Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಛಾಯಾಗ್ರಾಹಕರು ಸಮಾಜದ ಕಣ್ಣುಗಳ್ಳಿದ್ದಂತೆ...

ಛಾಯಾಗ್ರಾಹಕರು ಸಮಾಜದ ಕಣ್ಣುಗಳ್ಳಿದ್ದಂತೆ : ಸಭಾಪತಿ ಸಲೀಂ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ22 Aug 2026 9:47 PM IST
share
ಛಾಯಾಗ್ರಾಹಕರು ಸಮಾಜದ ಕಣ್ಣುಗಳ್ಳಿದ್ದಂತೆ : ಸಭಾಪತಿ ಸಲೀಂ ಅಹ್ಮದ್

ಬೆಂಗಳೂರು : ‘ಛಾಯಾಗ್ರಾಹಕರು ನಮ್ಮ ಸಮಾಜದ ಕಣ್ಣುಗಳಿದ್ದಂತೆ. ಹೀಗಾಗಿ ಅವರ ಸೇವೆ ನಿಜಕ್ಕೂ ಶ್ಲಾಘನೀಯ’ ಎಂದು ವಿಧಾನ ಪರಿಷತ್‍ನ ಸಭಾಪತಿ ಸಲೀಂ ಅಹ್ಮದ್ ಅವರು ಬಣ್ಣಿಸಿದ್ದಾರೆ.

ಶನಿವಾರ ಇಲ್ಲಿನ ಚಿತ್ರಕಲಾ ಪರಿಷತ್‍ನಲ್ಲಿ ಫೋಟೊ ಜರ್ನಲಿಸ್ಟ್ ಅಸೋಸಿಯೇಷನ್ ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ‘‘Frozen Memories’" ಫೋಟೋ ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಒಂದು ಸಾವಿರ ಪದಗಳನ್ನು ಹೇಳುತ್ತದೆ’ ಎಂಬ ಮಾತಿನಂತೆ, ಛಾಯಾಚಿತ್ರಗಳು ಕೇವಲ ಒಂದು ಕ್ಷಣವನ್ನು ಸೆರೆಹಿಡಿಯುವುದಲ್ಲ, ಆ ಕ್ಷಣದ ಭಾವನೆ, ಘಟನೆ, ಬದುಕು ಹಾಗೂ ಇತಿಹಾಸವನ್ನು ಮುಂದಿನ ಪೀಳಿಗೆಗಳಿಗಾಗಿ ಉಳಿಸುತ್ತವೆ ಎಂದರು.

ಸಮಾಜದಲ್ಲಿ ನಡೆಯುವ ಅನೇಕ ಮಹತ್ವದ ಘಟನೆಗಳು, ಸಂಭ್ರಮಗಳು, ಸಾಧನೆಗಳು, ನೋವು-ನಲಿವುಗಳು ಹಾಗೂ ಐತಿಹಾಸಿಕ ಕ್ಷಣಗಳನ್ನು ತಮ್ಮ ಕ್ಯಾಮೆರಾದ ಮೂಲಕ ದಾಖಲಿಸುವ ಮೂಲಕ ಛಾಯಾಗ್ರಾಹಕರು ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ಛಾಯಾಗ್ರಾಹಕರ ಸೇವೆ ಅನನ್ಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಛಾಯಾಗ್ರಾಹಕರು ಬಿಸಿಲು, ಮಳೆ, ಸಮಯದ ಮಿತಿ ಯಾವುದನ್ನೂ ಲೆಕ್ಕಿಸದೆ, ಸರಿಯಾದ ಕ್ಷಣವನ್ನು ಗುರುತಿಸಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾರೆ. ಇಂದು ನಾವು ನೆನಪಿಸಿಕೊಳ್ಳುವ ಅನೇಕ ಘಟನೆಗಳ ದೃಶ್ಯ ದಾಖಲೆಗಳ ಹಿಂದೆ ಛಾಯಾಗ್ರಾಹಕರ ಪರಿಶ್ರಮವಿದೆ. ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನವು ವೇಗವಾಗಿ ಬದಲಾಗುತ್ತಿದ್ದರೂ, ಒಂದು ಕ್ಷಣವನ್ನು ಅರ್ಥಪೂರ್ಣವಾಗಿ ನೋಡುವ ಛಾಯಾಗ್ರಾಹಕರ ದೃಷ್ಟಿಗೆ ಪರ್ಯಾಯವಿಲ್ಲ. ಅವರ ಕ್ಯಾಮೆರಾದಲ್ಲಿ ಸೆರೆಯಾಗುವ ಒಂದು ಚಿತ್ರ ಮುಂದಿನ ದಿನಗಳಲ್ಲಿ ಇತಿಹಾಸದ ಅಮೂಲ್ಯ ದಾಖಲೆಯಾಗಬಹುದು ಎಂದು ಸಲೀಂ ಅಹ್ಮದ್ ಅಭಿಪ್ರಾಯಪಟ್ಟರು.

ಪ್ರದರ್ಶನದಲ್ಲಿರುವ ಪ್ರತಿಯೊಂದು ಚಿತ್ರವೂ ಛಾಯಾಗ್ರಾಹಕರ ಪ್ರತಿಭೆ, ಸೃಜನಶೀಲತೆ, ತಾಳ್ಮೆ ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋ ತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಛಾಯಾಗ್ರಾಹಕರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲಾಗುವುದು. ಅಲ್ಲದೆ, ಛಾಯಾಗ್ರಾಹಕರಿಗೆ ಸಹಕಾರ ಇರಲಿದೆ ಎಂದು ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅರಣ್ಯ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಛಾಯಾಗ್ರಹಣವು ಕೇವಲ ಕಲೆಯಲ್ಲ, ಸಮಾಜದ ಆಗು-ಹೋಗುಗಳನ್ನು ದಾಖಲಿಸುವ ಮಹತ್ವದ ಮಾಧ್ಯಮವಾಗಿದೆ ಎಂದು ಹೇಳಿದರು.

ಪತ್ರಿಕೋದ್ಯಮದಲ್ಲಿ ಛಾಯಾಗ್ರಾಹಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ತಮ್ಮ ಕ್ಯಾಮೆರಾದ ಮೂಲಕ ಸಮಾಜದ ವಾಸ್ತವ ಚಿತ್ರಣವನ್ನು ಜನರ ಮುಂದಿಡುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದರು. ಈ ವೇಳೆ ಹಿರಿಯ ಛಾಯಾಗ್ರಾಹಕರಾದ ಕೆಂಪಣ್ಣ, ಮೂರ್ತಿ, ರಾಜಶೇಖರ್ ಹಾಗೂ ಗೋಪಿಚಂದ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಫೋಟೊ ಜರ್ನಲಿಸ್ಟ್ ಅಸೋಸಿಯೇಷನ್‍ನ ಅಧ್ಯಕ್ಷ ಮೋಹನ್‍ಕುಮಾರ್ ಸೇರಿದಂತೆ ಅಸೋಸಿಯೇಷನ್‍ನ ಪದಾಧಿಕಾರಿಗಳು, ಛಾಯಾಗ್ರಾಹಕರು, ಪತ್ರಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X