Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಿಯಮ ಉಲ್ಲಂಘನೆ, ಲಂಚದ ಬೇಡಿಕೆ ಆರೋಪ;...

ನಿಯಮ ಉಲ್ಲಂಘನೆ, ಲಂಚದ ಬೇಡಿಕೆ ಆರೋಪ; ಪಶುವೈದ್ಯಾಧಿಕಾರಿ ನೇಮಕಾತಿ ತಡೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 July 2026 6:40 PM IST
share
ನಿಯಮ ಉಲ್ಲಂಘನೆ, ಲಂಚದ ಬೇಡಿಕೆ ಆರೋಪ; ಪಶುವೈದ್ಯಾಧಿಕಾರಿ ನೇಮಕಾತಿ ತಡೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು : ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ನಡೆದಿದ್ದು, ಇದರಲ್ಲಿ ಅಕ್ರಮದ ಆರೋಪ ಕೇಳಿಬಂದಿದೆ. ಹೀಗಾಗಿ ಸರಕಾರ ಕೂಡಲೇ ಆಯ್ಕೆ ಪಟ್ಟಿಯನ್ನು ತಡೆಹಿಡಿದು ಮರು ಪರೀಕ್ಷೆ ಮಾಡಬೇಕು ಎಂದು ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿನ ತಮ್ಮ ಕೊಠಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರಕಾರದ ಅಧಿಸೂಚನೆ ಉಲ್ಲಂಘಿಸಿ ಎಸ್‍ಸಿ-ಎಸ್‍ಟಿ ವರ್ಗಕ್ಕೆ ಮೀಸಲಾದ ಬ್ಯಾಕ್‍ಲಾಗ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದೆ. ಆಯ್ಕೆಯಾಗಲು 80 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂಬ ಆರೋಪವಿದೆ. ಅಲ್ಲದೆ ಅಮಾನತು ಆಗಿರುವ ಅಧ್ಯಕ್ಷರು ಸ್ವಜನಪಕ್ಷಪಾತ ನಡೆಸಿರುವ ಆರೋಪಗಳಿವೆ. ಹೀಗಾಗಿ ನೇಮಕಾತಿಯನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

ಆಯೋಗವು 2024ರಲ್ಲಿ 400 ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಇದರಲ್ಲಿ 342 ಸಾಮಾನ್ಯ ಹಾಗೂ 58 ಬ್ಯಾಕ್‍ಲಾಗ್ ಹುದ್ದೆಗಳಿದ್ದವು. 58 ಬ್ಯಾಕ್‍ಲಾಗ್ ಹುದ್ದೆಗಳು ಎಸ್‍ಸಿ-ಎಸ್‍ಟಿ ವರ್ಗಕ್ಕೆ ಮೀಸಲಿದ್ದವು. 342 ಹುದ್ದೆಗಳಿಗೆ ಪರೀಕ್ಷೆ ಮತ್ತು ಸಂದರ್ಶನ ಮಾಡಬಹುದು. ಆದರೆ ಬ್ಯಾಕ್‍ಲಾಗ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಷೇಧಿಸಲಾಗಿದೆ ಎಂಬ 2025ರ ಆದೇಶ ಉಲ್ಲಂಘಿಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಎಸ್‍ಟಿ/ಎಸ್‍ಟಿ ಅಭ್ಯರ್ಥಿಗಳನ್ನು ಒಳಪಡಿಸಿದ್ದಾರೆ ಎಂದು ಅವರು ದೂರಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ದಿಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ರಾಜಕೀಯ ಪಕ್ಷಗಳು ಹೈಜಾಕ್ ಮಾಡಿಕೊಂಡಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಕೇಂದ್ರ ಸರಕಾರ ಅಗತ್ಯ ಕ್ರಮ ಕೈಗೊಂಡಿದೆ, ಮರುಪರೀಕ್ಷೆ ಆಗಿದ್ದು ಫಲಿತಾಂಶ ಬಂದಿದೆ. ಆದರೂ ವಿದ್ಯಾರ್ಥಿಗಳು ಇದೀಗ ಹೋರಾಟಕ್ಕೆ ಇಳಿದಿದ್ದಾರೆ ಎಂದು ಅವರು ಆಕ್ಷೇಪಿಸಿದರು.

ಮೊಟ್ಟೆ ಬಂದಿದ್ದು ಹೇಗೇ?: ‘ನಗರದ ಕ್ವೀನ್ಸ್‌ ರಸ್ತೆಯಲ್ಲಿರುವುದು ಕಾಂಗ್ರೆಸ್ ಕಚೇರಿಯಲ್ಲ, ಬದಲಿಗೆ, ಅದು ಮಿಲಿಟರಿ ಹೋಟೆಲ್. ಇಲ್ಲದಿದ್ದರೆ ಅಲ್ಲಿ ಮೊಟ್ಟೆಗಳು ಬಂದದ್ದು ಹೇಗೆ?. ಅಲ್ಲೇನು ಕೋಳಿ ಫಾರಂ ಇದೆಯೇ?. ಅಥವಾ ಶಾಲಾ ಮಕ್ಕಳಿಗೆ ಕೊಡಬೇಕಾದ ಮೊಟ್ಟೆಗಳನ್ನು ಕಾಂಗ್ರೆಸ್ ಕಚೇರಿಯಲ್ಲಿ ಇಟ್ಟುಕೊಂಡು ಆಮ್ಲೆಟ್ ಮಾಡಿಕೊಳ್ಳುತ್ತಿದ್ದಾರೆಯೇ?’ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X