Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ;...

ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ; ಯತ್ನಾಳ್ ವಿರುದ್ಧದ ಪ್ರಕರಣದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 Jun 2026 11:51 PM IST
share
ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ; ಯತ್ನಾಳ್ ವಿರುದ್ಧದ ಪ್ರಕರಣದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ ಅವರ ಘನತೆಗೆ ಚ್ಯುತಿ ಉಂಟು ಮಾಡುವಂಥ ಮಾತುಗಳನ್ನಾಡಿದ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಜುಲೈ 17ರ ವರೆಗೆ ವಿಸ್ತರಿಸಿದೆ.

ರನ್ಯಾ ಅಬರ ಸಂಬಂಧಿ ಅಕುಲಾ ಅನುರಾಧಾ ಅವರು ನೀಡಿದ ದೂರು ಆಧರಿಸಿ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಕೋರಿ ಯತ್ನಾಳ್‌ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ನಡೆಸಿತು.

ದೂರುದಾರರ ಪರ ವಕೀಲ ವೈ.ಎಲ್‌. ಮಹೇಶ್‌ ವಾದ ಮಂಡಿಸಿ, ಉತ್ತರ ಕರ್ನಾಟಕ ಭಾಗದ ಆಡುಭಾಷೆಯಿಂದಾಗಿ ಆಕ್ಷೇಪಾರ್ಹ ಪದ ಬಂದಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಆದರೆ, ಆ ಪದಕ್ಕೆ ಬೇರೆ ಅರ್ಥವಿದ್ದರೆ ಅದನ್ನು ನಂಬಬಹುದಿತ್ತು. ಉತ್ತರ ಕರ್ನಾಟಕ ಭಾಷೆಯಲ್ಲಿಯೂ ಯತ್ನಾಳ್‌ ಬಳಸಿರುವ ಪದಕ್ಕೆ ಒಂದೇ ಅರ್ಥವಿದೆ ಎಂದರು.

ಇನ್ನು ಅರ್ಜಿದಾರರು ಹೇಳಿದ್ದ ಭಾಗಗಳಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಶೋಧನೆ ಮತ್ತು ಜಪ್ತಿ (ಸರ್ಚ್ ಅಂಡ್ ಸೀಷರ್) ಪ್ರಕ್ರಿಯೆಯ ಸಂದರ್ಭದಲ್ಲಿ ಚಿನ್ನ ಪತ್ತೆಯಾಗಿದೆ ಎಂದು ಅವರು ವಾದಿಸಿದ್ದರು. ಪ್ರಕರಣದ ಶೋಧ ಮತ್ತು ಜಪ್ತಿಗೆ ಸಂಬಂಧಿಸಿದ ದಾಖಲೆಯನ್ನು ಮೆಮೊನೊಂದಿಗೆ ಸಲ್ಲಿಸುತ್ತಿದ್ದೇವೆ. ಶೋಧನೆ ವೇಳೆ ಚಿನ್ನ ಎಲ್ಲಿ ಪತ್ತೆಯಾಯಿತು ಎಂಬುದನ್ನು ನ್ಯಾಯಾಲಯವೇ ಗಮನಿಸಬಹುದು ಎಂದು ತಿಳಿಸಿದರು.

