Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅವಧಿ ವಿಸ್ತರಣೆ ಹಿಂಪಡೆಯಲು ಆಗ್ರಹ:...

ಅವಧಿ ವಿಸ್ತರಣೆ ಹಿಂಪಡೆಯಲು ಆಗ್ರಹ: ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ

ವಾರ್ತಾಭಾರತಿವಾರ್ತಾಭಾರತಿ26 Jun 2026 9:33 PM IST
share
ಅವಧಿ ವಿಸ್ತರಣೆ ಹಿಂಪಡೆಯಲು ಆಗ್ರಹ: ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ

ಬೆಂಗಳೂರು/ದೇವನಹಳ್ಳಿ : ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತರ ಐತಿಹಾಸಿಕ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದ್ದರೂ, ರಾಜ್ಯ ಸರಕಾರ ಭೂಮಿ ನೀಡುವ ಅವಧಿಯನ್ನು ವಿಸ್ತರಿಸಿ, ಪರಿಹಾರದ ಹಣವನ್ನು ಹೆಚ್ಚು ಮಾಡುವ ಮೂಲಕ ರೈತರ ಸ್ವಾಭಿಮಾನವನ್ನು ಕಣ್ಮರೆಗೊಳಿಸಲು ಪ್ರಯತ್ನಿಸುತ್ತಿದೆ. ಕೂಡಲೇ ಸಚಿವ ಸಂಪುಟದ ಅವಧಿ ವಿಸ್ತರಣೆ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಎಚ್ಚರಿಸಿದೆ.

ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿದ ಪದಾಧಿಕಾರಿ ಕಾರಳ್ಳಿ ಶ್ರೀನಿವಾಸ್, ನಾಲ್ಕು ವರ್ಷಗಳ ಸುದೀರ್ಘ ಹೋರಾಟ ಮತ್ತು ರಾಜ್ಯದ ಎಲ್ಲ ರೈತಪರ ಸಂಘಟನೆಗಳ ಬೆಂಬಲದ ಫಲವಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸರಕಾರ ಭೂಸ್ವಾಧೀನದಿಂದ ಕೈಬಿಟ್ಟಿತ್ತು. ಆದರೆ ಇಂದಿಗೂ ಭೂಮಿ ನೀಡುವ ಅವಧಿ ವಿಸ್ತರಿಸುತ್ತಿರುವುದು ಖಂಡನೀಯ ಎಂದರು.

ಪದೇಪದೇ ಯಾವುದಾದರೊಂದು ರೂಪದಲ್ಲಿ ರೈತರ ಮೇಲೆ ಒತ್ತಡ ಹೇರುತ್ತಲೇ ಬಂದಿರುವ ಸರಕಾರ, ಸಂಪೂರ್ಣವಾಗಿ ಭೂಸ್ವಾಧೀನ ಕೈಬಿಡಲಾಗುವುದು ಎಂದು ಹೇಳುತ್ತಲೇ ‘ಸ್ವಇಚ್ಛೆಯಿಂದ ಭೂಮಿ ನೀಡುವವರಿಗೆ ಅವಕಾಶವಿದೆ’ ಎಂಬ ಕೊಕ್ಕೆ ಇಟ್ಟು ಆದೇಶ ಹೊರಡಿಸಿತ್ತು. ಇದರೊಂದಿಗೆ ಅಷ್ಟು ಭೂಮಿಯನ್ನು ‘ಶಾಶ್ವತ ವಿಶೇಷ ಕೃಷಿ ವಲಯ’ ಎಂದು ಘೋಷಿಸುವ ಮೂಲಕ ಕೃಷಿ ಹೊರತಾಗಿ ಬೇರೆ ಉದ್ದೇಶಕ್ಕೆ ಬಳಸದಂತೆ ರೈತರ ಭೂಮಿಯ ಹಕ್ಕುಗಳನ್ನು ಮೊಟಕುಗೊಳಿಸಿ ಆತಂಕ ಸೃಷ್ಟಿಸಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸರಕಾರ ಸ್ವಇಚ್ಛೆಯಿಂದ ಭೂಮಿ ನೀಡುವರಿಗೆ ನೀಡಿದ್ದ ಗಡುವು ಮುಗಿದು ಎರಡು ತಿಂಗಳಾದರೂ, ಮತ್ತೆ ನಾಲ್ಕು ತಿಂಗಳು ಗಡುವು ವಿಸ್ತರಿಸಲಾಗಿದೆ. ಭೂಮಿ ಕೊಡಲು ಒಪ್ಪಿರುವ ರೈತರ ಭೂಮಿಗೆ ಹೆಚ್ಚಿನ ಪರಿಹಾರ ಹಣವನ್ನು ಶಿಫಾರಸು ಮಾಡುವ ಮೂಲಕ ಉಳಿದ ರೈತರಿಗೂ ಗಾಳ ಹಾಕಲು ಪ್ರಯತ್ನಿಸುತ್ತಿದೆ. ರೈತರ ಭೂಮಿಯನ್ನು ಬಲವಂತವಾಗಿ ಕಸಿಯಲು ಹಿಂಬಾಗಿಲಿನ ತಂತ್ರ ಅನುಸರಿಸುತ್ತಿದೆ. ಇಲ್ಲಿ ಯಾವ ಕುತಂತ್ರಗಳೂ ಫಲಿಸುವುದಿಲ್ಲ, ಸರಕಾರ ಕೂಡಲೇ ಅವಧಿ ವಿಸ್ತರಣೆ ತೀರ್ಮಾಣವನ್ನು ಹಿಂಪಡೆಯಬೇಕು ಎಂದು ಕಾರಳ್ಳಿ ಶ್ರೀನಿವಾಸ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ನಲ್ಲಪ್ಪನಹಳ್ಳಿ ನಂಜಪ್ಪ, ಸುಬ್ರಮಣಿಗೌಡ, ಗೋಪಿನಾಥ್, ಪ್ರಮೋದ್, ದೇವರಾಜು, ಮನೇಗೌಡ, ವೆಂಕಟರಮಣಪ್ಪ, ವೆಂಕಟೇಶ್, ಪಿಳ್ಳಣ್ಣ, ಮೋಹನ್, ಸುರೇಶ್, ನಂದೀಶ್, ನಂದನ್, ವೆಂಕಟೇಶ್ ಗೌಡ, ಮುಕುಂದ, ಮಂಜುನಾಥ್ ಸೇರಿದಂತೆ ಹವಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X