Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೆ.1ರಿಂದ ಅ.1ರ ವರೆಗೆ ʼಬಸವ ಸಂಸ್ಕೃತಿ...

ಸೆ.1ರಿಂದ ಅ.1ರ ವರೆಗೆ ʼಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ13 July 2025 12:07 AM IST
share
ಸೆ.1ರಿಂದ ಅ.1ರ ವರೆಗೆ ʼಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

ಬೆಂಗಳೂರು : ರಾಜ್ಯ ಸರಕಾರವು ಬಸವಣ್ಣ ಅವರನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರ ವರೆಗೆ ಒಂದು ತಿಂಗಳು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ `ಬಸವ ಸಂಸ್ಕೃತಿ ಅಭಿಯಾನ’ ನಡೆಸಲು ತೀರ್ಮಾನಿಸಿದೆ.

ಶನಿವಾರ ಈ ಸಂಬಂಧವಾಗಿ ಒಕ್ಕೂಟದಲ್ಲಿರುವ ಸ್ವಾಮೀಜಿಗಳು ಲಿಂಗಾಯತ ಮುಖಂಡ ಮತ್ತು ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಸದಾಶಿವನಗರದ ಮನೆಯಲ್ಲಿ ಚರ್ಚೆ ನಡೆಸಿದ್ದಾರೆ. ಒಕ್ಕೂಟದ ಪರವಾಗಿ ಭಾಲ್ಕಿ ಮಠದ ಶ್ರೀಬಸವಲಿಂಗ ಪಟ್ಟದ್ದೇವರು, ಅಥಣಿಯ ಶ್ರೀಚೆನ್ನಬಸವ ಸ್ವಾಮೀಜಿ, ನೆಲಮಂಗಲದ ಪವಾಡ ಶ್ರೀಮಠದ ಶ್ರೀಸಿದ್ಧಲಿಂಗ ಸ್ವಾಮೀಜಿ, ಗೊರವಣ್ಣ ದೇವರ ಮಠದ ನಂಜುಂಡ ಸ್ವಾಮೀಜಿ, ನಿಜಗುಣ ಮಠದ ಇಮ್ಮಡಿ ನಿಜಗುಣ ಶ್ರೀಗಳು, ಬಸವ ಧರ್ಮಪೀಠದ ಬಸವಯೋಗಿ ಸ್ವಾಮೀಜಿ, ಚನ್ನಪಟ್ಟಣದ ಬೇಗೂರು ಮಠದ ಮೃತ್ಯುಂಜಯ ಸ್ವಾಮೀಜಿ ಸಚಿವರ ನಿವಾಸಕ್ಕೆ ಆಗಮಿಸಿದ್ದರು.

ಬಳಿಕ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಈ ಅಭಿಯಾನವು ಬಸವಣ್ಣನ ಜನ್ಮಸ್ಥಳವಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಚಾಲನೆ ಕಾಣಲಿದೆ. ಬಸವರಥವು ಎಲ್ಲ ಜಿಲ್ಲೆಗಳಲ್ಲೂ ಸಂಚರಿಸಿ ಅ.1ರಂದು ಬೆಂಗಳೂರನ್ನು ತಲುಪಲಿದೆ. ಅ.5ರಂದು ಲಕ್ಷಾಂತರ ಲಿಂಗಾಯತ ಅನುಯಾಯಿಗಳನ್ನು ಸೇರಿಸಿ, ಬೆಂಗಳೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ಏರ್ಪಡಿಸಲಾಗುವುದು. ಇಲ್ಲಿ ಬಸವಣ್ಣನನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು. ಆದರೆ, ಸಮಾರೋಪದ ಸ್ಥಳವಿನ್ನೂ ನಿಗದಿಯಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರ ಕಾಲಾವಕಾಶ ನೋಡಿಕೊಂಡು ಇದನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಅಭಿಯಾನದಲ್ಲಿ ಪ್ರತಿದಿನವೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಜತೆ ಸಂವಾದ, ಸಂಜೆ ಪಾದಯಾತ್ರೆ, ವಚನ ಸಂಗೀತ, ಸ್ವಾಮೀಜಿಗಳು ಮತ್ತು ಆಹ್ವಾನಿತ ಉಪನ್ಯಾಸಕರ ಭಾಷಣ, ರಾತ್ರಿಹೊತ್ತು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯರು ಬರೆದಿರುವ `ಜಂಗಮ ದೆಡೆಗೆ’ ನಾಟಕ ಪ್ರದರ್ಶನ ನಡೆಯಲಿವೆ. ಇದಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಬಸವದಳ, ಬಸವ ಸಮಿತಿ, ಬಸವ ಕೇಂದ್ರ, ಕದಳಿ ಮಹಿಳಾ ವೇದಿಕೆ ಮುಂತಾದ ಬಸವಪರ ಸಂಘಟನೆಗಳು ಕೈಜೋಡಿಸಿವೆ ಎಂದು ಒಕ್ಕೂಟದ ಅಧ್ಯಕ್ಷ ಶ್ರೀ ಬಸವಲಿಂಗ ಪಟ್ಟದ್ದೇವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X