Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು...

ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಸಮಾನ ಮನಸ್ಕರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Aug 2025 10:24 PM IST
share
ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಸಮಾನ ಮನಸ್ಕರ ಆಗ್ರಹ

ಬೆಂಗಳೂರು, ಆ.26: ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ನ್ಯಾ. ಎಚ್.ಎನ್.ನಾಗಮೋಹನ್‍ದಾಸ್ ಏಕ ಸದಸ್ಯ ಆಯೋಗದ ವರದಿಯಲ್ಲಿ ನಿಗದಿ ಪಡಿಸಿದ್ದ ಶೇ.1ರಷ್ಟು ಪ್ರತ್ಯೇಕ, ಗುಂಪಿನಲ್ಲಿ ಮೀಸಲಾತಿ ನೀಡಲು ಆಗ್ರಹಿಸಿ ಸಾಹಿತಿಗಳು, ಚಿಂತಕರು, ಹೋರಾಟಗಾರರು, ಕಲಾವಿದರು ಹಾಗೂ ಸಮಾನ ಮನಸ್ಕರ ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಶಾಸಕರ ಭವನದಲ್ಲಿ ನಡೆದ ಸಾಹಿತಿಗಳು, ಚಿಂತಕರು, ಹೋರಾಟಗಾರರ ಸಮಾಲೋಚನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ನ್ಯಾ.ನಾಗಮೋಹನ್‍ದಾಸ್ ಆಯೋಗದ ವರದಿಯ ಅನುಸಾರ ಅಸ್ಪೃಶ್ಯ ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ಯಥಾವತ್ತು ಜಾರಿಗೊಳಿಸಬೇಕು. ಜತೆಗೆ ತೆಲಂಗಾಣದ ಮಾದರಿಯಲ್ಲಿ ಮೀಸಲಾತಿ ಬಿಂದುವನ್ನು ಜಾರಿಗೊಳಿಸುವಂತೆ ಸಭೆಯಲ್ಲಿ ಭಾಗವಹಿಸಿದ್ದ ಸಮಾನ ಮನಸ್ಕರು ಒತ್ತಾಯಿಸಿದರು.

ಶೇ.1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳು ಅಲೆಮಾರಿ ಸಮುದಾಯದ ಹಕ್ಕು. ಹಾಗಾಗಿ ಅದನ್ನೂ ಸಹ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ನೀಡಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ 49ಸಮುದಾಯಗಳಿಗೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಬೇಕು. ಇತರೆ ಸಮುದಾಯಗಳನ್ನು ಕೈಬಿಡಬೇಕು ಎಂದು ನಿರ್ಣಯಿಸಿದರು.

ಹಿರಿಯ ಸಾಹಿತಿ ಡಾ.ರಹಮತ್ ತರೀಕೆರೆ ಮಾತನಾಡಿ, ಶೇ.1ರಷ್ಟು ಮೀಸಲಾತಿ ವಿಷಯವನ್ನು ಜೀವಂತವಾಗಿಡಲು ಜನಾಭಿಪ್ರಾಯವನ್ನು ರೂಪಿಸಬೇಕು. ಅಲೆಮಾರಿ ಸಮುದಾಯಗಳ ವಾಸ್ತವ ಚಿತ್ರಣ ಬೇರೆ ರೀತಿಯಲ್ಲಿದೆ. ಅಲೆಮಾರಿ ಸಮುದಾಯ ಎಷ್ಟೊಂದು ಧಾರುಣಾವಸ್ಥೆಯಲ್ಲಿದೆ ಎನ್ನುವುದನ್ನು ಹೇಳುವ ಪ್ರಯತ್ನ ನಾವೆಲ್ಲರೂ ಮಾಡಬೇಕು. ನ್ಯಾ.ನಾಗಮೋಹನ್‍ದಾಸ್ ಆಯೋಗದ ವರದಿ ಯಥಾಸ್ಥಿತಿಯಲ್ಲಿ ಜಾರಿಗೆ ಬರುವಂತೆ ಒತ್ತಾಯಿಸಬೇಕು ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಹಿರಿಯ ಸಾಹಿತಿ ರಾಜಪ್ಪ ದಳವಾಯಿ, ಶಿಕ್ಷಣ ತಜ್ಞ ಪ್ರೊ.ನಿರಂಜನರಾಧ್ಯ, ಶ್ರೀಪಾದ್ ಭಟ್, ಅಂಕಣಕಾರ ಶಿವಸುಂದರ್, ಹೋರಾಟಗಾರರಾದ ಡಾ.ವಾಸು.ಎಚ್.ವಿ, ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ಪ್ರೊ.ಎ.ಎಸ್.ಪ್ರಭಾಕರ್, ಲೇಖಕಿ ಡಾ.ಕೆ.ಶರೀಫಾ, ಲೇಖಕ ದಾಸನೂರು ಕೂಸಣ್ಣ, ವಕೀಲ ವಿನಯ್ ಶ್ರೀನಿವಾಸ್, ಮೈತ್ರೇಯಿ, ಪ್ರಾಧ್ಯಾಪಕ ಡಾ.ಹುಲಿಕುಂಟೆ ಮೂರ್ತಿ, ,ಪ್ರೊ.ಬಿ.ಸಿ.ಬಸವರಾಜ್, ಡಾ.ಟಿ.ಗೋವಿಂದರಾಜ್, ಕವಿ ಟಿ.ಯಲ್ಲಪ್ಪ, ಕಥೆಗಾರ ದಯಾನಂದ, ಕೆಸ್ತಾರ ವಿ.ಮೌರ್ಯ, ಡಿ.ಟಿ.ವೆಂಕಟೇಶ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X