Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಮಮಂದಿರ ದೇಣಿಗೆ ಕಳವು ಪ್ರಕರಣ: ರಾಜ್ಯದ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ರಾಜ್ಯದ ದೇವಸ್ಥಾನಗಳಲ್ಲೂ ಕಟ್ಟೆಚ್ಚರ, ಮಾರ್ಗಸೂಚಿ ಪ್ರಕಟಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ14 July 2026 12:05 AM IST
share
ರಾಮಮಂದಿರ ದೇಣಿಗೆ ಕಳವು ಪ್ರಕರಣ: ರಾಜ್ಯದ ದೇವಸ್ಥಾನಗಳಲ್ಲೂ ಕಟ್ಟೆಚ್ಚರ, ಮಾರ್ಗಸೂಚಿ ಪ್ರಕಟಿಸಿದ ಸರಕಾರ

ಬೆಂಗಳೂರು : ಉತ್ತರಪ್ರದೇಶದ ಅಯೋಧ್ಯೆಯ ಶ್ರೀರಾಮ ದೇವಸ್ಥಾನದಲ್ಲಿ ಹುಂಡಿಯಲ್ಲಿನ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ರಾಜ್ಯದ ದೇವಾಲಯಗಳ ಹುಂಡಿ, ದೇಣಿಗೆ ಪೆಟ್ಟಿಗೆಗಳು, ನಗದು ಚಿನ್ನಾಭರಣ ಹಾಗೂ ಇತರ ವಸ್ತುಗಳ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಮಾಣಿತ ಕಾರ್ಯ ವಿಧಾನ ಮಾರ್ಗಸೂಚಿ (ಎಸ್‍ಒಪಿ)ಯನ್ನು ರಾಜ್ಯ ಸರಕಾರ ಜಾರಿಗೊಳಿಸಿದೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಹುಂಡಿ ಎಣಿಕೆ, ಲೆಕ್ಕ ಪತ್ರ ನಿರ್ವಹಣೆಯಲ್ಲಿ ಕಳ್ಳತನ ಹಾಗೂ ದುರುಪಯೋಗವಾಗಿದೆ ಎಂದು ಉಲ್ಲೇಖಿಸಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಸತ್ತೋಲೆಯೊಂದನ್ನು ಹೊರಡಿಸಿದ್ದು, ದೇವಸ್ಥಾನಗಳಲ್ಲಿ ಹುಂಡಿಗಳನ್ನು ಎಲ್ಲರಿಗೂ ಕಾಣುವ ಜಾಗದಲ್ಲಿ ಇರಿಸಬೇಕು. ನಾಲ್ಕು ದಿಕ್ಕುಗಳಲ್ಲಿ ಸಿಸಿಟಿವಿ ವೆಬ್ ಕ್ಯಾಮೆರಾಗಳನ್ನು ಅಳವಡಿಸಿ, ಅವುಗಳ ನೇರ ನಿಗಾವಣೆಗಾಗಿ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ ಕಚೇರಿ, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಮತ್ತು ಸ್ಥಳೀಯ ಪೊಲೀಸ್ ಠಾಣೆಗಳಿಗೆ ನೇರ ಸಂಪರ್ಕ ಕಲ್ಪಿಸಬೇಕು. ಜೊತೆಗೆ ಧಾರ್ಮಿಕ ದತ್ತಿಯ ಕೇಂದ್ರ ಕಚೇರಿಯ ಸರ್ವರ್‍ಗೂ ಸಂಪರ್ಕಗೊಂಡಿರಬೇಕು ಎಂದು ಸೂಚಿಸಲಾಗಿದೆ.

ಸಿಸಿಟಿವಿ, ಡಿವಿಆರ್‍ಗಳನ್ನು ಕಳ್ಳತನ ಮಾಡುವುದು, ನಿಷ್ಕ್ರಿಯಗೊಳಿಸುವುದು ಅಥವಾ ಧ್ವಂಸ ಮಾಡುವ ಪ್ರಕರಣಗಳು ಕಂಡು ಬರುತ್ತಿವೆ. ಇನ್ನೂ ಕೆಲವು ಕಡೆ ಕರ್ಪೂರ ಹಚ್ಚಿ ಅದರಿಂದ ಬರುವ ಕಾರ್ಬನ್ ಅನ್ನು ಸಿಸಿಟಿವಿಗಳಿಗೆ ಹಿಡಿದು, ಕಪ್ಪು ಹೊಗೆಯಿಂದ ಕ್ಯಾಮೆರಾದ ಗಾಜು ಮಬ್ಬಾಗುವಂತೆ ಮಾಡಲಾಗುತ್ತದೆ. ಇದಕ್ಕಾಗಿ ವೆಬ್ ಕ್ಯಾಮೆರಾಗಳನ್ನೆ ಅಳವಡಿಸಬೇಕೆಂದು ತಿಳಿಸಲಾಗಿದೆ.

