Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಾರ್ಡ್‍ಡಿಸ್ಕ್‌ ಪರಿಶೀಲಿಸಿ ಸಿಸಿ...

ಹಾರ್ಡ್‍ಡಿಸ್ಕ್‌ ಪರಿಶೀಲಿಸಿ ಸಿಸಿ ಕ್ಯಾಮೆರಾ ದೃಶ್ಯ ನೀಡಿ: ಮಾಹಿತಿ ಆಯೋಗದಿಂದ ಅಪರೂಪದ ಆದೇಶ

ವಾರ್ತಾಭಾರತಿವಾರ್ತಾಭಾರತಿ13 July 2026 10:35 PM IST
share
ಹಾರ್ಡ್‍ಡಿಸ್ಕ್‌ ಪರಿಶೀಲಿಸಿ ಸಿಸಿ ಕ್ಯಾಮೆರಾ ದೃಶ್ಯ ನೀಡಿ: ಮಾಹಿತಿ ಆಯೋಗದಿಂದ ಅಪರೂಪದ ಆದೇಶ
ಮಳವಳ್ಳಿ ಪೊಲೀಸ್ ಠಾಣೆಯ ಪ್ರಕರಣ; ಎಫ್ಎಸ್ಎಲ್‌ಗೆ ರವಾನಿಸಿ ಪರಿಶೀಲನೆ

ಬೆಂಗಳೂರು : ಪೊಲೀಸ್ ಠಾಣೆಯಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಾವಳಿಗಳನ್ನು ಹಾರ್ಡ್ ಡಿಸ್ಕ್ ಪರಿಶೀಲನೆಗೆ ಒಳಪಡಿಸಿ, ಅಗತ್ಯ ಮಾಹಿತಿಯನ್ನು ಮೇಲ್ಮನವಿದಾರರಿಗೆ ಕೊಡುವಂತೆ ರಾಜ್ಯ ಮಾಹಿತಿ ಆಯೋಗ ಅಪರೂಪದ ಆದೇಶ ನೀಡಿದೆ.

ನಿಯಮ ಉಲ್ಲಂಘಿಸಿದ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮಕ್ಕೂ ಆಯೋಗ ಶಿಫಾರಸು ಮಾಡಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಎಂ.ಆರ್.ನಾಗರಾಜು ಎಂಬವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮಾಹಿತಿ ಆಯೋಗದ 4ನೇ ಪೀಠದ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು, ಎರಡು ಪೊಲೀಸ್ ಠಾಣೆಗಳ ಸಿಸಿ ಕ್ಯಾಮೆರಾಗಳ ಹಾರ್ಡ್ ಡಿಸ್ಕನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ತನಿಖೆಗೆ ಒಳಪಡಿಸಲು ಆದೇಶಿಸಿದ್ದರು.

ಅದರಂತೆ ಮಳವಳ್ಳಿಯ ಹಾಲಿ ಡಿವೈಎಸ್ಪಿ ಯಶವಂತಕುಮಾರ್ ಅವರು ಬೆಂಗಳೂರಿನ ಮಡಿವಾಳದ ಎಫ್‍ಎಸ್‍ಎಲ್‍ಗೆ ಹಾರ್ಡ್ ಡಿಸ್ಕ್ ಸಲ್ಲಿಸಿ, ಅದರಲ್ಲಿ ಲಭ್ಯವಿದ್ದ ದೃಶ್ಯಾವಳಿಗಳನ್ನು ಸಿಡಿಗೆ ವರ್ಗಾವಣೆ ಮಾಡಿಸಿ, ವೈಜ್ಞಾನಿಕ ವರದಿಯೊಂದಿಗೆ ಅರ್ಜಿದಾರರಿಗೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಅಲ್ಲದೇ, ಈ ರೀತಿಯಲ್ಲಿ ಮಾಹಿತಿ ಒದಗಿಸುವ ಸಂದರ್ಭದಲ್ಲಿ ಠಾಣೆಗೆ ಭೇಟಿ ನೀಡಿದ ಸಂದರ್ಭ ಮತ್ತು ಅವರನ್ನು ವಿಚಾರಣೆಗೊಳಪಡಿಸಿದ ದೃಶ್ಯಾವಳಿ ಮಾತ್ರ ನೀಡಬೇಕು. ಕ್ಯಾಮೆರಾದಲ್ಲಿ ದಾಖಲಾಗಿರುವ ಇತರೆ ಮಾಹಿತಿಯನ್ನು ಮುಸುಕು ಮಾಡಬೇಕು ಎಂದು ತಿಳಿಸಿದ್ದಾರೆ.

