Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯಪಾಲರ ಸಂಚಾರದ ವೇಳೆ ಝೀರೊ...

ರಾಜ್ಯಪಾಲರ ಸಂಚಾರದ ವೇಳೆ ಝೀರೊ ಟ್ರಾಫಿಕ್; ಕಾರಿನಲ್ಲೇ ಸಿಲುಕಿದ ಗರ್ಭಿಣಿ, ರಸ್ತೆಯಲ್ಲೇ ಪ್ರತಿಭಟನೆಗಿಳಿದ ಪತಿ : ತನಿಖೆಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ2 Jun 2026 12:16 AM IST
share
ರಾಜ್ಯಪಾಲರ ಸಂಚಾರದ ವೇಳೆ ಝೀರೊ ಟ್ರಾಫಿಕ್; ಕಾರಿನಲ್ಲೇ ಸಿಲುಕಿದ ಗರ್ಭಿಣಿ, ರಸ್ತೆಯಲ್ಲೇ ಪ್ರತಿಭಟನೆಗಿಳಿದ ಪತಿ : ತನಿಖೆಗೆ ಆದೇಶ

ಬೆಂಗಳೂರು : ರಾಜ್ಯಪಾಲರ ಸಂಚಾರದ ಹಿನ್ನೆಲೆಯಲ್ಲಿ ಝೀರೋ ಟ್ರಾಫಿಕ್‌ನಿಂದಾಗಿ ಗರ್ಭಿಣಿ ಪತ್ನಿ ರಸ್ತೆ ಮಧ್ಯೆ ಕಾರಿನಲ್ಲೇ ಸಿಲುಕಿಕೊಂಡಿದ್ದಾಳೆ ಎಂದು ಆರೋಪಿಸಿ ಪತಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ, ಈ ವಿಚಾರವಾಗಿ ತನಿಖೆಗೆ ಆದೇಶಿಸಲಾಗಿದೆ.

ಬೆಂಗಳೂರು ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಮೇ31ರ ರವಿವಾರ ಈ ಘಟನೆ ನಡೆದಿದೆ. ಗರ್ಭಿಣಿಯ ಪತಿ ಪ್ರತಿಭಟನೆ ನಡೆಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಟೀಕೆಗೊಳಗಾದ ಬೆನ್ನಲ್ಲೇ, ಈ ಘಟನೆ ಕುರಿತು ಜೂ.1ರಂದು ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಮೇ 31ರಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತೆರಳುತ್ತಿದ್ದ ವೇಳೆ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ವ್ಯಾಪಕ ಸಂಚಾರ ದಟ್ಟಣೆ ಸೃಷ್ಟಿಯಾಗಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಅಂಡರ್‌ಪಾಸ್ ಕಾಮಗಾರಿಯಿಂದಾಗಿ ಮೊದಲೇ ಕಿರಿದಾಗಿದ್ದ ರಸ್ತೆಯಲ್ಲಿ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ಏಕಾಏಕಿ ರಸ್ತೆ ನಿರ್ಬಂಧಿಸಿದ್ದರಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಸ್ಥಗಿತವಾಗಿತ್ತು. ಈ ಸಂಚಾರ ದಟ್ಟಣೆಯ ನಡುವೆ ಗರ್ಭಿಣಿ ಪತ್ನಿಯನ್ನು ತುರ್ತಾಗಿ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಸಿಲುಕಿಕೊಂಡಿದ್ದು, ಗರ್ಭಿಣಿಯನ್ನು ಆಸ್ಪತ್ರೆಗೆ ತಲುಪಿಸಲಾಗದೆ ಆ ವ್ಯಕ್ತಿ ನಡುರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದರು.

ಸಾರ್ವಜನಿಕರಿಗೆ ಮಹತ್ವ ಯಾವಾಗ ಸಿಗಲಿದೆ?

ಘಟನೆಯ ಸಂಬಂಧ ಎಕ್ಸ್ ಖಾತೆಯಲ್ಲಿ ವೀಡಿಯೊ ಹಂಚಿಕೊಂಡ ಬಳಕೆದಾರರು ತಮ್ಮ ಪೋಸ್ಟ್‌ನಲ್ಲಿ, ‘ಅಂಡರ್‌ಪಾಸ್ ಕಾಮಗಾರಿಯಿಂದ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿ ಈಗಾಗಲೇ ತೀವ್ರ ದಟ್ಟಣೆಯಿದೆ. ರಾಜ್ಯಪಾಲರ ವಾಹನ ದಳದ ಸಂಚಾರಕ್ಕಾಗಿ ಸುಮಾರು 30 ನಿಮಿಷಗಳ ಕಾಲ ಸಂಪೂರ್ಣ ಟ್ರಾಫಿಕ್ ಸ್ಥಗಿತಗೊಳಿಸಲಾಯಿತು. ಗರ್ಭಿಣಿ ಪತ್ನಿಯನ್ನು ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಈ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದರು. ಸಾರ್ವಜನಿಕರ ಅನುಕೂಲಕ್ಕೂ ವಿಐಪಿಗಳ ಅನುಕೂಲದಷ್ಟೇ ಮಹತ್ವ ಯಾವಾಗ ಸಿಗಲಿದೆ? ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X