ಜೇಬು ಕಳ್ಳತನ ಹಾಗೂ ಇತರ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ಯೂಆರ್ ಕೋಡ್ ಅನ್ನು ಹೆಚ್ಚಾಗಿ ಬಳಸಬೇಕು. ಭಕ್ತರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಯುಪಿಐ ಮೂಲಕ ಅಥವಾ ನೆಟ್ ಬ್ಯಾಂಕ್‍ನಿಂದ ದೇಣಿಗೆ ಪಾವತಿಸಲು ಪ್ರೋತ್ಸಾಹಿಸಬೇಕು. ಕ್ಯೂಆರ್ ಕೋಡ್ ಹಾಳಾಗದಂತೆ ಮತ್ತು ಅದರ ಮೇಲೆ ಬೇರೆ ಕ್ಯೂಆರ್ ಕೋಡ್ ಅಂಟಿಸದಂತೆಯೂ ಎಚ್ಚರಿಕೆ ವಹಿಸಬೇಕು. ಹುಂಡಿಗಳ ಬಳಿಯೇ ಕ್ಯೂಆರ್ ಕೋಡ್ ಇರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹುಂಡಿ ಹಣ ಎಣಿಕೆಗೆ ಒಂದು ವಾರದ ಮೊದಲೇ ದಿನಾಂಕ ನಿಗದಿ ಮಾಡಿ ಪ್ರಕಟಿಸಬೇಕು. ಹೆಚ್ಚು ಹಣ ಸಂಗ್ರಹವಾಗುವ ದೇವಸ್ಥಾನಗಳಲ್ಲಿ ಪ್ರತಿ ವಾರ, ಸಾಧಾರಣ ಸಂಗ್ರಹಣೆಯ ದೇವಸ್ಥಾನಗಳಲ್ಲಿ ಎರಡು ವಾರಕ್ಕೊಮೆ ತಹಸೀಲ್ದಾರ್ ಮೇಲ್ವಿಚಾರಣೆಯಲ್ಲಿ ಹುಂಡಿ ಎಣಿಕೆಯಾಗಬೇಕು. ಅದರ ಹಣ ಉಪ ಖಜಾನೆಗೆ ಜಮಾವಣೆಯಾಗುವವರೆಗೂ ಕಟ್ಟುನಿಟ್ಟಿನ ನಿಗಾವಣೆ ಇರಬೇಕು. ಪ್ರತಿಯೊಂದು ಪ್ರಕ್ರಿಯೆಯೂ ವಿಡಿಯೋ ಚಿತ್ರೀಕರಣವಾಗಬೇಕು ಎಂದು ತಿಳಿಸಲಾಗಿದೆ.

ಹುಂಡಿ ಎಣಿಕೆಗೆ ಖಾಸಗಿ ವ್ಯಕ್ತಿಗಳ ಬದಲಾಗಿ ಬ್ಯಾಂಕ್ ಸಿಬ್ಬಂದಿ, ಸರಕಾರಿ ನೌಕರರು, ಗೃಹ ರಕ್ಷಕ ಸಿಬ್ಬಂದಿಗಳನ್ನು ಮಾತ್ರ ಬಳಸಬೇಕು. ಎಣಿಕೆಗೆ ತೆರಳುವ ಮುನ್ನ ಅವರ ಬಳಿ ಇರುವ ನಗದನ್ನು ಘೋಷಿಸಬೇಕು. ಹೊರ ಹೋಗುವಾಗ ತೀವ್ರ ತಪಾಸಣೆಯಾಗಬೇಕು. ಮುಖ ಗುರುತಿಸುವಿಕೆಯ ಹಾಜರಾತಿ ಕಡ್ಡಾಯವಾಗಿದೆ. ಅದೇ ರೀತಿ, ಸ್ಥಳೀಯ ಪೊಲೀಸ್ ಇನ್ಸ್‍ಪೆಕ್ಟರ್ ಅಥವಾ ಠಾಣಾಧಿಕಾರಿ ನಿಯಮಿತವಾಗಿ ದೇವಾಲಯಗಳಿಗೆ ಭೇಟಿ ನೀಡಿ ಲೈವ್ ಸಿಸಿಟಿವಿ ಮತ್ತು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಬೇಕು.

ಎ ಮತ್ತು ಬಿ ವರ್ಗದ ದೇವಸ್ಥಾನಗಳಿಗೆ ಜಿಲ್ಲಾಧಿಕಾರಿ, ಎಸ್ಪಿ, ಸಿಇಒಗಳು ಮೂರು ತಿಂಗಳಿಗೊಮೆ ಜಂಟಿಯಾಗಿ ಭೇಟಿ ನೀಡಬೇಕು. ಇತರ ವರ್ಗದ ದೇವಸ್ಥಾನಗಳಿಗೆ ಕಂದಾಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಧಾರ್ಮಿಕ ದತ್ತಿ ಇಲಾಖಾಧಿಕಾರಿಗಳು 15 ದಿನಕ್ಕೊಮೆ ಭೇಟಿ ನೀಡಬೇಕು. ಸ್ಥಳೀಯ ಲೋಪ ದೋಷಗಳನ್ನು ಮತ್ತು ಅಭಿವೃದ್ಧಿ ಯೋಜನೆ ಬಗ್ಗೆ ಮಾಸಿಕ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಬೇಕು ಹಾಗೂ ಲೆಕ್ಕ ಪರಿಶೋಧನೆಯಲ್ಲಿ ನಿಖರತೆ ಇರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X