Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಲಬಾರ್ ಗ್ರೂಪ್‌ನಿಂದ ಕರ್ನಾಟಕದ 5,501...

ಮಲಬಾರ್ ಗ್ರೂಪ್‌ನಿಂದ ಕರ್ನಾಟಕದ 5,501 ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ ಘೋಷಣೆ

► ಸಂಸ್ಥೆಯಿಂದ ಮಹಿಳಾ ಸಬಲೀಕರಣದ ಬದ್ಧತೆಯ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ13 Feb 2025 9:56 PM IST
share
ಮಲಬಾರ್ ಗ್ರೂಪ್‌ನಿಂದ ಕರ್ನಾಟಕದ 5,501 ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ ಘೋಷಣೆ

ಬೆಂಗಳೂರು: ಭಾರತದ ಮುಂಚೂಣಿಯಲ್ಲಿರುವ ವ್ಯವಹಾರಿಕ ಸಮೂಹ ಸಂಸ್ಥೆ ಮತ್ತು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನ ಪೋಷಕ ಸಂಸ್ಥೆಯಾಗಿರುವ ಮಲಬಾರ್ ಗ್ರೂಪ್ ಕರ್ನಾಟಕದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹೆಣ್ಣು ಮಕ್ಕಳ ವಿದ್ಯಾರ್ಥಿ ವೇತನವನ್ನು ಘೋಷಣೆ ಮಾಡಿದೆ.

ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿ ವೇತನ ಯೋಜನೆಯನ್ನು ಘೋಷಣೆ ಮಾಡಲಾಯಿತು.

ಸಮೂಹದ ಫ್ಲ್ಯಾಗ್‌ಶಿಪ್ ಯೋಜನೆಯಾದ ಸಿಎಸ್‌ಆರ್ ಉಪಕ್ರಮದಡಿಯ ಮಲಬಾರ್ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಈ ಘೋಷಣೆ ಒಂದು ಮಹತ್ವದ ಮೈಲಿಗಲ್ಲಾಗಿದೆ. ಈ ಮೂಲಕ ಹೆಣ್ಣು ಮಕ್ಕಳ ಶಿಕ್ಷಣವನ್ನು ಬೆಂಬಲಿಸುವ ಬದ್ಧತೆಯನ್ನು ತೋರಿಸುತ್ತದೆ.

ಈ ಕಾರ್ಯಕ್ರಮವನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಶಾಸಕರಾದ ಎನ್.ಎ.ಹ್ಯಾರೀಸ್ ಉಪಸ್ಥಿತರಿದರು.

ಮಲಬಾರ್ ಗ್ರೂಪ್‌ನ ಅಧ್ಯಕ್ಷರಾದ ಎಂ.ಪಿ.ಅಹಮ್ಮದ್‌ರವರು, ಮಲಬಾರ್ ಗ್ರೂಪ್‌ನ ಇಂಡಿಯಾ ಕಾರ್ಯಾಚರಣೆಗಳ ವ್ಯವಸ್ಥಾಪಕ ನಿರ್ದೇಶಕರಾದ ಓ ಅಷರ್, ಕರ್ನಾಟಕದ ಪ್ರಾದೇಶಿಕ ಮುಖ್ಯಸ್ಥ ಫಿಲ್ಟರ್ ಬಾಬು ಬಿ.ಪಿ, ವಲಯ ಮುಖ್ಯಸ್ಥರಾದ ರಿಬಿನ್ ತೌಫೀಕ್, ಕೆ. ಮನ್ಸೂರ್ ಅಲಂ ಮತ್ತು ಶರಿಫುದ್ದೀನ್ ಪಿ ರವರು ಸೇರಿದಂತೆ ಮಲಬಾರ್ ಗೋಲ್ಡ್ & ಡೈಮಂಡ್ಸ್‌ನ ಆಡಳಿತ ಮಂಡಳಿ ಸದಸ್ಯರು, ಗ್ರಾಹಕರು, ಹಿತೈಷಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ವರ್ಷ ಭಾರತದಲ್ಲಿ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ 16 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಈ ಹಣವನ್ನು 21,000 ಕ್ಕೂ ಹೆಚ್ಚು ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ವಿತರಣೆ ಮಾಡಲಾಗುತ್ತದೆ. ಕರ್ನಾಟಕದಲ್ಲಿ 491 ಕಾಲೇಜುಗಳ 5,501 ಹೆಣ್ಣು ಮಕ್ಕಳ ವ್ಯಾಸಂಗಕ್ಕೆ ನೆರವಾಗುವ ದೃಷ್ಟಿಯಿಂದ ಒಟ್ಟು 4.74 ಕೋಟಿ ರೂಪಾಯಿಗಳ ವಿದ್ಯಾರ್ಥಿವೇತನವನ್ನು ವಿತರಣೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮಲಬಾರ್ ಗ್ರೂಪ್ ಅಧ್ಯಕ್ಷ ಎಂ.ಪಿ.ಅಹಮ್ಮದ್‌ರವರು, "ಜಗತ್ತಿನ ಬದಲಾವಣೆಗೆ ಶಿಕ್ಷಣ ಒಂದು ಅತ್ಯಂತ ಶಕ್ತಿಶಾಲಿ ಸಾಧನವಾಗಿದೆ. ನಮ್ಮ ವಿದ್ಯಾರ್ಥಿವೇತನ ಕಾರ್ಯಕ್ರಮವು ಮಲಬಾರ್ ಗ್ರೂಪ್‌ನ ಆಳವಾದ ಬೇರೂರಿರುವ ನಂಬಿಕೆಯ ನೇರ ಪ್ರತಿಬಿಂಬವಾಗಿದೆ. ಶಿಕ್ಷಣವು ಅವಕಾಶಗಳನ್ನು ತೆರೆಯುತ್ತದೆ ಮತ್ತು ಜೀವನವನ್ನು ಪರಿವರ್ತಿಸುತ್ತದೆ. ಯುವ ಹೆಣ್ಣುಮಕ್ಕಳು ತಮ್ಮ ಶೈಕ್ಷಣಿಕ ಆಕಾಂಕ್ಷೆಗಳನ್ನು ಪೂರೈಸಲು ಮತ್ತು ಸಮಾಜಕ್ಕೆ ಅರ್ಥ ಪೂರ್ಣವಾಗಿ ಕೊಡುಗೆ ನೀಡಲು ಸಾಧ್ಯವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ' ಎಂದು ತಿಳಿಸಿದರು.

