Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ‘ಆಪರೇಷನ್ ಕಗಾರ್’ ಮಾನವ...

ಬೆಂಗಳೂರು | ‘ಆಪರೇಷನ್ ಕಗಾರ್’ ಮಾನವ ಹಕ್ಕುಗಳ ಉಲ್ಲಂಘನೆ : ಐಶ್ವರ್ಯಾ

ವಾರ್ತಾಭಾರತಿವಾರ್ತಾಭಾರತಿ11 Oct 2025 11:51 PM IST
share
ಬೆಂಗಳೂರು | ‘ಆಪರೇಷನ್ ಕಗಾರ್’ ಮಾನವ ಹಕ್ಕುಗಳ ಉಲ್ಲಂಘನೆ : ಐಶ್ವರ್ಯಾ

ಬೆಂಗಳೂರು, ಅ.11: ಛತ್ತೀಸ್‌ ಗಡದಲ್ಲಿ ಕೇಂದ್ರ ಸರಕಾರ 'ಆಪರೇಷನ್ ಕಗಾರ್' ಹೆಸರಿನಲ್ಲಿ ನಕ್ಸಲರ ಹಾಗೂ ಆದಿವಾಸಿಗಳ ಮೇಲೆ ನಡೆಸುತ್ತಿರುವ ಮಾರಣಹೋಮ ಅಂತರ್‌ರಾಷ್ಟ್ರೀಯ ಮಾನವ ಹಕ್ಕುಗಳ ಕಾಯ್ದೆ ಮತ್ತು ಸ್ಥಳೀಯ ಜನಾಂಗಗಳ ಹಕ್ಕುಗಳ ಕುರಿತು ವಿಶ್ವಸಂಸ್ಥೆ ಘೋಷಣೆಯ ಉಲ್ಲಂಘನೆಯಾಗಿದೆ ಎಂದು ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್‌ (ಪಿಯುಸಿಎಲ್) ಐಶ್ವರ್ಯಾ ಹೇಳಿದ್ದಾರೆ.

ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಪರೇಷನ್ ಕಗಾರ್ ಎಂಬುದು ಮಧ್ಯ ಭಾರತದ ಆದಿವಾಸಿಗಳ ಮತ್ತು ಖನಿಜ ಸಂಪತ್ತಿನ ಮೇಲೆ ಯುದ್ಧ ಮಾಡುವ ಯೋಜನೆಯಾಗಿದೆ ಎಂದರು.

ಛತ್ತೀಸ್‌ಗಡದ ಅರಣ್ಯ ಪ್ರದೇಶದಲ್ಲಿ ಆದಿವಾಸಿಗಳು ಆದಾನಿ ಗಣಿಗಾರಿಕಾ ಯೋಜನೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಈ ಯೋಜನೆಗಳು ಭಾರತದ ಅತ್ಯಂತ ದೊಡ್ಡ ನಿರಂತರ ಅರಣ್ಯ ಪ್ರದೇಶವನ್ನು ಅಪಾಯಕ್ಕೊಳಪಡಿಸುತ್ತವೆ. ದೇವನಹಳ್ಳಿಯಿಂದ ಬಿಡದಿವರೆಗೆ, ಹೊನ್ನಾವರದಿಂದ ನಾಗರಹೊಳೆ ವರೆಗೆ ಭೂಸ್ವಾಧೀನ, ಬಲವಂತದ ತೆರವು ಮತ್ತು ಪೊಲೀಸ್ ಬಲದ ಬಳಕೆ ಸಾಮಾನ್ಯ ಸಂಗತಿಯಾಗಿದೆ. ಜನರು ಮತ್ತು ಪ್ರಕೃತಿಯ ಹಿತಾಸಕ್ತಿಯನ್ನು ಲೆಕ್ಕಿಸದ ಕಾರ್ಪೊರೇಟ್ ದೋಚುವಿಕೆಯನ್ನು ವೇಗಗೊಳಿಸಲು ವಿಶೇಷ ಆರ್ಥಿಕ ವಲಯಗಳನ್ನು ಕಾನೂನು ರಹಿತ ದ್ವೀಪಗಳಂತೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ಹೋರಾಟದಲ್ಲಿ ಪ್ರಗತಿಪರ ಕಟ್ಟಡ ಕಾರ್ಮಿಕರ ಒಕ್ಕೂಟದ ಎಸ್.ಎಂ.ಮಾರಿ, ಸಿಪಿಐಎಂಎಲ್‌ ನಾಗರಾಜ್ ಪೂಜಾರ್, ಹೋರಾಟಗಾರರಾದ ಆರತ್ರಿಕಾ, ಸಂಜಯ್, ಲಾವಣ್ಯ, ಸಂಜನಾ, ರಮೇಶ್, ಅರಿಂದಮ್, ಸಂಜಯ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

'ಆದಿವಾಸಿಗಳ ಮೇಲಿನ ಯುದ್ಧ ನಿಲ್ಲಲಿ' :

ಈ ದೋಚುವ ಆಡಳಿತದ ಕಾಲದಲ್ಲಿ ಪ್ರಕೃತಿ ಮತ್ತು ಪ್ರಕೃತಿ ಸಂಪತ್ತಿನ ಬಗ್ಗೆ ನಿಜವಾದ ಕಾಳಜಿ ಇರುವವರನ್ನು 'ರಾಷ್ಟ್ರವಿರೋಧಿ ಹಾಗೂ ಅಭಿವೃದ್ಧಿ ವಿರೋಧಿ' ಎಂದು ಗುರುತಿಸಲಾಗುತ್ತಿದೆ. ಬಸ್ತರ್‌ನಿಂದ ಮಣಿಪುರವರೆಗೆ, ಲಡಾಖ್‌ನಿಂದ ನಾಗರಹೊಳೆವರೆಗೆ, ನಾವು ಕಾರ್ಪೊರೇಟೀಕರಣ ವಿರೋಧಿಸುತ್ತೇವೆ. ಕೇಂದ್ರ ಸರಕಾರ ಕೂಡಲೇ ಅಪರೇಷನ್‌ ಕಗಾರ್ ನಿಲ್ಲಿಸಬೇಕು ಮತ್ತು ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧವನ್ನು ಸ್ಥಗಿತಗೊಳಿಸಬೇಕು ಎಂದು ಐಶ್ವರ್ಯಾ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X