Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಶವ ಮಳಗಿ ಅವರ ಗೇಬ್ರಿಯಲ್ ಗಾರ್ಸಿಯಾ...

ಕೇಶವ ಮಳಗಿ ಅವರ ಗೇಬ್ರಿಯಲ್ ಗಾರ್ಸಿಯಾ ಮಾರ್ಕೇಸ್ ಗದ್ಯಗಾರುಡಿ ಕೃತಿ ಸೇರಿ 3 ಕೃತಿಗೆ ‘ಪುಸ್ತಕ ಸೊಗಸು ಬಹುಮಾನ’

ವಾರ್ತಾಭಾರತಿವಾರ್ತಾಭಾರತಿ16 April 2025 11:53 PM IST
share
ಕೇಶವ ಮಳಗಿ ಅವರ ಗೇಬ್ರಿಯಲ್ ಗಾರ್ಸಿಯಾ ಮಾರ್ಕೇಸ್ ಗದ್ಯಗಾರುಡಿ ಕೃತಿ ಸೇರಿ 3 ಕೃತಿಗೆ ‘ಪುಸ್ತಕ ಸೊಗಸು ಬಹುಮಾನ’

ಬೆಂಗಳೂರು: ಕೇಶವ ಮಳಗಿ ಅವರ ಗೇಬ್ರಿಯಲ್ ಗಾರ್ಸಿಯಾ ಮಾರ್ಕೇಸ್ ಗದ್ಯಗಾರುಡಿ ಕೃತಿಗೆ 2022, ಡಾ.ಆರ್. ಎಚ್.ಕುಲಕರ್ಣಿ ಮತ್ತು ಎಚ್.ಎ.ಅನಿಲ್ ಕುಮಾರ್ ಅವರ ದೃಶ್ಯಕಲಾ ಕಮಲಾ ಕೃತಿಗೆ 2023 ಹಾಗೂ ಪ್ರೊ.ಕೆ.ಸಿ.ಶಿವಾರೆಡ್ಡಿ ಅವರ ಕೆ.ಪಿ.ಪೂರ್ಣಚಂದ್ರತೇಜಸ್ವಿ ಸಮಗ್ರ ಕೃತಿ ಜಗತ್ತು ಸಂಪುಟಗಳು 2024ನೇ ಸಾಲಿನ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನ ಪಡೆದುಕೊಂಡಿವೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ತಿಳಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, 2022ನೇ ಸಾಲಿನ ಪುಸ್ತಕ ಸೊಗಸು 2ನೇ ಬಹುಮಾನಕ್ಕೆ ಜಿ.ಕೆ.ದೇವರಾಜಸ್ವಾಮಿ ಅವರ ಅಧಿಷ್ಠಾನ ಬಾಯಿಪಾಠ ಪಸ್ತಕ, 3ನೇ ಬಹುಮಾನಕ್ಕೆ ಡಾ.ರವಿಕುಮಾರ್ ನೀಹ ಅವರ ಅರಸು ಕುರನ್ಗರಾಯ, 2022ನೇ ಸಾಲಿನ ಮಕ್ಕಳ ಪುಸ್ತಕ ಸೊಗಸು ಬಹುಮಾನಕ್ಕೆ ಡಾ.ಕುರುವ ಬಸವರಾಜ್ ಅವರ ಮಲ್ಲಿಗೆ, ಮುಖಪುಟ ಚಿತ್ರ ವಿನ್ಯಾಸ ಬಹುಮಾನಕ್ಕೆ ಎಚ್.ಎಚ್.ಮ್ಯಾದಾರ್ ಅವರ ಅಮೂಲ್ಯ ಮುತ್ತು ರಾಜಕುಮಾರ್ ಕುರಿತ ನೂರಾರು ಚುಕ್ಕಿ ಚಿತ್ರ ಸಂಪುಟ, ಮುಖಪುಟ ಚಿತ್ರ ಕಲೆಯ ಬಹುಮಾನಕ್ಕೆ ಪಾರ್ವತಿ ಜಿ.ಐತಾಳ್ ಅವರ ಮಾಧವಿ ಕಥನ –ಕಥನ ಕಾವ್ಯ, ಪುಸ್ತಕ ಮುದ್ರಣ ಸೊಗಸು ಬಹುಮಾನಕ್ಕೆ ಬೇಲೂರು ರಘುನಂದನ ಅವರ ಚಿಟ್ಟೆ ಏಕವ್ಯಕ್ತಿ ನಾಟಕ ಆಯ್ಕೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