ಆರಂಭದಿಂದಲೂ ಮಲಬಾರ್ ಗ್ರೂಪ್ ತನ್ನ ಸಾಮಾಜಿಕ ಕಲ್ಯಾಣ ಚಟುವಟಿಕೆಗಳ ಮೂಲಕ ಸಮಗ್ರ ಬೆಳವಣಿಗೆಗೆ ಪೂರಕವಾದ ಬದ್ಧತೆಯನ್ನು ಪ್ರದರ್ಶಿಸುತ್ತಿದೆ. 1999 ರಲ್ಲಿ ಮಲಬಾರ್ ಚಾರಿಟೆಬಲ್ ಟ್ರಸ್ಟ್(ಎಂಸಿಟಿ) ಅನ್ನು ರಚನೆ ಮಾಡಲಾಯಿತು. ಇದರ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸುವುದು ಮತ್ತು ವಿಸ್ತರಣೆ ಮಾಡುವ ಕಾರ್ಯಗಳನ್ನು ನಡೆಸಲಾಗುತ್ತಿದೆ. ಸಮೂಹ ಸಂಸ್ಥೆಯು ತನ್ನ ವಾರ್ಷಿಕ ಲಾಭದ ಶೇ.5 ರಷ್ಟು ಭಾಗವನ್ನು ಶಿಕ್ಷಣ, ಆರೋಗ್ಯ ರಕ್ಷಣೆ, ಪರಿಸರ ಸುಸ್ಥಿರತೆ ಮತ್ತು ಬಡತನ ನಿರ್ಮೂಲನೆಯನ್ನು ಒಳಗೊಂಡ ಸಿಎಸ್‌ಆರ್ ಉಪಕ್ರಮಗಳಿಗೆ ಮೀಸಲಿಡುತ್ತಿದೆ. ಇದು ದುರ್ಬಲ ವರ್ಗದ ಸಮುದಾಯಗಳ ಸಬಲೀಕರಣದ ಉನ್ನತಿಗೆ ಸಹಕಾರಿಯಾಗುತ್ತಿದೆ.

