Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲೋಕಾಯುಕ್ತರ ವ್ಯಾಪ್ತಿಯಲ್ಲಿ 7110...

ಲೋಕಾಯುಕ್ತರ ವ್ಯಾಪ್ತಿಯಲ್ಲಿ 7110 ಪ್ರಕರಣಗಳು ವಿಚಾರಣೆಯಾಗದೆ ಬಾಕಿ

ವಾರ್ತಾಭಾರತಿವಾರ್ತಾಭಾರತಿ3 July 2025 10:33 PM IST
share
ಲೋಕಾಯುಕ್ತರ ವ್ಯಾಪ್ತಿಯಲ್ಲಿ 7110 ಪ್ರಕರಣಗಳು ವಿಚಾರಣೆಯಾಗದೆ ಬಾಕಿ

ಬೆಂಗಳೂರು: 2023ರ ಎಪ್ರಿಲ್‍ನಿಂದ 2025ರ ಜೂನ್ ಅಂತ್ಯದವರೆಗಿನ ರಾಜ್ಯ ಲೋಕಾಯುಕ್ತರ ವ್ಯಾಪ್ತಿಗೆ ಒಳಪಟ್ಟ 7110 ಪ್ರಕರಣಗಳು ವಿಚಾರಣೆಯಾಗದೆ ಬಾಕಿ ಉಳಿದಿವೆ ಎಂದು ಲೋಕಾಯುಕ್ತ ಸಂಸ್ಥೆ ತಿಳಿಸಿದೆ.

ಗುರುವಾರ ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಸಂಸ್ಥೆಯು, ಲೋಕಾಯುಕ್ತರ ವ್ಯಾಪ್ತಿಯಲ್ಲಿ 3429 ಪ್ರಕರಣಗಳು ವಿಲೇವಾರಿಗೊಂಡಿವೆ. ಉಪಲೋಕಾಯುಕ್ತ-1ರ ವ್ಯಾಪ್ತಿಗೆ ಸಂಬಂಧಿಸಿದಂತೆ 6927 ಪ್ರಕರಣಗಳು ಬಾಕಿ ಉಳಿದಿದ್ದು, 5106 ಪ್ರಕರಣಗಳು ವಿಲೇವಾಗಿದೆ ಎಂದು ಹೇಳಿದೆ.

ಉಪಲೋಕಾಯುಕ್ತ-2ರ ವ್ಯಾಪ್ತಿಗೆ ಸಂಬಂಧಿಸಿದಂತೆ 2024ರ ಜುಲೈನಿಂದ 2025ರ ಜೂನ್ ಅಂತ್ಯದವರೆಗೆ 8647 ಪ್ರಕರಣಗಳು ವಿಚಾರಣೆಯಿಲ್ಲದೆ ಬಾಕಿ ಉಳಿದಿದ್ದು, 3080 ಪ್ರಕರಣಗಳು ವಿಲೇವಾರಿಗೊಂಡಿವೆ. ಲೋಕಾಯುಕ್ತ ಸಂಸ್ಥೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರನ್ನು ಹೇಳಿಕೊಂಡು, ಹಣ ವಸೂಲಿ ಮಾಡುತ್ತಿರುವ ಕುರಿತಂತೆ ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ ಹಾಗೂ ಮಾಹಿತಿ ಬಂದ ತಕ್ಷಣವೇ ಅಂತಹವರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಒಟ್ಟು 41 ಪ್ರಕರಣಗಳು ದಾಖಲಾಗಿದ್ದು, ತನಿಖೆಯು ಪ್ರಗತಿಯಲ್ಲಿದೆ ಎಂದು ಲೋಕಾಯುಕ್ತ ಸಂಸ್ಥೆ ತಿಳಿಸಿದೆ.

ಉಪಲೋಕಾಯುಕ್ತ-1ರಲ್ಲಿ ಹಿಂದಿನ ಎರಡು ವರ್ಷಗಳಲ್ಲಿ 324 ಸ್ವಯಂ ಪ್ರೇರಿತ ದೂರು ಪ್ರಕರಣಗಳನ್ನು ದಾಖಲಿಸಿದ್ದು, ಪ್ರಸ್ತುತ 55 ಪ್ರಕರಣಗಳು ಮುಕ್ತಾಯವಾಗಿದ್ದು, ಇನ್ನುಳಿದ ಪ್ರಕರಣಗಳು ಪ್ರಗತಿಯಲ್ಲಿವೆ. ಉಪಲೋಕಾಯುಕ್ತ-2ರಲ್ಲಿ 170 ಸ್ವಯಂ ಪ್ರೇರಿತ ದೂರು ಪ್ರಕರಣಗಳನ್ನು ದಾಖಲಿಸಿದ್ದು, ಪ್ರಸ್ತುತ ಪ್ರಗತಿಯಲ್ಲಿವೆ ಎಂದು ಲೋಕಾಯುಕ್ತ ಸಂಸ್ಥೆ ವಿವರಿಸಿದೆ.

ಭ್ರಷ್ಟಾಚಾರ ನಿಗ್ರಹ ದಳ ರದ್ದುಗೊಂಡ ನಂತರ ಭ್ರಷ್ಟಾಚಾರ ನಿಗ್ರಹ ದಳದಿಂದ ಈ ಸಂಸ್ಥೆಗೆ ವರ್ಗಾವಣೆಗೊಂಡ 2159 ಪ್ರಕರಣಗಳೊಂದಿಗೆ 2022ರಿಂದ ಈವರೆಗೂ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ವಿಭಾಗದಲ್ಲಿ 205 ದಾಳಿ ಪ್ರಕರಣಗಳು, 645 ಟ್ರ್ಯಾಪ್ ಪ್ರಕರಣಗಳು, 77 ಇತರೆ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಎಲ್ಲ ಜಿಲ್ಲಾ ಸರಕಾರಿ ಕಚೇರಿಗಳಲ್ಲಿ ಸಂಬಂಧಪಟ್ಟ ಜಿಲ್ಲಾ ಲೋಕಾಯುಕ್ತ ಕಚೇರಿಯ ನಾಮಫಲಕ, ಸಹಾಯವಾಣಿ ಸಂಖ್ಯೆ ಹಾಗೂ ಯಾವ ಯಾವ ಸಂದರ್ಭಗಳಲ್ಲಿ ದೂರು ಅರ್ಜಿ ಸಲ್ಲಿಸಬಹುದು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗಿದೆ ಎಂದು ಲೋಕಾಯುಕ್ತ ನಿಬಂಧಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X