ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಯೋಜನೆ; ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ, ಉನ್ನತ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ‘ಉಚಿತ ಉನ್ನತ ಶಿಕ್ಷಣ ಯೋಜನೆ’ಯಡಿಯಲ್ಲಿ 2026-27ನೇ ಸಾಲಿನ ಯುಜಿಸಿ ಅನುಮೋದಿತ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ಧರ್ಮದ ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷ ರೂ. ಮೀರಿರಬಾರದು. ಅರ್ಹ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜು.10ರಿಂದಲೇ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.31 ಆಗಿದೆ. ಅರ್ಜಿಯನ್ನು www.minorityksouportal.com ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟ್ಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಹಾಗೂ ದೂ.ಸಂಖ್ಯೆ 080-2660 3664 ಅಥವಾ ಮೊ.ಸಂಖ್ಯೆ 98805 26439, 90195 26439ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.