2007ರಲ್ಲಿ ಆರಂಭವಾದ ಮಲಬಾರ್ ರಾಷ್ಟ್ರೀಯ ವಿದ್ಯಾರ್ಥಿವೇತನ ಕಾರ್ಯಕ್ರಮವು ಅದರ ಸಿಎಸ್‌ಆರ್ ಚೌಕಟ್ಟಿನಡಿ ಯಲ್ಲಿ ಒಂದು ಅತ್ಯಂತ ಪ್ರಮುಖವಾದ ಉಪಕ್ರಮವಾಗಿದೆ. ಇಲ್ಲಿವರೆಗೆ ಈ ಕಾರ್ಯಕ್ರಮವನ್ನು ಬೆಂಬಲಿಸುವ ನಿಟ್ಟಿನಲ್ಲಿ 60 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದ್ದು, ಭಾರತದಾದ್ಯಂತ 95,000 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲಾಗಿದೆ ಮತ್ತು ಕರ್ನಾಟಕ ರಾಜ್ಯದ 26,066 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ 16.82 ಕೋಟಿ ರೂಪಾಯಿಗಳ ನೆರವನ್ನು ನೀಡಲಾಗಿದೆ. ವಿದ್ಯಾರ್ಥಿನಿಯರ ಶಿಕ್ಷಣದ ಮೇಲೆ ಕೇಂದ್ರೀಕರಿಸುವ ಮೂಲಕ ಮಲಬಾರ್ ಗ್ರೂಪ್ ವ್ಯಕ್ತಿಗಳನ್ನು ಮಾತ್ರವಲ್ಲದೇ ಇಡೀ ಸಮುದಾಯಗಳ ಜೀವನ ಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಈ ಮೂಲಕ ಭವಿಷ್ಯದ ಪೀಳಿಗೆಗಳು ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಸಾಧನಗಳೊಂದಿಗೆ ಸಜ್ಜುಗೊಂಡಿವೆ ಎಂಬುದನ್ನು ಖಚಿತಪಡಿಸುತ್ತದೆ.

ವಿದ್ಯಾರ್ಥಿವೇತನ ಕಾರ್ಯಕ್ರಮವಲ್ಲದೇ, ಮಲಬಾರ್ ಗ್ರೂಪ್‌ನ ಹಸಿವು ಮುಕ್ತ ಜಗತ್ತು ಯೋಜನೆಯು ದೇಶದಾದ್ಯಂತದ ದುರ್ಬಲ ವರ್ಗದವರಿಗೆ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಎನ್‌ಜಿಒಗಳು ಮತ್ತು ಸ್ವಯಂಸೇವಕರ ಪಾಲುದಾರಿಕೆಯನ್ನು ಪಡೆಯಲಾಗುತ್ತಿದೆ. ಈ ಮೂಲಕ ಹಸಿವನ್ನು ಮುಕ್ತಗೊಳಿಸುವುದು ಮತ್ತು ಎಲ್ಲರಿಗೂ ಆಹಾರ ಭದ್ರತೆಯನ್ನು ಒದಗಿಸುವ ಬದ್ಧತೆಯನ್ನು ಈ ಉಪಕ್ರಮ ಹೊಂದಿದೆ. ಪ್ರಸ್ತುತ ದೇಶದ 17 ರಾಜ್ಯಗಳ 81 ನಗರಗಳಲ್ಲಿ ಪ್ರತಿದಿನ 60,000 ಕ್ಕೂ ಅಧಿಕ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಇದರ ಜೊತೆಗೆ ಝಾಂಬಿಯಾ ದೇಶದಲ್ಲಿ ಶಾಲಾ ಮಕ್ಕಳಿಗೆ ಪ್ರತಿದಿನ 10,000 ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಗುತ್ತಿದೆ. ಮಲಬಾರ್ ಗ್ರೂಪ್ ಈ ಕಾರ್ಯಕ್ರಮವನ್ನು ಭಾರತದ 200 ಕೇಂದ್ರಗಳಲ್ಲಿ ಪ್ರತಿದಿನ 1,00,000 ಅಧಿಕ ಜನರಿಗೆ ಊಟವನ್ನು ವಿತರಣೆ ಮಾಡಲು ಕಾರ್ಯಕ್ರಮ ರೂಪಿಸಿದೆ. ಈ ಹಸಿವು ಮುಕ್ತ ಜಗತ್ತು ಯೋಜನೆಯನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಯಾದ ಥನಲ್ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಮಲಬಾರ್ ಗ್ರೂಪ್ ವೃದ್ಧ ಮಹಿಳೆಯರಿಗಾಗಿ ಗ್ರಾಂಡ್‌ಮಾ ಹೋಂ ಯೋಜನೆಯನ್ನೂ ಆರಂಭಿಸಿದೆ. ಇಲ್ಲಿ ನಿರ್ಗತಿಕ ಮಹಿಳೆಯರು, ವೃದ್ಧೆಯರಿಗೆ ಸಂಪೂರ್ಣ ಉಚಿತವಾಗಿ ಸುಸಜ್ಜಿತ ಆಶ್ರಯವನ್ನು ನೀಡಲಾಗುತ್ತಿದೆ. ಅವರಿಗೆ ಪೌಷ್ಟಿಕ ಆಹಾರ, ಔಷಧೋಪಚಾರ, ಆರೈಕೆ ಮಾಡಲಾಗುತ್ತಿದೆ. ಪ್ರಸ್ತುತ, ಬೆಂಗಳೂರು ಮತ್ತು ಹೈದ್ರಾಬಾದ್‌ನಲ್ಲಿ ಈ ಮನೆಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಮನೆಗಳನ್ನು ಕೇರಳದ ಪ್ರಮುಖ ನಗರಗಳು, ಚೆನ್ನೈ, ಕೋಲ್ಕತ್ತಾ, ದೆಹಲಿ ಮತ್ತು ಮುಂಬೈನಲ್ಲೂ ಆರಂಭಿಸುವ ಉದ್ದೇಶವನ್ನು ಹೊಂದಲಾಗಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಶಿಕ್ಷಣಕ್ಕಾಗಿ ನಾವು 12 ರಾಜ್ಯಗಳಲ್ಲಿ 581 ಮೈಕ್ರೋ-ಲರ್ನಿಂಗ್ ಸೆಂಟರ್‌ಗಳನ್ನು ಸ್ಥಾಪನೆ ಮಾಡಿದ್ದೇವೆ. ಇದುವರೆಗೆ 25,800 ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದೇವೆ.