ಅರ್ಜಿದಾರರು ಒರ್ವ ಹಾಲಿ ಶಾಸಕರು. ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಸಂದರ್ಭದಲ್ಲಿ ಅವರು ಆ ಶಬ್ದವನ್ನು ಎರಡು ಬಾರಿ ಬಳಸಿದ್ದಾರೆ. ಹಗರಣದಲ್ಲಿ ಭಾಗಿಯಾಗಿದ್ದ ಇಬ್ಬರು ಸಚಿವರ ಹೆಸರುಗಳನ್ನು ಬಹಿರಂಗಪಡಿಸುವ ಉದ್ದೇಶದಿಂದ ಆ ರೀತಿ ಹೇಳಿದ್ದಾಗಿ ಅವರು ಹೇಳುತ್ತಾರೆ. ಆದರೆ, ಈವರೆಗೂ ಆ ಇಬ್ಬರು ಸಚಿವರ ಹೆಸರುಗಳು ಹೊರ ಬಂದಿಲ್ಲ. ಕೇವಲ ವೈಯಕ್ತಿಕ ರಾಜಕೀಯ ದ್ವೇಷವನ್ನು ತೀರಿಸಿಕೊಳ್ಳಲು ಯಾರೋ ಬೇರೆಯವರನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ ವಾದ ಮಂಡಿಸಿ, ಎಲ್ಲ ಮಹಿಳೆಯರನ್ನು ಕುರಿತು ಯತ್ನಾಳ್‌ ಹೇಳಿಕೆ ನೀಡಿಲ್ಲ. ಯತ್ನಾಳ್‌ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ ದಿನ ರನ್ಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಅವರ ಹೇಳಿಕೆಯನ್ನು ಆಕೆ ನೋಡುವುದು ಅಥವಾ ಕೇಳಿರುವ ಸಾಧ್ಯತೆ ಇಲ್ಲ. ಈ ವಿಚಾರ ರನ್ಯಾ ಅವರಿಗೆ ತಿಳಿದಿತ್ತು ಎಂಬ ಬಗ್ಗೆ ದೂರಿನಲ್ಲಿ ಯಾವ ಉಲ್ಲೇಖವೂ ಇಲ್ಲ. ಅರ್ಜಿದಾರರು ಹೇಳಿಕೆ ನೀಡಿದ ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ವಿವರಿಸಿದರು.

ಆಗ ನ್ಯಾಯಮೂರ್ತಿಗಳು, ಅರ್ಜಿದಾರರು ನೀಡಿರುವ ಹೇಳಿಕೆ ಎಲ್ಲ ಕಡೆ ಇದೆ. ಜೈಲಿನಲ್ಲಿ ಪತ್ರಿಕೆ ಹೋಗುವುದಿಲ್ಲವೇ? ಅರ್ಜಿದಾರರು ಕ್ಷಮೆಯನ್ನಾದರೂ ಕೇಳಬೇಕಿತ್ತು. ಇದು ಸರಿಯಲ್ಲ. ಈಗ ಕ್ಷಮೆಯಾಚಿಸಿದರೂ ಸಹ ಹೇಳಿರುವುದನ್ನು ಸಂಪೂರ್ಣವಾಗಿ ಅಳಿಸಿಹಾಕಲು ಸಾಧ್ಯವಿಲ್ಲ. ಸಿ.ಟಿ. ರವಿ (ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸದನದಲ್ಲಿ ಆಕ್ಷೇಪಾರ್ಹ ಪದ ಬಳಕೆ) ಪ್ರಕರಣದಲ್ಲಿ ಕ್ಷಮೆ ಕೋರಿ ಪ್ರಮಾಣಪತ್ರ ಸಲ್ಲಿಸಿದ್ದರೂ ಅದನ್ನು ನಾನು ಒಪ್ಪಿರಲಿಲ್ಲ ಎಂದರು.

ಅಂತಿಮವಾಗಿ, ಅರ್ಜಿಯನ್ನು ಜುಲೈ 17ಕ್ಕೆ ಮುಂದೂಡಿದ ನ್ಯಾಯಪೀಠ, ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು. ಇದೇ ವೇಳೆ, ಮುಂದಿನ ವಿಚಾರಣೆ ವೇಳೆಗೆ ನಿಮಗೇನಾದರೂ ಜ್ಞಾನೋದಯವಾದರೆ ಏನಾದರೂ ಮಾಡಿ. ಇಲ್ಲದಿದ್ದರೆ, ನ್ಯಾಯಾಲಯವೇ ಆದೇಶ ಹೊರಡಿಸಲಿದೆ ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X