2023ನೇ ಸಾಲಿನ ಪುಸ್ತಕ ಸೊಗಸು 2ನೇ ಬಹುಮಾನಕ್ಕೆ ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಕಾಡುಗೊಲ್ಲ ಬುಡಕಟ್ಟು ಕುಲಕಥನ, 3ನೇ ಬಹುಮಾನಕ್ಕೆ ಡಾ.ಮಲ್ಲಿಕಾರ್ಜುನ ಸಿ.ಬಾಗೋಡಿ ಅವರ ಚಿತ್ರಭಿತ್ತಿ, ಮಕ್ಕಳ ಪುಸ್ತಕ ಸೊಗಸು ಬಹುಮಾನಕ್ಕೆ ಪರವೀನ ಬಾನು ಎಂ.ಶೇಖ ಅವರ ಬಾಲ ಮಂದಾರ, ಮುಖಪುಟ ಚಿತ್ರ ವಿನ್ಯಾಸ ಬಹುಮಾನಕ್ಕೆ ಬ್ಯೂಟಿ ಬೆಳ್ಳಕ್ಕಿ- ಮಕ್ಕಳ ಕಥನ, ಮುಖಪುಟ ಚಿತ್ರ ಕಲೆಯ ಬಹುಮಾನಕ್ಕೆ ಬಿಡಾರ ಅತ್ಮಕಥೆ, ಪುಸ್ತಕ ಮುದ್ರಣ ಸೊಗಸು ಬಹುಮಾನಕ್ಕೆ ಡಾ.ಎಸ್.ಗುರುಮೂರ್ತಿ ಅವರ ಕಂಬದಹಳ್ಳಿ ಕಂಬಾಪುರಿಯ ಪಂಚಕೂಟ ಬಸದಿ ಕೃತಿ ಅಯ್ಕೆಯಾಗಿವೆ ಎಂದು ತಿಳಿಸಿದ್ದಾರೆ.

2024ನೇ ಸಾಲಿನ ಪುಸ್ತಕ ಸೊಗಸು 2ನೇ ಬಹುಮಾನಕ್ಕೆ ಕೆ.ಸಿ.ಶ್ರೀನಾಥ್ ಅವರ ಶಕ್ತಿನದಿ ಶರಾವತಿ, 3ನೇ ಬಹುಮಾನಕ್ಕೆ ಸ್ವಾಮಿ ಪೊನ್ನಾಚಿ ಅವರ ಕಾಡು ಹುಡುಗನ ಹಾಡುಪಾಡು, ಮಕ್ಕಳ ಪುಸ್ತಕ ಸೊಗಸು ಬಹುಮಾನಕ್ಕೆ ಚಂದ್ರೇಗೌಡ ಕುಲಕರ್ಣಿ ಅವರ ಕನ್ನಡ ನುಡಿ ಚಂದ ಚಿಲಿಪಿಲಿ ಶ್ರೀಗಂಧ, ಮುಖಪುಟ ಚಿತ್ರ ವಿನ್ಯಾಸ ಬಹುಮಾನಕ್ಕೆ ಮಾತಿಗಿಳಿದ ಚಿತ್ರ, ಮುಖಪುಟ ಚಿತ್ರಕಲೆ ಬಹುಮಾನಕ್ಕೆ ಬಣಮಿ, ಪುಸ್ತಕ ಮುದ್ರಣ ಸೊಗಸು ಬಹುಮಾನಕ್ಕೆ ಮತ್ತೆ ಮತ್ತೆ ಶಂಕರಗೌಡ ತಲೆಮಾರಿನಂತರದ ಮನಸುಗಳ ಇಣುಕು ನೋಟ ಕೃತಿಗಳು ಅಯ್ಕೆಯಾಗಿವೆ ಎಂದು ತಿಳಿಸಿದ್ದಾರೆ.

ಪುಸ್ತಕ ಸೊಗಸು ಮೊದಲನೇ ಬಹುಮಾನಕ್ಕೆ 25 ಸಾವಿರ ರೂ., 2ನೇ ಬಹುಮಾನಕ್ಕೆ 20 ಸಾವಿರ ರೂ., 3ನೇ ಬಹುಮಾನಕ್ಕೆ 10 ಸಾವಿರ ರೂ., ಮಕ್ಕಳ ಪುಸ್ತಕ ಸೊಗಸುಗೆ 8 ಸಾವಿರ ರೂ., ಮುಖಪುಟ ಚಿತ್ರ ವಿನ್ಯಾಸ ಬಹುಮಾನ 10 ಸಾವಿರ ರೂ., ಮುಖಪುಟ ಚಿತ್ರಕಲೆಯ ವಿನ್ಯಾಸ ಬಹುಮಾನಕ್ಕೆ 8 ಸಾವಿರ ರೂ., ಪುಸ್ತಕ ಮುದ್ರಣ ಸೊಗಸು ಬಹುಮಾನವು 5 ಸಾವಿರ ರೂ. ನಗದು ಬಹುಮಾನ ಹೊಂದಿದೆ ಎಂದು ತಿಳಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X