Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 1 ಪೈಸೆಯೂ ಲಂಚವಿಲ್ಲದೆ ಸಾವಿರ ಮಂದಿಗೆ...

1 ಪೈಸೆಯೂ ಲಂಚವಿಲ್ಲದೆ ಸಾವಿರ ಮಂದಿಗೆ ಉದ್ಯೋಗ : ಸಚಿವ ಕೃಷ್ಣಭೈರೇಗೌಡ

ನೂತನವಾಗಿ ಆಯ್ಕೆಯಾಗಿರುವ 1 ಸಾವಿರ ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ

ವಾರ್ತಾಭಾರತಿವಾರ್ತಾಭಾರತಿ29 April 2025 7:14 PM IST
share
1 ಪೈಸೆಯೂ ಲಂಚವಿಲ್ಲದೆ ಸಾವಿರ ಮಂದಿಗೆ ಉದ್ಯೋಗ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ 1ಸಾವಿರ ಮಂದಿ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಕ್ಕೆ ಒಂದೇ ಹಂತದಲ್ಲಿ ಆದೇಶ ಹೊರಡಿಸಿದ್ದು, ಒಂದು ಪೈಸೆಯೂ ಲಂಚಕ್ಕೆ ಆಸ್ಪದ ನೀಡದೆ ಪಾರದರ್ಶಕವಾಗಿ ನೇಮಕ ಮಾಡಲಾಗಿದೆ ಎಂದು ಹೇಳಲು ನನಗೆ ಸಂತಸವಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1 ಸಾವಿರ ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ, ಲ್ಯಾಪ್‍ಟಾಪ್ ಹಾಗೂ ಕಂದಾಯ ಇಲಾಖೆಯ ಎರಡು ವರ್ಷದ ʼಸಾಧನೆಯ ಹಾದಿʼ ಪುಸ್ತಕ ಬಿಡುಗಡೆ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಇತಿಹಾಸದಲ್ಲೇ ಏಕ ಕಾಲದಲ್ಲಿ ಸಾವಿರ ಜನರ ನೇಮಕ ಇದೆ ಮೊದಲು. ಇದೊಂದು ದಾಖಲೆ. ಈ ಹಿಂದೆ ಪಿಯುಸಿ ಅಂಕದ ಆಧಾರದಲ್ಲಿ ಆಯಾ ಜಿಲ್ಲೆಯಲ್ಲಿ ಸೀಮಿತ ಸ್ಥಾನಗಳಿಗೆ ನೇಮಕಾತಿ ಆಗುತ್ತಿತ್ತು. ಆದರೆ, ಹುದ್ದೆ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು ಜಿಲ್ಲೆಗಳಲ್ಲಿ ಪಾರದರ್ಶಕತೆ ಇಲ್ಲ ಎಂಬ ದೂರು ಇತ್ತು. ಹೀಗಾಗಿ ನಮ್ಮ ಸರಕಾರ ಬಂದ ಮೇಲೆ ಇಡೀ ರಾಜ್ಯದಲ್ಲಿ ಒಂದೇ ಬಾರಿ ಪಾರದರ್ಶಕವಾಗಿ ನೇಮಕವಾಗಬೇಕು, ಎಲ್ಲ ಜಿಲ್ಲೆಯವರಿಗೂ ಸಮಾನ ಸವಕಾಶ ಸಿಗಬೇಕು ಎಂಬ ದೃಷ್ಟಿಯಲ್ಲಿ ಕ್ರಮವಹಿಸಲಾಗಿತ್ತು ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಒಂದೇ ಬಾರಿ ಅರ್ಜಿ ಕರೆದು, ಒಂದೇ ಬಾರಿ ಪರೀಕ್ಷೆ ನಡೆಸಿ ಮಧ್ಯವರ್ತಿಗಳ ಅವಕಾಶ ಇಲ್ಲದೆ ನೇಮಕಾತಿ ಮಾಡಿದ್ದೇವೆ. ಈ ಹುದ್ದೆಗೆ 6,33,916 ಜನ ಅರ್ಜಿ ಸಲ್ಲಿಸಿದ್ದರು. ಭಾಗಶಃ ಕರ್ನಾಟಕ ಬೇರೆ ಯಾವುದೇ ನೇಮಕಾತಿಗೆ ಇಷ್ಟು ಅರ್ಜಿ ಬಂದಿಲ್ಲ. ಇಲ್ಲಿ ಕೆಲಸ ಗಿಟ್ಟಿಸಿದವರು ಎಷ್ಟು ಪುಣ್ಯವಂತರೆಂದರೆ ಅರ್ಜಿ ಸಲ್ಲಿಸಿದವರ ಪೈಕಿ ಶೇ. 0.0016 ಜನ ಮಾತ್ರ ಆಯ್ಕೆಯಾಗಿದ್ದೀರಿ ಎಂದು ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿ ಕೆಲಸಕ್ಕೆ ಶಿಫಾರಸು ಮಾಡುವಂತೆ ಏಳೆಂಟು ಜನ ನನ್ನ ಬಳಿಯೂ ಬಂದಿದ್ದರು. ಆದರೆ, ನಾನೇ ಮನಸ್ಸು ಮಾಡಿದರೂ ಶಿಫಾರಸು ಮಾಡಲು ಸಾಧ್ಯವಾಗದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯ ಉತ್ತರ ಪತ್ರಿಕೆ ತಿದ್ದುವುದು ಸೇರಿದಂತೆ ಯಾವ ಅಕ್ರಮ ಚಟುವಟಿಕೆಗಳಿಗೂ ಆಸ್ಪದ ಇಲ್ಲದಂತೆ ಪರೀಕ್ಷೆ ನಡೆಸಲಾಗಿದೆ. ಇಲ್ಲಿ ಕೆಲಸ ಗಿಟ್ಟಿಸಿದವರು ಹುದ್ದೆಗಾಗಿ ಒಂದು ಪೈಸೆಯಾದರೂ ಯಾರಿಗಾದರೂ ಲಂಚ ಕೊಟ್ಟಿದ್ದೀರ . ಇದೇ ಕಾರಣಕ್ಕೆ ಈ ಬಗ್ಗೆ ಈವರೆಗೆ ಒಂದೂ ತಕರಾರು ಬಂದಿಲ್ಲ. ಒಂದು ಪೈಸೆಯೂ ಲಂಚ ಇಲ್ಲದೆ ಹುದ್ದೆ ನೀಡಿದ್ದೇವೆ ಎಂದು ಹೇಳಲು ನನಗೂ ಸಂತೋಷವಾಗುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು

ಈ ಕಾರ್ಯಕ್ರಮವನ್ನು ಸ್ಥಳದ ಅಭಾವದ ನೆಪವೊಡ್ಡೆ ಬೇರೆಡೆ ಸ್ಥಳಾಂತರಿಸಲು ಅಧಿಕಾರಿಗಳು ಸೂಚಿಸಿದರು. ಆದರೆ, ನಾನು ಈ ಸಿಎಂ ಅವರ ಕೈಯಿಂದಲೇ ಎಲ್ಲ ಅಧಿಕಾರಿಗಳಿಗೂ ವಿಧಾನಸೌಧದಲ್ಲೇ ಆದೇಶ ಪ್ರತಿ ನೀಡಬೇಕು ಎಂದು ಹೇಳಿ ಸಿದ್ದರಾಮಯ್ಯನವರನ್ನು ಒಪ್ಪಿಸಿದೆ. ಮೊದಲ ಬಾರಿಗೆ ಸಾವಿರ ಜನ ಸರಕಾರಿ ಸೇವೆಗೆ ಕಾಲಿಡುತ್ತಿದ್ದಾರೆ. ಅವರು ಮೊದಲ ಸಲ ವಿಧಾನಸೌಧಕ್ಕೆ ಕಾಲಿಟ್ಟರೆ ಅವರಿಗೆ ವಿಧಾನಸೌಧ ಕಟ್ಟಿದ ಆಶಯ ಅರ್ಥವಾಗುತ್ತೆ, ಆಗಲಾದರೂ ಅವರು ಜನಪರ ಕೆಲಸ ಮಾಡುತ್ತಾರೆ ಎಂಬ ಉದ್ದೇಶದಿಂದಲೇ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಲಾಗಿದೆ ಎಂದರು.

ವಿಧಾನಸೌಧದಲ್ಲಿ ಆದೇಶ ಪ್ರತಿ ಸ್ವೀಕರಿಸುತ್ತಿರುವ ಹೊಸ ಉದ್ಯೋಗಿಗಳಿಗೂ ಈ ಸಂದರ್ಭದಲ್ಲಿ ಅರಿವು ಇರಬೇಕು ಎಂಬ ಕಾರಣಕ್ಕೆ ಆದೇಶ ಪ್ರತಿಯನ್ನು ಸಿದ್ದರಾಮಯ್ಯ ಅವರ ಕೈಯಿಂದ ನೀಡಲಾಗುತ್ತಿದೆ. ಬಹುತೇಕರು ಸರಕಾರ ಕೆಲಸ ಗಿಟ್ಟಿಸಿದ ಕುಟುಂಬದ ಮೊದಲಿಗರಾಗಿದ್ದಾರೆ. ಈ ಹುದ್ದೆಗೆ ನೀವು ಋಣ ತೀರಿಸಬೇಕು ಎಂತಿದ್ದರೆ ಜನರ ಪ್ರಮಾಣಿಕ ಸೇವೆ ಮಾಡುವ ಮೂಲಕ ಈ ಋಣ ತೀರಿಸಿ ಎಂದು ಕರೆ ನೀಡಿದರು.

ದಿನ ಬೆಳಗಾದರೆ ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿಗಳಿಗೆ ಟಪಾಲು ಕೊಡೋದು ತಗೋಳೋದೆ ಅವರಿಗೆ ಕೆಲಸವಾಗಿದೆ. ಕೆಲಸ ಮಾಡೋದು ಬಿಟ್ಟು ಓಡಾಡೋದರಲ್ಲೇ ಸಮಯ ವ್ಯರ್ಥವಾಗುತ್ತಿದೆ. ಈ ಟಪಾಲು ವ್ಯವಸ್ಥೆ 200 ವರ್ಷಗಳಷ್ಟು ಹಳೆಯದು. ಈ ವ್ಯವಸ್ಥೆಗೆ ಏನಾದರೂ ಅರ್ಥ ಇದೆಯಾ? ಇದು ಎಷ್ಟಯ ಅನಗತ್ಯ ಹೊರೆ. ಈ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‍ಟಾಪ್ ನೀಡಲಾಗುತ್ತಿದೆ ಎಂದು ಉಲ್ಲೇಖಿಸಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ವಲಯ ಆಯುಕ್ತರಾದ ಆದಿತ್ಯ ಆಮ್ಲನ್ ಬಿಶ್ವಾಸ್, ಕಂದಾಯ ಆಯುಕ್ತ ಸುನೀಲ್ ಕುಮಾರ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X