ಅಲ್ಲದೇ, ಅಂದಿನ ಡಿವೈಎಸ್ಪಿ ಹಾಗೂ ಪ್ರಸ್ತುತ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ನವೀನ್ ಕುಮಾರ್ ಅವರು ಮಾಹಿತಿ ಹಕ್ಕು ಅರ್ಜಿಯನ್ನು ನಿಯಮಬದ್ಧವಾಗಿ ವರ್ಗಾವಣೆ ಮಾಡದೆ, ನಿರ್ಲಕ್ಷ್ಯ ವಹಿಸಿರುವುದು ಮಂಡ್ಯ ಎಎಸ್ಪಿ ಗಂಗಾಧರಸ್ವಾಮಿ ಅವರ ತನಿಖಾ ವರದಿಯಿಂದ ಸಾಬೀತಾಗಿದೆ.

ಈ ಹಿನ್ನೆಲೆಯಲ್ಲಿ ನವೀನ್ ಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಆಯೋಗ ಸೂಚಿಸಿದ್ದು, ನೋಟಿಸ್ ಜಾರಿಯಾಗಿದೆ. ಅರ್ಜಿಗಳನ್ನು ನಿರ್ಲಕ್ಷ್ಯ ಮಾಡದಂತೆ ಇನ್‍ಸ್ಪೆಕ್ಟರ್‍ಗಳಿಗೂ ಸೂಕ್ತ ಎಚ್ಚರಿಕೆ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ: ಮಂಡ್ಯ ಜಿಲ್ಲೆಯ ಮಳವಳ್ಳಿಯ ಎಂ.ಆರ್.ನಾಗರಾಜು ಎಂಬವರು ಅಲ್ಲಿನ ಡಿವೈಎಸ್ಪಿ ಅವರಿಗೆ 2022ರ ಆಗಸ್ಟ್ 4ರಂದು ಅರ್ಜಿ ಸಲ್ಲಿಸಿ ದಿನಾಂಕ: 10-10-2021ರಿಂದ 31-03-2022ರವರೆಗಿನ ಮಳವಳ್ಳಿಪುರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಕೋರಿದ್ದರು.

ಅರ್ಜಿಯನ್ನು ಪರಿಶೀಲಿಸಿದ್ದ ಠಾಣೆಯ ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆ 8(1)(ಜೆ) ಅಡಿಯಲ್ಲಿ ಮಾಹಿತಿ ನೀಡಲು ನಿರಾಕರಿಸಿದ್ದರು. ಸಿಸಿ ಕ್ಯಾಮೆರಾ ದೃಶ್ಯಗಳು ಕೇವಲ ಆರು ತಿಂಗಳು ಮಾತ್ರ ಇರುತ್ತದೆ ಎಂಬುದುಪೊಲೀಸರ ವಾದವಾಗಿತ್ತು.

ಈ ಅರ್ಜಿಯನ್ನು ಸಂಬಂಧಪಟ್ಟ ಸಾರ್ವಜನಿಕ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಅದಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಗಮನಕ್ಕೂ ತರಬೇಕಾಗಿತ್ತು. ಆದರೆ, ಅಂದಿನ ಡಿವೈಎಸ್ಪಿ ಕೆಲವು ದೋಷಗಳನ್ನು ಮಾಡಿದ್ದರು. ಜತೆಗೆ, ಅಂದಿನ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಥಮ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸುವುದಕ್ಕೆ ಮುಂದಾಗಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X