ಸಂಸ್ಥೆಯ ಸಿಎಸ್‌ಆರ್‌ ಉಪಕ್ರಮಗಳು ದುರ್ಬಲ ವರ್ಗದ ಸಮುದಾಯಗಳಿಗೆ ವೈದ್ಯಕೀಯ ನೆರವು, ವಸತಿ ನಿರ್ಮಾಣ ಮತ್ತು ಅಗತ್ಯವಿರುವ ಹೆಣ್ಣು ಮಕ್ಕಳ ವಿವಾಹಕ್ಕೆ ಹಣಕಾಸು ನೆರವು ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳನ್ನು ನೀಡುವ ಮೂಲಕ ಈ ಸಮುದಾಯಗಳ ಜೀವನ ಮಟ್ಟವನ್ನು ಸುಧಾರಣೆ ಮಾಡುವ ಉದ್ದೇಶವನ್ನು ಹೊಂದಿದೆ. ಇಲ್ಲಿವರೆಗೆ ಮಲಬಾರ್ ಗ್ರೂಪ್ ಇಂತಹ ಅನೇಕ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳಿಗೆ 282.29 ಕೋಟಿ ರೂಪಾಯಿಗಳನ್ನು ವಿನಿಯೋಗ ಮಾಡಿದೆ. ಈ ಮೂಲಕ ಸುಸ್ಥಿರ ಅಭಿವೃದ್ಧಿಗೆ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ.

ಶಿಕ್ಷಣ ಮತ್ತು ಹಸಿವು ಸಮಸ್ಯೆಗಳಿಗೆ ಪರಿಹಾರದಂತಹ ಪ್ರಭಾವಶಾಲಿ ಉಪಕ್ರಮಗಳ ಮೇಲೆ ಮಲಬಾರ್ ಗ್ರೂಪ್‌ನ ನಿರಂತರ ಗಮನವು ಸಮುದಾಯಗಳು ಸಬಲೀಕರಣಗೊಂಡಾಗ ಮತ್ತು ಸಾಧ್ಯವಿರುವ ಎಲ್ಲಾ ರೀತಿಯಲ್ಲಿ ಬೆಂಬಲಿಸಿದಾಗ ಮಾತ್ರ ಸುಸ್ಥಿತ ಬೆಳವಣಿಗೆ ಸಾಧ್ಯ ಎಂಬುದನ್ನು ಕಂಪನಿಯು ನಂಬುತ್ತದೆ. ಈ ಗ್ರೂಪ್ ತನ್ನ ವ್ಯಾಪಾರ ಮತ್ತು ಸಾಮಾಜಿಕ ಜವಾಬ್ದಾರಿಗಳನ್ನು ವಿಸ್ತರಿಸುವುದನ್ನು ಮುಂದುವರಿಸಿಕೊಂಡು ಬರುತ್ತಿರುವುದರಿಂದ ಈ ಸಮರ್ಪಣೆಯು ಭವಿಷ್ಯದ ಎಲ್ಲಾ ಪ್ರಯತ್ನಗಳ ಹೃದಯದಲ್ಲಿ ಅಚ್ಚಳಿಯದೇ ಉಳಿಯುತ್ತದೆ ಎಂದು ಪ್ರಕಟನೆ ತಿಳಿಸಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X