ನಿಂದನೆ ಆರೋಪ | ವಕೀಲ ಕೆ.ಎನ್.ಜಗದೀಶ್ಗೆ ಜಾಮೀನು

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಬಂಧಿತರಾಗಿದ್ದ ವಕೀಲ ಕೆ.ಎನ್.ಜಗದೀಶ್ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಈ ಸಂಬಂಧ ತಮ್ಮ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೆ.ಎನ್.ಜಗದೀಶ್, ಕೊಡಿಗೇಹಳ್ಳಿ ಪೊಲೀಸರು ನನ್ನನ್ನು ವಶಕ್ಕೆ ಪಡೆದಿದ್ದರು. ನನ್ನ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ 7 ವರ್ಷಕ್ಕಿಂತಲೂ ಕಡಿಮೆ ಶಿಕ್ಷೆ ಇದೆ. ಹಾಗಾಗಿ, ನನಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ" ಎಂದು ಮಾಹಿತಿ ನೀಡಿದ್ದಾರೆ.
ಎರಡು ಭಿನ್ನ ಸಮುದಾಯಗಳ ನಡುವೆ ದ್ವೇಷ ಉಂಟು ಮಾಡಲು ಪ್ರಯತ್ನಿಸಿದ ಆರೋಪದ ಮೇರೆಗೆ ವಕೀಲ ಜಗದೀಶ್ ವಿರುದ್ಧ ಮಂಜುನಾಥ್ ಎಂಬುವವರು ದೂರು ನೀಡಿದ್ದರು.
Next Story





