Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಮುಂದಿನ ಬಾರಿಗೆ ನಿಮ್ಮ-ನಮ್ಮ ಸರಕಾರ...

ʼಮುಂದಿನ ಬಾರಿಗೆ ನಿಮ್ಮ-ನಮ್ಮ ಸರಕಾರ ಒಟ್ಟಿಗೆ ಕೆಲಸ ಮಾಡಬೇಕು’ : ಸರಕಾರಿ ನೌಕರರ ಸಮಾರಂಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ12 July 2026 12:24 AM IST
share
ʼಮುಂದಿನ ಬಾರಿಗೆ ನಿಮ್ಮ-ನಮ್ಮ ಸರಕಾರ ಒಟ್ಟಿಗೆ ಕೆಲಸ ಮಾಡಬೇಕು’ : ಸರಕಾರಿ ನೌಕರರ ಸಮಾರಂಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು : ಮುಂದಿನ ಬಾರಿಗೆ ನಿಮ್ಮ ಮತ್ತು ನಮ್ಮ ಸರಕಾರ ಒಟ್ಟಿಗೆ ಕೆಲಸ ಮಾಡಬೇಕು ಎನ್ನುವ ಆಶಯ ಇದೆ. ಆದರೆ, ಇದಕ್ಕೆ ಯಾವುದೇ ಹೆಚ್ಚು ಕಡಿಮೆ ಆಗುವುದಿಲ್ಲ ತಾನೇ? ಎಂದು ಸರಕಾರಿ ನೌಕರರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದರು.

ಶನಿವಾರ ನಗರದ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ವತಿಯಿಂದ ಹಮ್ಮಿಕೊಂಡಿದ್ದ ನಮ್ಮ ಸ್ವಾಭಿಮಾನದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ನಾನು ಸದಾ ಸರಕಾರಿ ನೌಕರರೊಂದಿಗೆ ಇರುತ್ತೇವೆ. ಮುಂದಿನ ಬಾರಿಯೂ ನಿಮ್ಮ-ನಮ್ಮ ಸರಕಾರ ಒಟ್ಟಿಗೆ ಕೆಲಸ ಮಾಡಬೇಕು. ಆದರೆ, ಇದರಲ್ಲಿ ಯಾವುದೇ ಹೆಚ್ಚು ಕಡಿಮೆ ಆಗುವುದಿಲ್ಲ ಎಂದು ಒಪ್ಪಂದ ಪತ್ರಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾ ನಂದನಾಥ ಹಾಗೂ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳ ಸಮ್ಮುಖದಲ್ಲಿ ಸಹಿ ಹಾಕಿ, ಭದ್ರವಾಗಿ ಇಟ್ಟುಕೊಳ್ಳುತ್ತೇವೆ ಎಂದರು.

ಉಳಿ ಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆಯಾಗುವುದಿಲ್ಲ. ಉಳುಮೆ ಮಾಡದೇ ಯಾವ ಭೂಮಿಯೂ ಮಟ್ಟ ಆಗುವುದಿಲ್ಲ. ನಿಮ್ಮ ಬದುಕಿನ ಬಗ್ಗೆ ನಮಗೆ ಅರಿವಿದೆ. ಈ ನಿಟ್ಟಿನಲ್ಲಿ ನಾವು ನಿಮ್ಮ ಜೊತೆ ನಿಲ್ಲುತ್ತೇವೆ. ನಮ್ಮ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಸಚಿವ ಸಂಪುಟದೊಂದಿಗೆ ಚರ್ಚೆ ನಡೆಸಲಾಗುವುದು. ಓಪಿಎಸ್, ಎನ್‍ಪಿಎಸ್ ಬಗ್ಗೆ ನಮಗೆ ಗಮನವಿದೆ. ನೀವು ಆಡಳಿತ ಯಂತ್ರದ ರಥ. ನೀವು ಚೆನ್ನಾಗಿದ್ದರೆ ಇಡೀ ಆಡಳಿತ ಯಂತ್ರ ಚೆನ್ನಾಗಿ ನಡೆಯುತ್ತದೆ. ಕುಟುಂಬದ ರೀತಿಯಲ್ಲಿ ನಾವುಗಳು ಕೆಲಸ ಮಾಡಬೇಕು. ಮಾತು ಕೊಡುವುದೂ ಮುಖ್ಯವಲ್ಲ. ಮಾತು ಉಳಿಸಿಕೊಳ್ಳುವುದು ಮುಖ್ಯ ಎಂದು ಅವರು ತಿಳಿಸಿದರು.

ನಾನು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಹೊಸ ಇಲಾಖೆ ರಚನೆ ಮಾಡಿದ್ದೇನೆ. ನಮ್ಮ ರಾಜ್ಯದಲ್ಲಿ ಅನೇಕ ಹೋರಾಟಗಳು ನಡೆಯುತ್ತವೆ. ನೀವು ನಮ್ಮ ಬೇಡಿಕೆ ನಮ್ಮ ಮುಂದೆ ಇಟ್ಟಾಗ, ಇದನ್ನು ಕಾನೂನು ಚೌಕಟ್ಟಿನಲ್ಲಿ ಹೇಗೆ ಬಗೆಹರಿಸಬಹುದು, ಆರ್ಥಿಕ ಪರಿಸ್ಥಿತಿ ಏನು ಎಂದು ಪರಿಶೀಲನೆ ಮಾಡಲಾಗುವುದು. ಹೀಗೆ ಜನಸಾಮಾನ್ಯರ ನೋವು ಬಗೆಹರಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಸಚಿವಾಲಯ ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ ಎಂದ ಅವರು, ಜನರ ಸಮಸ್ಯೆ ಬಗೆಹರಿಸಲು ಮಾರ್ಗ ಹುಡುಕಬೇಕೇ ಹೊರತು, ಕೊಂಕು ಹುಡುಕಿ ಅವರನ್ನು ತಿರುಗಿಸಬಾರದು. ಕಾನೂನು ಚೌಕಟ್ಟಿನಲ್ಲಿ ಬಡ ಜನರಿಗೆ ಯಾವ ರೀತಿ ಸಹಾಯ ಮಾಡಬಹುದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಸೇವೆ ಮಾಡಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೀವುಗಳು ಆಧಾರಸ್ತಂಭ. ನೀವು ನಾವೆಲ್ಲ ಸೇರಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X