ್ಕಳು ಬಲಿಯಾಗುತ್ತಿದ್ದಾರೆ. ಇವೆಲ್ಲವನ್ನು ತಡೆಗಟ್ಟಲು ಪ್ರಜ್ಞಾವಂತ ಜನಗಳು ಪ್ರತಿಭಟಿಸಬೇಕಿದೆ ಎಂದು ಅವರು ಕರೆ ನೀಡಿದರು.

ಎಸ್‍ಯುಸಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಉಮಾ ಮಾತನಾಡಿ, ನವೋದಯ ಚಳುವಳಿಯಲ್ಲಿ ಮಹಿಳಾ ವಿಮೋಚನೆಯ ಘೋಷಣೆ ಕೇಳಿಬಂದವು. ವಿದ್ಯಾಸಾಗರ, ಸಾವಿತ್ರಿ ಬಾಯಿ ಫುಲೆ, ನೇತಾಜಿ, ಶರತ್‍ಚಂದ್ರ, ಕುದ್ಮಲ್ ರಂಗರಾವ್ ಮೊದಲಾದವರು ಮಹಿಳೆಯರ ಪರವಾಗಿ, ತುಳಿತಕ್ಕೊಳಗಾದವರಪರ ಧ್ವನಿಯೆತ್ತಿದರು. ಆದರೆ ಆ ಘೋಷಣೆಗಳು ಇಂದು ಸಂಪೂರ್ಣ ಕಣ್ಮರೆಯಾಗಿವೆ ಎಂದರು.

ಬಂಡವಾಳಶಾಹಿಗಳ ಆರ್ಥಿಕ ಲಾಭದ ಮನಸ್ಥಿತಿ ಹೆಣ್ಣುಮಕ್ಕಳನ್ನು ಒಂದು ಸರಕನ್ನಾಗಿ ಮಾಡಿದೆ. ಉನ್ನತ ನೀತಿ-ಸಂಸ್ಕೃತಿ, ಮೌಲ್ಯಗಳು ನಾಶವಾಗುತ್ತಿವೆ. ಮೂಲತಃ ನಮ್ಮದು ಮಾತೃಪ್ರಧಾನ ಸಮಾಜವಾಗಿತ್ತು, ಖಾಸಗಿ ಆಸ್ತಿಯ ಉಗಮ ಅವಳ ಶೋಷಣೆಗೆ ಅಡಿಪಾಯ ಹಾಕಿತು. ಸಮ ಸಮಾಜವನ್ನು ಕಟ್ಟಲು ಮಹಿಳೆಯರು ಸೈದ್ಧಾಂತಿಕವಾಗಿ, ಸಂಘಟನಾತ್ಮಕವಾಗಿ ಗಟ್ಟಿಯಾಗಬೇಕು, ಬಲಿಷ್ಠ ಮಹಿಳಾ ಚಳುವಳಿಗಳನ್ನು ಕಟ್ಟಬೇಕು. ಶೋಷಿತ ದುಡಿಯುವ ವರ್ಗದ ಜೊತೆಗೆ ಕೈಜೋಡಿಸಿ ಮಹಿಳೆಯರು ತಮ್ಮ ನೈಜ ವಿಮುಕ್ತಿಯನ್ನು ಸಾಧಿಸಬೇಕು ಎಂದು ಅವರು ಕರೆ ನೀಡಿದರು.

ಸಮಾವೇಶದಲ್ಲಿ ವೈದ್ಯೆ ಡಾ. ಶ್ರೀದೇವಿ ಕುಮಾರ್, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ರಾಷ್ಟ್ರ ಉಪಾಧ್ಯಕ್ಷೆ ಡಾ. ಸುಧಾಕಾಮತ್, ಅಕ್ಕ ಮಹಾದೇವಿ ವಿವಿ ಮಾಜಿ ಉಪಕುಲಪತಿಪ್ರೊ.ಸಬಿಹಾ ಭೂಮಿಗೌಡ, ಚಲನಚಿತ್ರಗೀತಕಾರ ಕವಿರಾಜ್, ಸಂಘಟನೆಯ ರಾಜ್ಯಾಧ್ಯಕ್ಷೆ ಎಂ.ಎನ್. ಮಂಜುಳಾ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X