Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಾವು, ಇತರೆ ಹಣ್ಣುಗಳ ಆನ್‍ಲೈನ್...

ಮಾವು, ಇತರೆ ಹಣ್ಣುಗಳ ಆನ್‍ಲೈನ್ ಮಾರಾಟಕ್ಕೆ ‘ರೈತರ ಅಂಚೆ ಸೇವೆ’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ30 May 2026 6:17 PM IST
share
ಮಾವು, ಇತರೆ ಹಣ್ಣುಗಳ ಆನ್‍ಲೈನ್ ಮಾರಾಟಕ್ಕೆ ‘ರೈತರ ಅಂಚೆ ಸೇವೆ’ಗೆ ಚಾಲನೆ

ಬೆಂಗಳೂರು : ಹಾಪ್‍ಕಾಮ್ಸ್ ವತಿಯಿಂದ ಅಂಚೆ ಇಲಾಖೆ ಸಹಯೋಗದಲ್ಲಿ ಮಾವು ಹಾಗೂ ಇತರ ವಿಶೇಷ ಹಣ್ಣುಗಳನ್ನು ಅಂಚೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ‘ರೈತರ ಅಂಚೆ’ ಎಂಬ ವಿನೂತನ ಆನ್‍ಲೈನ್ ವ್ಯಾಪಾರ ಸೇವೆಗೆ ಶನಿವಾರ ನಗರದ ಅಂಚೆ ಇಲಾಖೆ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಹಾಪ್‍ಕಾಮ್ಸ್ ಅಧ್ಯಕ್ಷ ಎ.ಎಸ್.ಚಂದ್ರೇಗೌಡ, ‘ಹಾಪ್‍ಕಾಮ್ಸ್‌ ಗೆ ಸುಧೀರ್ಘ ಇತಿಹಾಸವಿದೆ. ರೈತರಿಂದ ಹಣ್ಣು ಮತ್ತು ತರಕಾರಿಗಳನ್ನು ಪಡೆದು ನೇರವಾಗಿ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡುವಲ್ಲಿ ಹಾಪ್‍ಕಾಮ್ಸ್ ಪ್ರಮುಖವಾಗಿದೆ. ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಎಲ್ಲ ಧಿಕ್ಕುಗಳಲ್ಲಿ ಹಾಪ್‍ಕಾಮ್ಸ್ ಮಳಿಗೆ ತೆರೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅಂಚೆ ಮೂಲಕ ಗ್ರಾಹಕರಿಗೆ ಸೇವೆ ಒದಗಿಸುವ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಹಾಪ್‍ಕಾಮ್ಸ್ ವತಿಯಿಂದ ವಸತಿ ಸಮುಚ್ಛಯಗಳಿಗೆ ಹೋಗಿ ಈಗಾಗಲೇ 1 ಕೋಟಿ ರೂಪಾಯಿ ಮಾವಿನ ಹಣ್ಣುಗಳನ್ನು ಮಾರಾಟ ಮಾಡಿದ್ದೇವೆ. ಅದೇ ರೀತಿ ಅಂಚೆ ಇಲಾಖೆಯ ಸಹಾಯದಿಂದ 1 ಕೋಟಿ ರೂ. ಅಥವಾ ಕನಿಷ್ಠ 50ಲಕ್ಷ ರೂ. ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಮುಖ್ಯ ವಲಯದ ಕ್ಷೇತ್ರ ಅಂಚೆ ಸೇವೆಗಳ ನಿರ್ದೇಶಕಿ ತಾರಾ.ವಿ, ಹಾಪ್‍ಕಾಮ್ಸ್ ಉಪಾಧ್ಯಕ್ಷ ನಾರಾಯಣಗೌಡ, ವ್ಯವಸ್ಥಾಪಕ ನಿರ್ದೇಶಕ ಮಿರ್ಜಿ ಉಮೇಶ ಶಂಕರ ಮತ್ತಿತರರು ಉಪಸ್ಥಿತರಿದ್ದರು.

ಮಾವು ಗ್ರಾಹಕರಿಗೆ ತಲುಪುವುದು ಹೇಗೆ?: ಅಂಚೆ ಇಲಾಖೆಯು ಮಾವು ಬೆಳೆಗಾರರೊಂದಿಗೆ ಬುಕ್‍ನೌ, ಪೇ ಲೇಟರ್ ಒಪ್ಪಂದದಡಿ ಪಾರ್ಸಲ್ ಸೇವೆಯನ್ನು ಒದಗಿಸುತ್ತಿದೆ. ಇದರಿಂದ ರೈತರಿಗೆ ಸೂಕ್ತ ಬೆಲೆ, ಗ್ರಾಹಕರಿಗೆ ಗುಣಮಟ್ಟದ ಹಣ್ಣುಗಳು ದೊರೆಯಲು ಅನುಕೂಲವಾಗಲಿದೆ. ರೈತರು ಆರ್ಡರ್ ಮಾಡಿದ ಗ್ರಾಹಕರ ಮಾವಿನ ಹಣ್ಣುಗಳ ಪಾರ್ಸಲ್‍ಗಳನ್ನು ಜಿಪಿಒಗೆ ಸಂಜೆ ವೇಳೆಗೆ ಕಲ್ಪಿಸುತ್ತಾರೆ. ನಂತರ ಅವುಗಳಿಗೆ ಬಾರ್ ಕೋಡ್ ಸ್ಟಿಕರ್ ಅಂಟಿಸಿ ಸ್ಪೀಡ್ ಪಾರ್ಸಲ್ ರೂಪದಲ್ಲಿ ಬುಕ್ಕಿಂಗ್ ಮಾಡಲಾಗುತ್ತದೆ. ಬುಕ್ ಆದ ನಂತರ ಅಂಚೆ ಕಚೇರಿಗಳಿಗೆ ಪಾರ್ಸಲ್ ರವಾನಿಸಲಾಗುತ್ತದೆ. ಮರು ದಿನ ಗ್ರಾಹಕರಿಗೆ ವಿತರಣೆ ಮಾಡಲಾಗುತ್ತದೆ ಎಂದು ಅಂಚೆ ಇಲಾಖೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X